ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು | ಆರ್‌.ಟಿ.ನಗರದ ಸುಹೇಲ್ ಮನೆಯಲ್ಲಿ ಸೇರುತ್ತಿದ್ದ ಶಂಕಿತರು

Published 19 ಜುಲೈ 2023, 7:16 IST
Last Updated 19 ಜುಲೈ 2023, 7:16 IST
ಅಕ್ಷರ ಗಾತ್ರ

ಬೆಂಗಳೂರು: ಆರ್‌.ಟಿ.ನಗರದಲ್ಲಿರುವ ಸುಹೇಲ್ ಮನೆಯಲ್ಲಿ ಐವರು ಆರೋಪಿಗಳು ನಿತ್ಯ ಸಂಜೆ ಸೇರಿಕೊಂಡು ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದರು.‌ ನಗರದ ಹತ್ತು ಕಡೆ ಕೃತ್ಯ ಎಸಗಲು ಯೋಜಿಸಿದ್ದರು ಎಂದು ಪೊಲೀಸರು ಹೇಳಿದರು.

ಈ ವಿಚಾರವು ಸುಹೇಲ್ ತಂದೆಗೆ ತಿಳಿದಿದ್ದರೂ ಪೊಲೀಸರಿಗೆ ಮಾಹಿತಿ ನೀಡಿರಲಿಲ್ಲ. ಕೆಲವು ಪೋಷಕರನ್ನು ವಿಚಾರಣೆಗೆ ಕರೆಸುವ ಸಾಧ್ಯತೆಯಿದೆ.

ಮದನಿ ಯಾರು?

ಐವರು ಶಂಕಿತರಿಗೆ ಪ್ರೇರಣೆ ನೀಡಿದ್ದ ಟಿ.ನಾಸೀರ್ 2008ರಲ್ಲಿ ಬೆಂಗಳೂರಿನಲ್ಲಿ ‌ನಡೆದಿದ್ದ ಸರಣಿ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ. ಆಗಿನಿಂದಲೂ ಈತ ಜೈಲಿನಲ್ಲಿ‌ ಇದ್ದಾನೆ. ಕೇರಳದ ಅಬ್ದುಲ್ ನಾಸೀರ್ ಮದನಿ ಸಹಚರ ಟಿ. ನಾಸೀರ್. ಈತ ಲಷ್ಕರಿ- ಇ- ತೊಯ್ಬಾ ಸಂಘಟನೆಗೆ ಸೇರಿದ್ದಾನೆ. ಅದೇ ಸಂಘಟನೆಗೆ ಸೇರುವಂತೆ ಐವರಿಗೆ ಪ್ರೇರಣೆ ನೀಡಿದ್ದಾನೆ.

ಇದನ್ನು ಓದಿ: ಬೆಂಗಳೂರು | ಶಂಕಿತ ಉಗ್ರರಿಗೆ ಪರಪ್ಪನ ಅಗ್ರಹಾರ ಜೈಲೇ 'ತರಬೇತಿ ಕ್ಯಾಂಪಸ್'!

ಇದನ್ನು ಓದಿ: ಉಗ್ರರ ಟಾರ್ಗೆಟ್ ಬೆಂಗಳೂರು: ಸ್ಫೋಟಕ, ಶಸ್ತ್ರಾಸ್ತ್ರ ಸಹಿತ ಐವರು ಶಂಕಿತ ಉಗ್ರರ ಬಂಧನ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT