<p><strong>ಬೆಂಗಳೂರು</strong>: ‘ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆಯೇ ಇಲ್ಲ. ಸಂಪರ್ಕ ಕೊರತೆ ಯಿಂದ ಉದ್ಯೋಗ ಅವಕಾಶಗಳನ್ನು ಪಡೆದುಕೊಳ್ಳಲು ಯುವಜನರಿಗೆ ಸಾಧ್ಯವಾಗುತ್ತಿಲ್ಲ’ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.</p>.<p>ಇದೇ 12ರಂದು ವಿವೇಕಾನಂದರ ಜಯಂತಿ ಆಚರಣೆ ಸಲುವಾಗಿ ಮಾಹಿತಿ ನೀಡಲು ಶುಕ್ರವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.</p>.<p>ರಾಜ್ಯದಲ್ಲಿ ಶೇ 106ರಷ್ಟು ಉದ್ಯೋಗ ಅವಕಾಶಗಳು ಇವೆ. ಪ್ರೌಢಶಾಲೆ, ಕಾಲೇಜುಗಳಲ್ಲಿ ಯುವ ಸಬಲೀಕರಣ ಕೇಂದ್ರಗಳನ್ನು ತೆರೆದು ಉದ್ಯೋಗ ಮಾಹಿತಿ ನೀಡುವ ಕಾರ್ಯ ಕ್ರಮ ರೂಪಿಸಲಾಗುತ್ತಿದೆ. ಉದ್ಯೋಗ ಮಾಹಿತಿ ಸಲುವಾಗಿ ಪ್ರೌಢಶಾಲೆ ಹಾಗೂ ಕಾಲೇಜುಗಳನ್ನು ಒಂದೇ ವೇದಿಕೆಗೆ ತರಲಾಗುವುದು ಎಂದರು.</p>.<p>ಒಂದು ಲಕ್ಷ ಲ್ಯಾಪ್ಟಾಪ್ ವಿತರಣೆ: ಜ. 12ರಂದು ಸ್ವಾಮಿ ವಿವೇಕಾನಂದರ ಜಯಂತಿಯಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಉಚಿತವಾಗಿ ಲ್ಯಾಪ್ಟಾಪ್ ವಿತರಿ ಸಲಾಗುವುದು. ಒಟ್ಟು ಒಂದು ಲಕ್ಷ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಕೊಡಲಾಗುತ್ತದೆ ಎಂದು ಹೇಳಿದರು.</p>.<p><strong>ವಿವೇಕಾನಂದ ಜಯಂತಿ; ಲಕ್ಷ ಲ್ಯಾಪ್ಟಾಪ್ ವಿತರಣೆ</strong></p>.<p>ಜ. 12ರಂದು ಸ್ವಾಮಿ ವಿವೇಕಾನಂದರ ಜಯಂತಿಯನ್ನು ನಗರದ ಕಂಠೀರವ ಒಳಾಂಗಣ ಕ್ರೀಡಾಂಗಣ ಹಾಗೂ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಆಯೋಜಿಸಲಾಗಿದೆ ಎಂದು ಸಿ.ಎಸ್.ಅಶ್ವತ್ಥನಾರಾಯಣ ತಿಳಿಸಿದರು.</p>.<p>ಈ ಕಾರ್ಯಕ್ರಮಗಳಲ್ಲಿ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಉಚಿತವಾಗಿ ಲ್ಯಾಪ್ಟಾಪ್ ವಿತರಿಸಲಾಗುವುದು. ಒಟ್ಟಾರೆಯಾಗಿ ರಾಜ್ಯದಲ್ಲಿ ಒಂದು ಲಕ್ಷ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಕೊಡಲಾಗುತ್ತದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆಯೇ ಇಲ್ಲ. ಸಂಪರ್ಕ ಕೊರತೆ ಯಿಂದ ಉದ್ಯೋಗ ಅವಕಾಶಗಳನ್ನು ಪಡೆದುಕೊಳ್ಳಲು ಯುವಜನರಿಗೆ ಸಾಧ್ಯವಾಗುತ್ತಿಲ್ಲ’ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.</p>.<p>ಇದೇ 12ರಂದು ವಿವೇಕಾನಂದರ ಜಯಂತಿ ಆಚರಣೆ ಸಲುವಾಗಿ ಮಾಹಿತಿ ನೀಡಲು ಶುಕ್ರವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.</p>.<p>ರಾಜ್ಯದಲ್ಲಿ ಶೇ 106ರಷ್ಟು ಉದ್ಯೋಗ ಅವಕಾಶಗಳು ಇವೆ. ಪ್ರೌಢಶಾಲೆ, ಕಾಲೇಜುಗಳಲ್ಲಿ ಯುವ ಸಬಲೀಕರಣ ಕೇಂದ್ರಗಳನ್ನು ತೆರೆದು ಉದ್ಯೋಗ ಮಾಹಿತಿ ನೀಡುವ ಕಾರ್ಯ ಕ್ರಮ ರೂಪಿಸಲಾಗುತ್ತಿದೆ. ಉದ್ಯೋಗ ಮಾಹಿತಿ ಸಲುವಾಗಿ ಪ್ರೌಢಶಾಲೆ ಹಾಗೂ ಕಾಲೇಜುಗಳನ್ನು ಒಂದೇ ವೇದಿಕೆಗೆ ತರಲಾಗುವುದು ಎಂದರು.</p>.<p>ಒಂದು ಲಕ್ಷ ಲ್ಯಾಪ್ಟಾಪ್ ವಿತರಣೆ: ಜ. 12ರಂದು ಸ್ವಾಮಿ ವಿವೇಕಾನಂದರ ಜಯಂತಿಯಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಉಚಿತವಾಗಿ ಲ್ಯಾಪ್ಟಾಪ್ ವಿತರಿ ಸಲಾಗುವುದು. ಒಟ್ಟು ಒಂದು ಲಕ್ಷ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಕೊಡಲಾಗುತ್ತದೆ ಎಂದು ಹೇಳಿದರು.</p>.<p><strong>ವಿವೇಕಾನಂದ ಜಯಂತಿ; ಲಕ್ಷ ಲ್ಯಾಪ್ಟಾಪ್ ವಿತರಣೆ</strong></p>.<p>ಜ. 12ರಂದು ಸ್ವಾಮಿ ವಿವೇಕಾನಂದರ ಜಯಂತಿಯನ್ನು ನಗರದ ಕಂಠೀರವ ಒಳಾಂಗಣ ಕ್ರೀಡಾಂಗಣ ಹಾಗೂ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಆಯೋಜಿಸಲಾಗಿದೆ ಎಂದು ಸಿ.ಎಸ್.ಅಶ್ವತ್ಥನಾರಾಯಣ ತಿಳಿಸಿದರು.</p>.<p>ಈ ಕಾರ್ಯಕ್ರಮಗಳಲ್ಲಿ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಉಚಿತವಾಗಿ ಲ್ಯಾಪ್ಟಾಪ್ ವಿತರಿಸಲಾಗುವುದು. ಒಟ್ಟಾರೆಯಾಗಿ ರಾಜ್ಯದಲ್ಲಿ ಒಂದು ಲಕ್ಷ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಕೊಡಲಾಗುತ್ತದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>