ಜಿಲ್ಲೆಯ ದೇವದುರ್ಗದಲ್ಲಿ ಬುಧವಾರ ಪಂಚರತ್ನ ಯಾತ್ರೆ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಈ ಬಗ್ಗೆ ಗೊಂದಲ ಬೇಡ. ಕುಟುಂಬದಲ್ಲಿ ಸಂಘರ್ಷ, ತಳಮಳ ಎಂಬುದು ಇಲ್ಲ. ಎಲ್ಲವನ್ನೂ ಬಗೆಹರಿಸುವೆ. ಪಕ್ಷ ಕಟ್ಟುತ್ತಿರುವ ಲಕ್ಷಾಂತರ ಕಾರ್ಯಕರ್ತರಿಗೆ ತಲೆ ಕೊಡಬೇಕಿರುವುದು ನನ್ನ ಜವಾಬ್ದಾರಿ. ಅವರೇ ನನ್ನ ಕುಟುಂಬ’ ಎಂದರು.