ಸೋಮವಾರ ಬೆಳಿಗ್ಗೆ ಕಲಾಪ ಸಲಹಾ ಸಮಿತಿ ಸಭೆ ಸೇರಿದಾಗ ಯಡಿಯೂರಪ್ಪ ಅವರು, ‘ಕೋವಿಡ್ ಹರಡುತ್ತಿದ್ದು, ಹಲವು ಶಾಸಕರು ಕೋವಿಡ್ ಪೀಡಿತರಾಗುತ್ತಿದ್ದಾರೆ. ಮೂರು ದಿನಗಳಿಗೆ ಮುಗಿಸೋಣ’ ಎಂದು ಪ್ರಸ್ತಾವ ಮುಂದಿಟ್ಟರು. ಆದರೆ, ವಿರೋಧ ಪಕ್ಷಗಳು ಇದನ್ನು ಒಪ್ಪಿಕೊಳ್ಳಲಿಲ್ಲ. ಮಸೂದೆಗಳನ್ನು ಮಂಡಿಸುವುದಾದರೆ ಮೂರು ದಿನಗಳಿಗೆ ಮುಗಿಸುವುದು ಬೇಡ. ವಿಸ್ತೃತವಾಗಿ ಚರ್ಚೆ ನಡೆಸಲೇಬೇಕು. ಮಸೂದೆ ಮಂಡಿಸದಿದ್ದರೆ ಮೂರು ದಿನ ಗಳಿಗೆ ಮುಗಿಸಿ ಎಂದು ಸಿದ್ದರಾಮಯ್ಯ ಪ್ರತಿಪಾದಿಸಿದರು.