‘ಬಾಂಬ್ ಸ್ಫೋಟದ ಆರೋಪಿಗಳು, ಹಲವು ದಿನಗಳಿಂದ ಸಂಚು ರೂಪಿಸಿದ್ದರು. ಇದಕ್ಕೆ ಹಲವರು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಾಯ ಮಾಡಿದ್ದರು. ಇದೀಗ, ಎಲ್ಲರನ್ನೂ ಪತ್ತೆ ಮಾಡಬೇಕಿದೆ. ಪ್ರಕರಣದ ತನಿಖೆಯ ಪ್ರಗತಿಯನ್ನು ನ್ಯಾಯಾಲಯಕ್ಕೆ ತಿಳಿಸಿ, ಇಬ್ಬರನ್ನೂ ಕಸ್ಟಡಿಗೆ ನೀಡುವಂತೆ ಕೋರಲಾಗಿತ್ತು. ಮನವಿ ಪುರಸ್ಕರಿಸಿದ ನ್ಯಾಯಾಲಯ, ಇಬ್ಬರನ್ನೂ ಮೇ 4ರಿಂದ ಮೇ 12ರವರೆಗೆ ಕಸ್ಟಡಿಗೆ ಒಪ್ಪಿಸಿದೆ’ ಎಂದು ಎಸ್ಐಟಿ ಮೂಲಗಳು ಹೇಳಿವೆ.