ಪುತ್ರನಿಗೆ ಟಿಕೆಟ್ ತಪ್ಪಿರುವುದರಿಂದ ಕೆ.ಎಸ್. ಈಶ್ವರಪ್ಪ ಅಸಮಾಧಾನಗೊಂಡಿರುವ ಬಗ್ಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ‘ಸುಮಾರು ಆರು ತಿಂಗಳಿಂದ ಆ ಕ್ಷೇತ್ರದಲ್ಲಿ ಅವರು ಓಡಾಡಿದ್ದಾರೆ. ಕಾಂತೇಶ್ ಅವರಿಗೆ ಸಾಮಾಜಿಕ ನ್ಯಾಯದ ಹಿನ್ನೆಲೆಯಲ್ಲಿ ಟಿಕೆಟ್ ಕೊಡಬೇಕೆಂದು ಸಂಸದೀಯ ಮಂಡಳಿಗೆ ನಾನು ಮನವಿ ಮಾಡಿದ್ದೆ’ ಎಂದರು.