<p><strong>ಬೆಂಗಳೂರು:</strong> ‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು 10 ವರ್ಷಗಳಿಗೊಮ್ಮೆ ಮಾಡುವುದು ಕಡ್ಡಾಯ. ಅದರಂತೆ, ಸರ್ಕಾರ ಜಾತಿವಾರು ಮರು ಸಮೀಕ್ಷೆಗೆ ನಿರ್ಧರಿಸಿದೆ. ಆದರೆ, ಸಾಮಾಜಿಕ ಬದ್ಧತೆ ಇಲ್ಲದವರು ಸಬೂಬು ಹೇಳುತ್ತಾರೆ’ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಹೇಳಿದರು.</p>.<p>ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ‘10 ವರ್ಷಗಳಿಗೊಮ್ಮೆ ಜನಗಣತಿ ಎನ್ನುವುದು ಒಂದು ಭಾಗವಾದರೆ, 10 ವರ್ಷಕ್ಕೊಮ್ಮೆ ಜಾತಿ ಗಣತಿ ಮಾಡಬೇಕು ಎಂದೂ ಕಾಯ್ದೆ ಹೇಳುತ್ತದೆ. ಆ ಮೂಲಕ, ಜನಸಂಖ್ಯೆಗೆ ಅನುಗುಣವಾಗಿ ಸವಲತ್ತುಗಳನ್ನು ನೀಡಬಹುದು. ಬದ್ಧತೆ ಇರುವ ಸರ್ಕಾರ ಈ ನಿಟ್ಟಿನಲ್ಲಿ ಕೆಲಸ ಮಾಡುತ್ತದೆ’ ಎಂದರು. </p>.<p>‘11 ವರ್ಷಗಳಿಂದ ಅವರೇ (ಬಿಜೆಪಿ) ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾರೆ. ಆದರೆ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾಡಲು ಮುಂದಾಗಿಲ್ಲ. ಸಮೀಕ್ಷೆ ಮಾಡಿ ಸಂವಿಧಾನಬದ್ಧವಾಗಿ ಸಮುದಾಯಗಳಿಗೆ ಸವಲತ್ತುಗಳನ್ನು ನೀಡಬೇಕು. ಇದು ಸರ್ಕಾರದ ಕರ್ತವ್ಯವೂ ಆಗಿದೆ’ ಎಂದರು. </p>.<p>‘ತಂತ್ರಾಂಶವಿದೆ. ದತ್ತಾಂಶವೂ ಇದೆ. ಶಿಕ್ಷಕರ ಕೊರತೆ ಎದುರಾದರೆ ಪರ್ಯಾಯ ಮಾರ್ಗ ಕಂಡುಕೊಳ್ಳಲಾಗುವುದು. ಒಟ್ಟಿನಲ್ಲಿ 90 ದಿನಗಳಲ್ಲಿ ರಾಜ್ಯ ಸರ್ಕಾರ ಜಾತಿವಾರು ಸಮೀಕ್ಷೆ ಪೂರ್ಣಗೊಳಿಸಲಿದೆ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. </p>.<p>‘ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯಬೇಕು’ ಎಂಬ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಮಹದೇವಪ್ಪ, ‘ಅವರೇನು ಭಾರಿ ಪ್ರಾಮಾಣಿಕರೇ? ನಮ್ಮ ಸರ್ಕಾರದ ಮೇಲಿನ ಆರೋಪಗಳಿಗೆ ಸಾಕ್ಷ್ಯಗಳಿದ್ದರೆ ತನಿಖಾ ಸಂಸ್ಥೆಗಳಿಗೆ ನೀಡಲಿ’ ಎಂದು ಸವಾಲು ಹಾಕಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು 10 ವರ್ಷಗಳಿಗೊಮ್ಮೆ ಮಾಡುವುದು ಕಡ್ಡಾಯ. ಅದರಂತೆ, ಸರ್ಕಾರ ಜಾತಿವಾರು ಮರು ಸಮೀಕ್ಷೆಗೆ ನಿರ್ಧರಿಸಿದೆ. ಆದರೆ, ಸಾಮಾಜಿಕ ಬದ್ಧತೆ ಇಲ್ಲದವರು ಸಬೂಬು ಹೇಳುತ್ತಾರೆ’ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಹೇಳಿದರು.</p>.<p>ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ‘10 ವರ್ಷಗಳಿಗೊಮ್ಮೆ ಜನಗಣತಿ ಎನ್ನುವುದು ಒಂದು ಭಾಗವಾದರೆ, 10 ವರ್ಷಕ್ಕೊಮ್ಮೆ ಜಾತಿ ಗಣತಿ ಮಾಡಬೇಕು ಎಂದೂ ಕಾಯ್ದೆ ಹೇಳುತ್ತದೆ. ಆ ಮೂಲಕ, ಜನಸಂಖ್ಯೆಗೆ ಅನುಗುಣವಾಗಿ ಸವಲತ್ತುಗಳನ್ನು ನೀಡಬಹುದು. ಬದ್ಧತೆ ಇರುವ ಸರ್ಕಾರ ಈ ನಿಟ್ಟಿನಲ್ಲಿ ಕೆಲಸ ಮಾಡುತ್ತದೆ’ ಎಂದರು. </p>.<p>‘11 ವರ್ಷಗಳಿಂದ ಅವರೇ (ಬಿಜೆಪಿ) ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾರೆ. ಆದರೆ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾಡಲು ಮುಂದಾಗಿಲ್ಲ. ಸಮೀಕ್ಷೆ ಮಾಡಿ ಸಂವಿಧಾನಬದ್ಧವಾಗಿ ಸಮುದಾಯಗಳಿಗೆ ಸವಲತ್ತುಗಳನ್ನು ನೀಡಬೇಕು. ಇದು ಸರ್ಕಾರದ ಕರ್ತವ್ಯವೂ ಆಗಿದೆ’ ಎಂದರು. </p>.<p>‘ತಂತ್ರಾಂಶವಿದೆ. ದತ್ತಾಂಶವೂ ಇದೆ. ಶಿಕ್ಷಕರ ಕೊರತೆ ಎದುರಾದರೆ ಪರ್ಯಾಯ ಮಾರ್ಗ ಕಂಡುಕೊಳ್ಳಲಾಗುವುದು. ಒಟ್ಟಿನಲ್ಲಿ 90 ದಿನಗಳಲ್ಲಿ ರಾಜ್ಯ ಸರ್ಕಾರ ಜಾತಿವಾರು ಸಮೀಕ್ಷೆ ಪೂರ್ಣಗೊಳಿಸಲಿದೆ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. </p>.<p>‘ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯಬೇಕು’ ಎಂಬ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಮಹದೇವಪ್ಪ, ‘ಅವರೇನು ಭಾರಿ ಪ್ರಾಮಾಣಿಕರೇ? ನಮ್ಮ ಸರ್ಕಾರದ ಮೇಲಿನ ಆರೋಪಗಳಿಗೆ ಸಾಕ್ಷ್ಯಗಳಿದ್ದರೆ ತನಿಖಾ ಸಂಸ್ಥೆಗಳಿಗೆ ನೀಡಲಿ’ ಎಂದು ಸವಾಲು ಹಾಕಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>