<p><strong>ಬೆಂಗಳೂರು</strong>: ‘ಸ್ಥಳೀಯ ಸಂಸ್ಥೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಯಾರ ಜೊತೆಗೂ ಪಕ್ಷವು ಮೈತ್ರಿ ಮಾಡಿಕೊಳ್ಳುವುದಿಲ್ಲ’ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್. ವಿಶ್ವನಾಥ್ ಸ್ಪಷ್ಟಪಡಿಸಿದರು.</p>.<p>ಮಾಧ್ಯಮ ಪ್ರತಿನಿಧಿಗಳ ಜೊತೆ ಬುಧವಾರ ಮಾತನಾಡಿದ ಅವರು, ‘ಮೈತ್ರಿ ಏನಿದ್ದರೂ ಲೋಕಸಭೆ ಚುನಾವಣೆಗೆ ಸೀಮಿತ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿ ಹೋರಾಟ ಮಾಡಲಿದೆ’ ಎಂದರು.</p>.<p>ಶ್ರೀನಿವಾಸ್ ಪ್ರಸಾದ್ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ‘ಉಭಯ ಕುಶಲೋಪರಿ ಮಾತನಾಡಲು ಸೇರಿದ್ದೆವು. ನಾವಿಬ್ಬರೂ ಬೇರೆ ಬೇರೆ ಪಕ್ಷದಲ್ಲಿದ್ದರೂ, 40 ವರ್ಷದ ಸ್ನೇಹಿತರು. ಆರೋಗ್ಯ ವಿಚಾರಿಸಿಕೊಳ್ಳಲು ಹೋಗಿದ್ದೆ ಅಷ್ಟೆ. ಚಾಮರಾಜನಗರ ಲೋಕಸಭಾ ಕ್ಷೇತ್ರದ ಲೆಕ್ಕ ಹೇಗಿದೆ ಅಂತ ಕೇಳಿದೆ. ಅದಕ್ಕೆ ಅವರು, ಈ ಬಾರಿ ಬದಲಾವಣೆ ಆಗುತ್ತದೆ ಅಂತ ಹೇಳಿದ್ದಾರೆ. ಈ ವಿಷಯ ಬಿಟ್ಟು ಬೇರೆ ಚರ್ಚೆ ಮಾಡಿಲ್ಲ’ ಎಂದರು.</p>.<p>‘ಮೈಸೂರಿನಲ್ಲಿ ಜೆಡಿಎಸ್ನವರು ಬಿಜೆಪಿಗೆ ಮತ ಹಾಕಿದ್ದಾರೆ’ ಎಂಬ ಸಚಿವ ಜಿ.ಟಿ. ದೇವೇಗೌಡ ಹೇಳಿಕೆಗೆ ಅವರು, ‘ಯಾರು, ಯಾರಿಗೆ ಮತ ಹಾಕಿದರು ಅಂತ ಹೇಳುವುದಕ್ಕೆ ಆಗುತ್ತಿಲ್ಲ. ಈ ಬಾರಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಮತದಾನವಾಗಿದೆ. ಮೇ 23ರ ನಂತರ ಎಲ್ಲ ಪ್ರಶ್ನೆ, ಚರ್ಚೆಗಳಿಗೆ ಉತ್ತರ ಸಿಗಲಿದೆ’ ಎಂದರು.</p>.<p>ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರ ರೆಸಾರ್ಟ್ ವಾಸದ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ರೆಸಾರ್ಟ್ನಲ್ಲಿಯೂ ದೇವಸ್ಥಾನಗಳಿವೆ. ಹಿರಣ್ಯಕಶಿಪು ಪ್ರಹ್ಲಾದನಿಗೆ ಈ ಕಂಬದಲ್ಲಿ ನಾರಾಯಣನಿದ್ದಾನೋ ಎಂದು ಕೇಳುತ್ತಾನೆ. ಎಲ್ಲೆಲ್ಲೂ ಇದ್ದಾನೆ ಎಂದು ಪ್ರಹ್ಲಾದ ಹೇಳುತ್ತಾನೆ. ಹಾಗೆಯೇ ರೆಸಾರ್ಟಿನ ಕಂಬ ಕಂಬದಲ್ಲೂ ದೇವರಿದ್ದಾನೆ’ ಎಂದು ಹೇಳಿ ನಗೆ ಬೀರಿದರು.</p>.<p>‘ಬಿಜೆಪಿಯವರು ದೇವಸ್ಥಾನದ ಗಿರಾಕಿಗಳು. ಅವರು ಬೆಳಿಗ್ಗೆ, ಸಂಜೆ ದೇವಸ್ಥಾನಕ್ಕೆ ಹೋಗುತ್ತಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ ಆಗೊಮ್ಮೆ, ಈಗೊಮ್ಮೆ ಹೋಗುತ್ತಾರೆ ಅಷ್ಟೇ. ದೇವಸ್ಥಾನಕ್ಕೆ ಹೋಗುವುದು ತಪ್ಪಲ್ಲ’ ಎಂದು ಕುಮಾರಸ್ವಾಮಿ ಅವರ ಟೆಂಪಲ್ ರನ್ಗೆ ಸಮರ್ಥನೆ ನೀಡಿದರು.</p>.<p><strong>ಬಿಜೆಪಿ– ಜೆಡಿಎಸ್ ಒಪ್ಪಂದ: ಸಿದ್ದರಾಮಯ್ಯ</strong><br />ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಸಿದ್ದರಾಮಯ್ಯ ‘ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ– ಜೆಡಿಎಸ್ ಒಪ್ಪಂದ ಮಾಡಿಕೊಂಡಿದ್ದರಿಂದಾಗಿ ಕಾಂಗ್ರೆಸ್ಗೆ ಕಡಿಮೆ ಸ್ಥಾನಗಳು ಬಂದವು. ಅದೊಂದು ವಿಭಿನ್ನ ಚುನಾವಣೆಯಾಗಿತ್ತು. ಬಿಜೆಪಿಯವರು ಈಗ ಮತ್ತೆ ಚುನಾವಣೆ ಎದುರಿಸಲಿ ನೋಡೋಣ’ ಎಂದು ಸವಾಲು ಹಾಕಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಎಚ್. ವಿಶ್ವನಾಥ್, ‘ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಜೆಡಿಎಸ್, ಬಿಜೆಪಿಯ 'ಬಿ' ಟೀಂ ಎಂದು ಸಿದ್ದರಾಮಯ್ಯ ಆರೋಪಿಸಿದ್ದರು. ಹೀಗಾಗಿ, ಕಳೆದ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿಗೆ ಹೆಚ್ಚು ಸ್ಥಾನ ಬಂತು. ಅದಕ್ಕೆ ಜೆಡಿಎಸ್ ಕಾರಣ ಅಲ್ಲವೇ ಅಲ್ಲ’ ಎಂದು ತಿರುಗೇಟು ನೀಡಿದರು.</p>.<p>‘ರಾಜಕೀಯದಲ್ಲಿ ಪ್ರತಿಯೊಬ್ಬರಿಗೂ ಅವರದ್ದೇ ಆದ ವಿಶ್ಲೇಷಣೆ ಇರುತ್ತದೆ. ಕಾಂಗ್ರೆಸ್ಗೆ 79 ಸ್ಥಾನ ಬರಲು ಸಿದ್ದರಾಮಯ್ಯ ಕಾರಣ ಎನ್ನುವುದು ವಿಶ್ವನಾಥ್ ವಿಶ್ಲೇಷಣೆ. ಅದೇ ರೀತಿ ಮತ್ತೊಬ್ಬರಿಗೆ ಮತ್ತೊಂದು ರೀತಿಯ ವಿಶ್ಲೇಷಣೆ ಇರುತ್ತದೆ’ ಎಂದು ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ ಪ್ರತಿಕ್ರಿಯಿಸಿದರು.</p>.<p><strong>**</strong></p>.<p><strong>ವಿಶ್ವನಾಥ್–ಪ್ರಸಾದ್ ಭೇಟಿ</strong><br /><strong>ಮೈಸೂರು:</strong> ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ವಿಶ್ವನಾಥ್ ಅವರು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ವಿ.ಶ್ರೀನಿವಾಸಪ್ರಸಾದ್ ಅವರನ್ನು ಮಂಗಳವಾರ ಸಂಜೆ ಭೇಟಿಯಾಗಿ ಚರ್ಚಿಸಿರುವುದು ಕುತೂಹಲ ಮೂಡಿಸಿದೆ.</p>.<p>**</p>.<p>ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಬಿಟ್ಟು ಯಾರ ಜತೆಗಾದರೂ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಸ್ಥಳೀಯ ನಾಯಕರಿಗೆ ಜವಾಬ್ದಾರಿ ನೀಡಲಾಗಿದೆ. ವಿಶ್ವನಾಥ್ ಹೇಳಿಕೆ ಕುರಿತು ಅವರನ್ನೇ ಕೇಳಿ.<br /><em><strong>-ದಿನೇಶ್ ಗುಂಡೂರಾವ್, ಕೆಪಿಸಿಸಿ ಅಧ್ಯಕ್ಷ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಸ್ಥಳೀಯ ಸಂಸ್ಥೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಯಾರ ಜೊತೆಗೂ ಪಕ್ಷವು ಮೈತ್ರಿ ಮಾಡಿಕೊಳ್ಳುವುದಿಲ್ಲ’ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್. ವಿಶ್ವನಾಥ್ ಸ್ಪಷ್ಟಪಡಿಸಿದರು.</p>.<p>ಮಾಧ್ಯಮ ಪ್ರತಿನಿಧಿಗಳ ಜೊತೆ ಬುಧವಾರ ಮಾತನಾಡಿದ ಅವರು, ‘ಮೈತ್ರಿ ಏನಿದ್ದರೂ ಲೋಕಸಭೆ ಚುನಾವಣೆಗೆ ಸೀಮಿತ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿ ಹೋರಾಟ ಮಾಡಲಿದೆ’ ಎಂದರು.</p>.<p>ಶ್ರೀನಿವಾಸ್ ಪ್ರಸಾದ್ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ‘ಉಭಯ ಕುಶಲೋಪರಿ ಮಾತನಾಡಲು ಸೇರಿದ್ದೆವು. ನಾವಿಬ್ಬರೂ ಬೇರೆ ಬೇರೆ ಪಕ್ಷದಲ್ಲಿದ್ದರೂ, 40 ವರ್ಷದ ಸ್ನೇಹಿತರು. ಆರೋಗ್ಯ ವಿಚಾರಿಸಿಕೊಳ್ಳಲು ಹೋಗಿದ್ದೆ ಅಷ್ಟೆ. ಚಾಮರಾಜನಗರ ಲೋಕಸಭಾ ಕ್ಷೇತ್ರದ ಲೆಕ್ಕ ಹೇಗಿದೆ ಅಂತ ಕೇಳಿದೆ. ಅದಕ್ಕೆ ಅವರು, ಈ ಬಾರಿ ಬದಲಾವಣೆ ಆಗುತ್ತದೆ ಅಂತ ಹೇಳಿದ್ದಾರೆ. ಈ ವಿಷಯ ಬಿಟ್ಟು ಬೇರೆ ಚರ್ಚೆ ಮಾಡಿಲ್ಲ’ ಎಂದರು.</p>.<p>‘ಮೈಸೂರಿನಲ್ಲಿ ಜೆಡಿಎಸ್ನವರು ಬಿಜೆಪಿಗೆ ಮತ ಹಾಕಿದ್ದಾರೆ’ ಎಂಬ ಸಚಿವ ಜಿ.ಟಿ. ದೇವೇಗೌಡ ಹೇಳಿಕೆಗೆ ಅವರು, ‘ಯಾರು, ಯಾರಿಗೆ ಮತ ಹಾಕಿದರು ಅಂತ ಹೇಳುವುದಕ್ಕೆ ಆಗುತ್ತಿಲ್ಲ. ಈ ಬಾರಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಮತದಾನವಾಗಿದೆ. ಮೇ 23ರ ನಂತರ ಎಲ್ಲ ಪ್ರಶ್ನೆ, ಚರ್ಚೆಗಳಿಗೆ ಉತ್ತರ ಸಿಗಲಿದೆ’ ಎಂದರು.</p>.<p>ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರ ರೆಸಾರ್ಟ್ ವಾಸದ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ರೆಸಾರ್ಟ್ನಲ್ಲಿಯೂ ದೇವಸ್ಥಾನಗಳಿವೆ. ಹಿರಣ್ಯಕಶಿಪು ಪ್ರಹ್ಲಾದನಿಗೆ ಈ ಕಂಬದಲ್ಲಿ ನಾರಾಯಣನಿದ್ದಾನೋ ಎಂದು ಕೇಳುತ್ತಾನೆ. ಎಲ್ಲೆಲ್ಲೂ ಇದ್ದಾನೆ ಎಂದು ಪ್ರಹ್ಲಾದ ಹೇಳುತ್ತಾನೆ. ಹಾಗೆಯೇ ರೆಸಾರ್ಟಿನ ಕಂಬ ಕಂಬದಲ್ಲೂ ದೇವರಿದ್ದಾನೆ’ ಎಂದು ಹೇಳಿ ನಗೆ ಬೀರಿದರು.</p>.<p>‘ಬಿಜೆಪಿಯವರು ದೇವಸ್ಥಾನದ ಗಿರಾಕಿಗಳು. ಅವರು ಬೆಳಿಗ್ಗೆ, ಸಂಜೆ ದೇವಸ್ಥಾನಕ್ಕೆ ಹೋಗುತ್ತಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ ಆಗೊಮ್ಮೆ, ಈಗೊಮ್ಮೆ ಹೋಗುತ್ತಾರೆ ಅಷ್ಟೇ. ದೇವಸ್ಥಾನಕ್ಕೆ ಹೋಗುವುದು ತಪ್ಪಲ್ಲ’ ಎಂದು ಕುಮಾರಸ್ವಾಮಿ ಅವರ ಟೆಂಪಲ್ ರನ್ಗೆ ಸಮರ್ಥನೆ ನೀಡಿದರು.</p>.<p><strong>ಬಿಜೆಪಿ– ಜೆಡಿಎಸ್ ಒಪ್ಪಂದ: ಸಿದ್ದರಾಮಯ್ಯ</strong><br />ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಸಿದ್ದರಾಮಯ್ಯ ‘ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ– ಜೆಡಿಎಸ್ ಒಪ್ಪಂದ ಮಾಡಿಕೊಂಡಿದ್ದರಿಂದಾಗಿ ಕಾಂಗ್ರೆಸ್ಗೆ ಕಡಿಮೆ ಸ್ಥಾನಗಳು ಬಂದವು. ಅದೊಂದು ವಿಭಿನ್ನ ಚುನಾವಣೆಯಾಗಿತ್ತು. ಬಿಜೆಪಿಯವರು ಈಗ ಮತ್ತೆ ಚುನಾವಣೆ ಎದುರಿಸಲಿ ನೋಡೋಣ’ ಎಂದು ಸವಾಲು ಹಾಕಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಎಚ್. ವಿಶ್ವನಾಥ್, ‘ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಜೆಡಿಎಸ್, ಬಿಜೆಪಿಯ 'ಬಿ' ಟೀಂ ಎಂದು ಸಿದ್ದರಾಮಯ್ಯ ಆರೋಪಿಸಿದ್ದರು. ಹೀಗಾಗಿ, ಕಳೆದ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿಗೆ ಹೆಚ್ಚು ಸ್ಥಾನ ಬಂತು. ಅದಕ್ಕೆ ಜೆಡಿಎಸ್ ಕಾರಣ ಅಲ್ಲವೇ ಅಲ್ಲ’ ಎಂದು ತಿರುಗೇಟು ನೀಡಿದರು.</p>.<p>‘ರಾಜಕೀಯದಲ್ಲಿ ಪ್ರತಿಯೊಬ್ಬರಿಗೂ ಅವರದ್ದೇ ಆದ ವಿಶ್ಲೇಷಣೆ ಇರುತ್ತದೆ. ಕಾಂಗ್ರೆಸ್ಗೆ 79 ಸ್ಥಾನ ಬರಲು ಸಿದ್ದರಾಮಯ್ಯ ಕಾರಣ ಎನ್ನುವುದು ವಿಶ್ವನಾಥ್ ವಿಶ್ಲೇಷಣೆ. ಅದೇ ರೀತಿ ಮತ್ತೊಬ್ಬರಿಗೆ ಮತ್ತೊಂದು ರೀತಿಯ ವಿಶ್ಲೇಷಣೆ ಇರುತ್ತದೆ’ ಎಂದು ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ ಪ್ರತಿಕ್ರಿಯಿಸಿದರು.</p>.<p><strong>**</strong></p>.<p><strong>ವಿಶ್ವನಾಥ್–ಪ್ರಸಾದ್ ಭೇಟಿ</strong><br /><strong>ಮೈಸೂರು:</strong> ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ವಿಶ್ವನಾಥ್ ಅವರು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ವಿ.ಶ್ರೀನಿವಾಸಪ್ರಸಾದ್ ಅವರನ್ನು ಮಂಗಳವಾರ ಸಂಜೆ ಭೇಟಿಯಾಗಿ ಚರ್ಚಿಸಿರುವುದು ಕುತೂಹಲ ಮೂಡಿಸಿದೆ.</p>.<p>**</p>.<p>ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಬಿಟ್ಟು ಯಾರ ಜತೆಗಾದರೂ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಸ್ಥಳೀಯ ನಾಯಕರಿಗೆ ಜವಾಬ್ದಾರಿ ನೀಡಲಾಗಿದೆ. ವಿಶ್ವನಾಥ್ ಹೇಳಿಕೆ ಕುರಿತು ಅವರನ್ನೇ ಕೇಳಿ.<br /><em><strong>-ದಿನೇಶ್ ಗುಂಡೂರಾವ್, ಕೆಪಿಸಿಸಿ ಅಧ್ಯಕ್ಷ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>