ಅಂಗಡಿ ಅವರ ಗೃಹ ಕಚೇರಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಪಾಟೀಲ ಅವರು, ‘ಮುಂದಿನ ಮುಖ್ಯಮಂತ್ರಿ ಸ್ಥಾನಕ್ಕೆ ಸುರೇಶ ಅವರ ಹೆಸರು ಮುಂಚೂಣಿಯಲ್ಲಿತ್ತು. ಈ ವಿಷಯವನ್ನು ಅನೇಕ ಸಂಸದರು ಪ್ರಸ್ತಾಪಿಸಿದ್ದರು; ಬೆಂಬಲಿಸಿದ್ದರು. ದೆಹಲಿಯ ಮನೆಯಲ್ಲಿ ಹಲವು ಸಭೆಗಳು ನಡೆದಿದ್ದವು. ನಾನೂ ಭಾಗಿಯಾಗಿದ್ದೆ. ಒಳ್ಳೆಯ ವ್ಯಕ್ತಿ. ಅಜಾತಶತ್ರು. ಹೆಸರು ಕೆಡಿಸಿಕೊಂಡಿಲ್ಲ. ಸಮಾಜದ ನಾಯಕ ಹಾಗೂ ಎಲ್ಲರಿಗೂ ಬೇಕಾದವರಾಗಿದ್ದಾರೆ. ಈ ಕಾರಣದಿಂದ ಪರಿಗಣಿಸಬೇಕು ಎಂಬ ವಿಷಯ ದೊಡ್ಡ ಮಟ್ಟದಲ್ಲಿ ಚರ್ಚೆಯಾಗಿತ್ತು. ಆದರೆ, ದೈವ ಈ ರೀತಿ ಮಾಡಿತು’ ಎಂದು ತಿಳಿಸಿದರು.