<p><strong>ಬೆಂಗಳೂರು:</strong> ಗ್ರಾಮೀಣಾಭಿವೃದ್ಧಿ ಹಾಗೂ ಲೋಕೋಪಯೋಗಿ ಇಲಾಖೆ ನಡುವೆ ಸಮನ್ವಯತೆ ಕೊರತೆಯಿಂದಾಗಿ ಸುಸ್ಥಿರ ಅಭಿವೃದ್ಧಿ ಸೂಚ್ಯಂಕದಲ್ಲಿ ರಾಜ್ಯ 40ನೇ ಸ್ಥಾನಕ್ಕೆ ಕುಸಿದಿದೆ ಎಂದು ಯೋಜನಾ ಮಂಡಳಿ ಉಪಾಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ ಬುಧವಾರ ತಿಳಿಸಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿ, ‘ವಿವಿಧ ಇಲಾಖೆಗಳು ಸಮನ್ವಯತೆ ಸಾಧಿಸಿದರೆ ಅಭಿವೃದ್ಧಿಯಲ್ಲಿ ರಾಜ್ಯ ಮತ್ತಷ್ಟು ಎತ್ತರಕ್ಕೆ ಏರಬಹುದು. ಸಮನ್ವಯ ತರಲು ಪ್ರಯತ್ನಿಸಲಾಗುವುದು’ ಎಂದು ಹೇಳಿದರು.</p>.<p>‘ಸೂಕ್ತ ರಸ್ತೆಗಳಿಲ್ಲದೆ ರಾಜ್ಯದಲ್ಲಿ 4,600 ಹಳ್ಳಿಗಳಲ್ಲಿ ಬಸ್ಗಳು ಸಂಚರಿಸುತ್ತಿಲ್ಲ. ಅಂತಹ ಹಳ್ಳಿಗಳಲ್ಲಿ ಸೂಕ್ತ ರಸ್ತೆ ನಿರ್ಮಿಸುವಂತೆ ಸರ್ಕಾರಕ್ಕೆ ಸಲಹೆ ಮಾಡಿದ್ದೇನೆ. ಮೂಲ ಸೌಕರ್ಯ ಕಲ್ಪಿಸಿದ ನಂತರ ಬಸ್ ಸಂಚಾರಕ್ಕೆ ಸೂಚಿಸಲಾಗುವುದು’ ಎಂದರು.</p>.<p>‘ಮಹಿಳೆಯರು ಹಾಗೂ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣ ಶೇ 2ರಿಂದ 4ರಷ್ಟು ಇದೆ. ದೌರ್ಜನ್ಯ ತಡೆಗಟ್ಟಬೇಕಾದರೆ ಶಿಕ್ಷೆ ವಿಧಿಸುವ ಪ್ರಮಾಣದಲ್ಲೂ ಹೆಚ್ಚಳವಾಗಬೇಕು. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು. ಈ ಬಗ್ಗೆ ಕಾಯ್ದೆಗೆ ಸರ್ಕಾರಕ್ಕೆ ಸಲಹೆ ಮಾಡಿದ್ದೇನೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಗ್ರಾಮೀಣಾಭಿವೃದ್ಧಿ ಹಾಗೂ ಲೋಕೋಪಯೋಗಿ ಇಲಾಖೆ ನಡುವೆ ಸಮನ್ವಯತೆ ಕೊರತೆಯಿಂದಾಗಿ ಸುಸ್ಥಿರ ಅಭಿವೃದ್ಧಿ ಸೂಚ್ಯಂಕದಲ್ಲಿ ರಾಜ್ಯ 40ನೇ ಸ್ಥಾನಕ್ಕೆ ಕುಸಿದಿದೆ ಎಂದು ಯೋಜನಾ ಮಂಡಳಿ ಉಪಾಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ ಬುಧವಾರ ತಿಳಿಸಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿ, ‘ವಿವಿಧ ಇಲಾಖೆಗಳು ಸಮನ್ವಯತೆ ಸಾಧಿಸಿದರೆ ಅಭಿವೃದ್ಧಿಯಲ್ಲಿ ರಾಜ್ಯ ಮತ್ತಷ್ಟು ಎತ್ತರಕ್ಕೆ ಏರಬಹುದು. ಸಮನ್ವಯ ತರಲು ಪ್ರಯತ್ನಿಸಲಾಗುವುದು’ ಎಂದು ಹೇಳಿದರು.</p>.<p>‘ಸೂಕ್ತ ರಸ್ತೆಗಳಿಲ್ಲದೆ ರಾಜ್ಯದಲ್ಲಿ 4,600 ಹಳ್ಳಿಗಳಲ್ಲಿ ಬಸ್ಗಳು ಸಂಚರಿಸುತ್ತಿಲ್ಲ. ಅಂತಹ ಹಳ್ಳಿಗಳಲ್ಲಿ ಸೂಕ್ತ ರಸ್ತೆ ನಿರ್ಮಿಸುವಂತೆ ಸರ್ಕಾರಕ್ಕೆ ಸಲಹೆ ಮಾಡಿದ್ದೇನೆ. ಮೂಲ ಸೌಕರ್ಯ ಕಲ್ಪಿಸಿದ ನಂತರ ಬಸ್ ಸಂಚಾರಕ್ಕೆ ಸೂಚಿಸಲಾಗುವುದು’ ಎಂದರು.</p>.<p>‘ಮಹಿಳೆಯರು ಹಾಗೂ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣ ಶೇ 2ರಿಂದ 4ರಷ್ಟು ಇದೆ. ದೌರ್ಜನ್ಯ ತಡೆಗಟ್ಟಬೇಕಾದರೆ ಶಿಕ್ಷೆ ವಿಧಿಸುವ ಪ್ರಮಾಣದಲ್ಲೂ ಹೆಚ್ಚಳವಾಗಬೇಕು. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು. ಈ ಬಗ್ಗೆ ಕಾಯ್ದೆಗೆ ಸರ್ಕಾರಕ್ಕೆ ಸಲಹೆ ಮಾಡಿದ್ದೇನೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>