ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಪಿಎಂ ಪುನರಾರಂಭಕ್ಕೆ ಹಲವು ವಿಘ್ನ: ಸಚಿವ ಎಂ.ಬಿ.ಪಾಟೀಲ

Published 20 ಫೆಬ್ರುವರಿ 2024, 16:26 IST
Last Updated 20 ಫೆಬ್ರುವರಿ 2024, 16:26 IST
ಅಕ್ಷರ ಗಾತ್ರ

ಬೆಂಗಳೂರು: ಭದ್ರಾವತಿಯ ಮೈಸೂರು ಕಾಗದ ಕಾರ್ಖಾನೆ (ಎಂಪಿಎಂ) ಪುನರಾರಂಭಕ್ಕೆ ಸರ್ಕಾರ ಬದ್ಧವಾಗಿದೆ. ಆದರೆ, ಅರ್ಹ ಕಂಪನಿಗಳು ಮುಂದೆ ಬಾರದ ಕಾರಣ ಖಾಸಗಿಗೆ ಗುತ್ತಿಗೆ ಆಧಾರದಲ್ಲಿ ನೀಡುವ ಪ್ರಕ್ರಿಯೆಗಳು ನನೆಗುದಿಗೆ ಬಿದ್ದಿವೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದರು.

ಬಿಜೆಪಿಯ ಎಸ್‌.ರುದ್ರೇಗೌಡರ ಪ್ರಶ್ನೆಗೆ ಉತ್ತರಿಸಿದ ಅವರು, ಎಂಪಿಎಂ ಪುನಶ್ಚೇತನ ಅಸಾಧ್ಯ ಎಂದು ನಿರ್ಧರಿಸಿ, ಹಲವು ವರ್ಷಗಳ ಹಿಂದೆಯೇ ಉತ್ಪಾದನೆ ಸ್ಥಗಿತಗೊಳಿಸಲಾಗಿತ್ತು. ಖಾಸಗಿ ಕಂಪನಿಗಳಿಗೆ ಗುತ್ತಿಗೆ ಆಧಾರದಲ್ಲಿ ನೀಡುವ ಪ್ರಕ್ರಿಯೆಗಳಿಗೆ ನಿರೀಕ್ಷಿತ ಫಲ ದೊರೆಯಲಿಲ್ಲ. ಎಂಪಿಎಂ ನೆಡು ತೋಪುಗಳಲ್ಲಿ ನೀಲಗಿರಿ ಬೆಳೆಯಲು ಹಾಗೂ ಹೊಣೆಗಾರಿಕೆ ಇಲ್ಲದ ಕಾರ್ಯ ಚಟುವಟಿಕೆಗಳ ಷರತ್ತನ್ನು ಕೆಲ ಕಂಪನಿಗಳು ವಿಧಿಸಿದ್ದ ಕಾರಣ ಹಿನ್ನಡೆಯಾಯಿತು ಎಂದರು.

ನೀಲಗಿರಿ ಬೆಳೆಯಲು ಅನುಮತಿ ನೀಡುವ ಕುರಿತು ಅರಣ್ಯ ಇಲಾಖೆಯ ತಜ್ಞರ ಸಮಿತಿ ರಚಿಸಲಾಗುವುದು. ಬಾಕಿ ಇರುವ ವಿದ್ಯುತ್‌ ಶುಲ್ಕ ಮನ್ನಾ ಮಾಡಲು ಪ್ರಸ್ತಾವ ಸಲ್ಲಿಸಲಾಗುವುದು. ₹1,102 ಕೋಟಿ ಹೊಣೆಗಾರಿಕೆ ಕುರಿತು ಆರ್ಥಿಕ ಇಲಾಖೆಯ ಜತೆ ಸಮಾಲೋಚನೆ ನಡೆಸಿದ ನಂತರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT