<p><strong>ಬೆಂಗಳೂರು: </strong>ಬೈಕ್, ಟಿ.ವಿ, ರೆಫ್ರಿಜರೇಟರ್ ಹೊಂದಿರುವವರ ಬಿಪಿಎಲ್ ಕಾರ್ಡ್ ಹಿಂದಕ್ಕೆ ಪಡೆಯಲಾಗುವುದು ಎಂದು ಹೇಳಿದ್ದ ಆಹಾರ ಸಚಿವ ಉಮೇಶ ಕತ್ತಿ, ತಮ್ಮ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ, ಈಗ ಜಾರಿಯಲ್ಲಿರುವ ನಿಯಮಗಳೇ ಮುಂದುವರಿಯುತ್ತವೆ ಎಂದು ಸ್ಪಷ್ಟನೆ ನೀಡಿದ್ದಾರೆ.</p>.<p>ಸೋಮವಾರ ಈ ಕುರಿತು ಪ್ರಕಟಣೆ ಹೊರಡಿಸಿರುವ ಸಚಿವ ಕತ್ತಿ, 2016 ಮತ್ತು 2017 ರಲ್ಲಿ ತಿದ್ದುಪಡಿ ಮಾಡಿರುವ ಆದೇಶವನ್ನೇ ಪಾಲಿಸಲಾಗುತ್ತದೆ. ಯಾವುದೇ ಬದಲಾವಣೆಗಳನ್ನು ಮಾಡುವುದಿಲ್ಲ ಎಂದು ಹೇಳಿದ್ದಾರೆ.</p>.<p class="Subhead"><strong>ಕತ್ತಿ ಹೇಳಿದ್ದೇನು: </strong>ಟಿ.ವಿ, ರೆಫ್ರಿಜರೇಟರ್, ಬೈಕ್ ಮತ್ತು ಹೆಚ್ಚು ಜಮೀನು ಹೊಂದಿರುವವರು. ಸರ್ಕಾರಿ, ಅರೆ ಸರ್ಕಾರಿ ನೌಕರರು ಹಾಗೂ ₹1.20 ಲಕ್ಷಕ್ಕಿಂತ ಹೆಚ್ಚು ವಾರ್ಷಿಕ ಆದಾಯ ಇರುವವರು ಬಿಪಿಎಲ್ ಕಾರ್ಡ್ ಹೊಂದುವಂತಿಲ್ಲ. ಅಂತಹವರು ಬಿಪಿಎಲ್ ಕಾರ್ಡ್ ಹೊಂದಿದ್ದರೆ ಕೂಡಲೇ ಅದನ್ನು ಮರಳಿಸಬೇಕು. ಇದಕ್ಕೆ ಮಾರ್ಚ್ 31 ಗಡುವು ನಿಗದಿ ಮಾಡಲಾಗಿದೆ ಎಂದು ಕತ್ತಿ ಬೆಳಗಾವಿಯಲ್ಲಿ ಹೇಳಿದ್ದರು.</p>.<p>ಮುಂಬರುವ ದಿನಗಳಲ್ಲಿ ಸಮೀಕ್ಷೆ ನಡೆಸಿ ಅಕ್ರಮವಾಗಿ ಬಿಪಿಎಲ್ ಕಾರ್ಡ್ ಹೊಂದಿರುವವರನ್ನು ಪತ್ತೆ ಮಾಡಿ ರದ್ದು ಮಾಡುವುದಾಗಿಯೂ ಹೇಳಿದ್ದರು. ಈ ಹೇಳಿಕೆಯ ಬಗ್ಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.</p>.<p>‘ನೀವು ₹2000 ಕ್ಕೆ ಟಿವಿ ಸೆಟ್ ಖರೀದಿಸಬಹುದು. ಇದರ ಆಧಾರದಲ್ಲಿ ಬಿಪಿಎಲ್ ಕಾರ್ಡ್ ರದ್ದು ಮಾಡಿದರೆ, ಬಡವರು ಎಲ್ಲಿಗೆ ಹೋಗಬೇಕು. ಬಿಜೆಪಿಯ ಬಡವರ ವಿರೋಧಿ ನೀತಿಗೆ ಇದು ನಿದರ್ಶನ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p><strong>ಬಿಪಿಎಲ್ ಕಾರ್ಡ್ಗೆ ಯಾರು ಅರ್ಹರಲ್ಲ: </strong>2017 ರ ಮಾರ್ಚ್ನಲ್ಲಿ ಹೊರಡಿಸಿದ ಆದೇಶದ ಪ್ರಕಾರ, ಬಿಪಿಎಲ್ ಕಾರ್ಡ್ ಪಡೆಯಲು ಅರ್ಹರಲ್ಲದ ಕುಟುಂಬಗಳ ಮಾನದಂಡ–</p>.<p>* ಸರ್ಕಾರ, ಸರ್ಕಾರದಿಂದ ಅನುದಾನ ಪಡೆಯುವ ಸಂಸ್ಥೆಗಳು, ಸರ್ಕಾರಿ ಪ್ರಾಯೋಜಿತ, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ನಿಗಮ–ಮಂಡಳಿಗಳ ಕಾಯಂ ನೌಕರರು</p>.<p>* ಆದಾಯ ತೆರಿಗೆ, ವೃತ್ತಿ ತೆರಿಗೆ, ಸೇವಾ ತೆರಿಗೆ ಪಾವತಿಸುವ ಕುಟುಂಬಗಳು</p>.<p>* ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು. ನಗರ ಪ್ರದೇಶಗಳಲ್ಲಿ 1,000 ಚದರಡಿಗಿಂತಲೂ ಹೆಚ್ಚು ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು</p>.<p>* ಜೀವನೋಪಾಯಕ್ಕಾಗಿ ಸ್ವಂತವಾಗಿ ಓಡಿಸುವ ವಾಣಿಜ್ಯ ವಾಹನಗಳಾದ ಟ್ರ್ಯಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿರುವ ಕುಟುಂಬಗಳನ್ನು ಬಿಟ್ಟು, ನಾಲ್ಕು ಚಕ್ರದ ವಾಹನ ಹೊಂದಿರುವ ಕುಟುಂಬಗಳು</p>.<p>* ತಿಂಗಳಿಗೆ 150 ಯುನಿಟ್ಗಳಿಗಿಂತಲೂ ಹೆಚ್ಚಿನ ವಿದ್ಯುತ್ ಬಳಕೆ ಮಾಡುವ ಕುಟುಂಬಗಳು</p>.<p>* ವಾರ್ಷಿಕ ಆದಾಯ ₹1.20 ಲಕ್ಷಕ್ಕೂ ಅಧಿಕ ಆದಾಯ ಹೊಂದಿರುವ ಕುಟುಂಬಗಳು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಬೈಕ್, ಟಿ.ವಿ, ರೆಫ್ರಿಜರೇಟರ್ ಹೊಂದಿರುವವರ ಬಿಪಿಎಲ್ ಕಾರ್ಡ್ ಹಿಂದಕ್ಕೆ ಪಡೆಯಲಾಗುವುದು ಎಂದು ಹೇಳಿದ್ದ ಆಹಾರ ಸಚಿವ ಉಮೇಶ ಕತ್ತಿ, ತಮ್ಮ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ, ಈಗ ಜಾರಿಯಲ್ಲಿರುವ ನಿಯಮಗಳೇ ಮುಂದುವರಿಯುತ್ತವೆ ಎಂದು ಸ್ಪಷ್ಟನೆ ನೀಡಿದ್ದಾರೆ.</p>.<p>ಸೋಮವಾರ ಈ ಕುರಿತು ಪ್ರಕಟಣೆ ಹೊರಡಿಸಿರುವ ಸಚಿವ ಕತ್ತಿ, 2016 ಮತ್ತು 2017 ರಲ್ಲಿ ತಿದ್ದುಪಡಿ ಮಾಡಿರುವ ಆದೇಶವನ್ನೇ ಪಾಲಿಸಲಾಗುತ್ತದೆ. ಯಾವುದೇ ಬದಲಾವಣೆಗಳನ್ನು ಮಾಡುವುದಿಲ್ಲ ಎಂದು ಹೇಳಿದ್ದಾರೆ.</p>.<p class="Subhead"><strong>ಕತ್ತಿ ಹೇಳಿದ್ದೇನು: </strong>ಟಿ.ವಿ, ರೆಫ್ರಿಜರೇಟರ್, ಬೈಕ್ ಮತ್ತು ಹೆಚ್ಚು ಜಮೀನು ಹೊಂದಿರುವವರು. ಸರ್ಕಾರಿ, ಅರೆ ಸರ್ಕಾರಿ ನೌಕರರು ಹಾಗೂ ₹1.20 ಲಕ್ಷಕ್ಕಿಂತ ಹೆಚ್ಚು ವಾರ್ಷಿಕ ಆದಾಯ ಇರುವವರು ಬಿಪಿಎಲ್ ಕಾರ್ಡ್ ಹೊಂದುವಂತಿಲ್ಲ. ಅಂತಹವರು ಬಿಪಿಎಲ್ ಕಾರ್ಡ್ ಹೊಂದಿದ್ದರೆ ಕೂಡಲೇ ಅದನ್ನು ಮರಳಿಸಬೇಕು. ಇದಕ್ಕೆ ಮಾರ್ಚ್ 31 ಗಡುವು ನಿಗದಿ ಮಾಡಲಾಗಿದೆ ಎಂದು ಕತ್ತಿ ಬೆಳಗಾವಿಯಲ್ಲಿ ಹೇಳಿದ್ದರು.</p>.<p>ಮುಂಬರುವ ದಿನಗಳಲ್ಲಿ ಸಮೀಕ್ಷೆ ನಡೆಸಿ ಅಕ್ರಮವಾಗಿ ಬಿಪಿಎಲ್ ಕಾರ್ಡ್ ಹೊಂದಿರುವವರನ್ನು ಪತ್ತೆ ಮಾಡಿ ರದ್ದು ಮಾಡುವುದಾಗಿಯೂ ಹೇಳಿದ್ದರು. ಈ ಹೇಳಿಕೆಯ ಬಗ್ಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.</p>.<p>‘ನೀವು ₹2000 ಕ್ಕೆ ಟಿವಿ ಸೆಟ್ ಖರೀದಿಸಬಹುದು. ಇದರ ಆಧಾರದಲ್ಲಿ ಬಿಪಿಎಲ್ ಕಾರ್ಡ್ ರದ್ದು ಮಾಡಿದರೆ, ಬಡವರು ಎಲ್ಲಿಗೆ ಹೋಗಬೇಕು. ಬಿಜೆಪಿಯ ಬಡವರ ವಿರೋಧಿ ನೀತಿಗೆ ಇದು ನಿದರ್ಶನ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p><strong>ಬಿಪಿಎಲ್ ಕಾರ್ಡ್ಗೆ ಯಾರು ಅರ್ಹರಲ್ಲ: </strong>2017 ರ ಮಾರ್ಚ್ನಲ್ಲಿ ಹೊರಡಿಸಿದ ಆದೇಶದ ಪ್ರಕಾರ, ಬಿಪಿಎಲ್ ಕಾರ್ಡ್ ಪಡೆಯಲು ಅರ್ಹರಲ್ಲದ ಕುಟುಂಬಗಳ ಮಾನದಂಡ–</p>.<p>* ಸರ್ಕಾರ, ಸರ್ಕಾರದಿಂದ ಅನುದಾನ ಪಡೆಯುವ ಸಂಸ್ಥೆಗಳು, ಸರ್ಕಾರಿ ಪ್ರಾಯೋಜಿತ, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ನಿಗಮ–ಮಂಡಳಿಗಳ ಕಾಯಂ ನೌಕರರು</p>.<p>* ಆದಾಯ ತೆರಿಗೆ, ವೃತ್ತಿ ತೆರಿಗೆ, ಸೇವಾ ತೆರಿಗೆ ಪಾವತಿಸುವ ಕುಟುಂಬಗಳು</p>.<p>* ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು. ನಗರ ಪ್ರದೇಶಗಳಲ್ಲಿ 1,000 ಚದರಡಿಗಿಂತಲೂ ಹೆಚ್ಚು ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು</p>.<p>* ಜೀವನೋಪಾಯಕ್ಕಾಗಿ ಸ್ವಂತವಾಗಿ ಓಡಿಸುವ ವಾಣಿಜ್ಯ ವಾಹನಗಳಾದ ಟ್ರ್ಯಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿರುವ ಕುಟುಂಬಗಳನ್ನು ಬಿಟ್ಟು, ನಾಲ್ಕು ಚಕ್ರದ ವಾಹನ ಹೊಂದಿರುವ ಕುಟುಂಬಗಳು</p>.<p>* ತಿಂಗಳಿಗೆ 150 ಯುನಿಟ್ಗಳಿಗಿಂತಲೂ ಹೆಚ್ಚಿನ ವಿದ್ಯುತ್ ಬಳಕೆ ಮಾಡುವ ಕುಟುಂಬಗಳು</p>.<p>* ವಾರ್ಷಿಕ ಆದಾಯ ₹1.20 ಲಕ್ಷಕ್ಕೂ ಅಧಿಕ ಆದಾಯ ಹೊಂದಿರುವ ಕುಟುಂಬಗಳು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>