ಈ ನಡುವೆ, ನ್ಯಾಯಪೀಠಕ್ಕೆ ವರದಿ ಸಲ್ಲಿಸಿರುವ ಕೇಂದ್ರ ಅಂತರ್ಜಲ ಮಂಡಳಿ, ‘ಕರ್ನಾಟಕದಲ್ಲಿ 1,70,647 ಚದರ ಕಿ.ಮೀ. ಅಂತರ್ಜಲ ಮರುಪೂರಣಕ್ಕೆ ಯೋಗ್ಯವಾದ ಪ್ರದೇಶವಿದೆ. ಆದರೆ, 39,352.66 ಚದರ ಕಿ.ಮೀ. ಪ್ರದೇಶದಲ್ಲಿ ಅಂತರ್ಜಲದ ಅತಿಯಾದ ಬಳಕೆಯಾಗಿದೆ. 6,580 ಪ್ರದೇಶದಲ್ಲಿ ಸಮಸ್ಯೆ ಗಂಭೀರವಾಗಿದೆ. ಒಟ್ಟಾರೆಯಾಗಿ, ರಾಜ್ಯದ ಎಲ್ಲ ಕಡೆಗಳಲ್ಲಿ ಅಂತರ್ಜಲದ ಹೊರೆ ತೆಗೆಯುವಿಕೆ ಪ್ರಮಾಣ ಗಣನೀಯವಾಗಿ ಹೆಚ್ಚಿದೆ’ ಎಂದು ಹೇಳಿದೆ.