ಬಿಜೆಪಿಯ ಎಸ್.ರುದ್ರೇಗೌಡರ ಪ್ರಶ್ನೆಗೆ ಉತ್ತರಿಸಿದ ಅವರು, ಎಂಪಿಎಂ ಪುನಶ್ಚೇತನ ಅಸಾಧ್ಯ ಎಂದು ನಿರ್ಧರಿಸಿ, ಹಲವು ವರ್ಷಗಳ ಹಿಂದೆಯೇ ಉತ್ಪಾದನೆ ಸ್ಥಗಿತಗೊಳಿಸಲಾಗಿತ್ತು. ಖಾಸಗಿ ಕಂಪನಿಗಳಿಗೆ ಗುತ್ತಿಗೆ ಆಧಾರದಲ್ಲಿ ನೀಡುವ ಪ್ರಕ್ರಿಯೆಗಳಿಗೆ ನಿರೀಕ್ಷಿತ ಫಲ ದೊರೆಯಲಿಲ್ಲ. ಎಂಪಿಎಂ ನೆಡು ತೋಪುಗಳಲ್ಲಿ ನೀಲಗಿರಿ ಬೆಳೆಯಲು ಹಾಗೂ ಹೊಣೆಗಾರಿಕೆ ಇಲ್ಲದ ಕಾರ್ಯ ಚಟುವಟಿಕೆಗಳ ಷರತ್ತನ್ನು ಕೆಲ ಕಂಪನಿಗಳು ವಿಧಿಸಿದ್ದ ಕಾರಣ ಹಿನ್ನಡೆಯಾಯಿತು ಎಂದರು.