ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ನ (ಎನ್ಐಎಎಸ್) ಪ್ರೊ. ಸುಪ್ರಿಯಾ ರಾಯ್ ಚೌಧರಿ, ‘ಆರ್ಥಿಕ ಅಭಿವೃದ್ಧಿಗಿಂತಲೂ ವ್ಯಕ್ತಿಗತ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಬೇಕು. ಆರ್ಥಿಕ ಅಭಿವೃದ್ಧಿಯಲ್ಲಿ ಕರ್ನಾಟಕ ಉತ್ತಮ ಸಾಧನೆ ಮಾಡುತ್ತಿದೆ. ಆದರೆ ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ರಾಜ್ಯದ ಸಾಧನೆ ಅಷ್ಟೇನು ಉತ್ತಮವಾಗಿಲ್ಲ’ ಎಂದು ಅಭಿಪ್ರಾಯಪಟ್ಟರು.