ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಚ್. ಪ್ರಸಾದ್ ಅವರು ಬೆಳಕವಾಡಿ, ಬಂಡಳ್ಳಿ ಹಾಗೂ ಇನ್ನಿತರ ಕಡೆಗಳಿಂದ ವೈದ್ಯರನ್ನು ಕರೆಸಿ ಚಿಕಿತ್ಸೆ ಪ್ರಾರಂಭಿಸಿರಾದರೂ ದಾಖಲಾಗುತ್ತಿದ್ದ ಕ್ಷಣದಿಂದ ಕ್ಷಣಕ್ಕೂ ರೋಗಿಗಳ ಸಂಖ್ಯೆ ಏರಿಕೆಯಾಗುತ್ತಿದ್ದರಿಂದ ಕರ್ತವ್ಯ ನಿರ್ವಹಿಸುತ್ತಿದ್ದ ವೈದ್ಯರು ಚಿಕಿತ್ಸೆ ನೀಡಲು ಹೆಣಗಾಡುವಂತಾಯಿತು.