ರಾಜ್ಯಸಭೆಯಲ್ಲಿ ಬಿಜೆಪಿ ಸದಸ್ಯ ನಾರಾಯಣ ಕೊರಗಪ್ಪ ಕೇಳಿದ ಪ್ರಶ್ನೆಗೆ ಉತ್ತರ ನೀಡಿರುವ ಅವರು, ‘ತೋಕೂರು ನಿಲ್ದಾಣವನ್ನು ಕೊಂಕಣ ರೈಲ್ವೆಯಿಂದ ನೈರುತ್ಯ ರೈಲ್ವೆಗೆ ವರ್ಗಾಯಿಸಲು ಕೆಲವು ಷರತ್ತುಗಳಿಗೆ ಒಳಪಟ್ಟು ರೈಲ್ವೆ ಮಂಡಳಿಯು ಆರಂಭದಲ್ಲಿ ಒಪ್ಪಿಗೆ ನೀಡಿತ್ತು. ಆ ಬಳಿಕ, ವಿವರವಾದ ಚರ್ಚೆಯ ನಂತರ ಹಾಗೂ ಕಾರ್ಯಾಚರಣೆಯ ಅಗತ್ಯಗಳನ್ನು ಸರಿಯಾಗಿ ಪರಿಗಣಿಸಿದ ಬಳಿಕ, ಈ ವಿಷಯದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ತೀರ್ಮಾನಿಸಲಾಯಿತು’ ಎಂದರು.