ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ನಾಯಕರಿಗೆ ಕಳ್ಳರು, ಸುಳ್ಳರು, ವಂಚಕರು ಆಪ್ತರಾಗುವುದು ಏಕೆ?: ಕಾಂಗ್ರೆಸ್‌

Published 14 ಸೆಪ್ಟೆಂಬರ್ 2023, 13:01 IST
Last Updated 14 ಸೆಪ್ಟೆಂಬರ್ 2023, 13:01 IST
ಅಕ್ಷರ ಗಾತ್ರ

ಬೆಂಗಳೂರು: ಹಗರಣದ ಆರೋಪಿಗಳು, ಕಳ್ಳರು, ಸುಳ್ಳರು ಸೇರಿದಂತೆ ರೌಡಿ ಶೀಟರ್‌ಗಳು ಬಿಜೆಪಿಯ ಕೆಲ ನಾಯಕರಿಗೇ ಆಪ್ತರಾಗುವುದೇಕೆ ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

ಬಸನಗೌಡ ಯತ್ನಾಳ್‌ ಹಾಗೂ ಚೈತ್ರಾ ಕುಂದಾಪುರ ಅವರು ಒಟ್ಟಿಗೆ ಇರುವ ಚಿತ್ರವನ್ನು ಹಂಚಿಕೊಂಡಿರುವ ಕಾಂಗ್ರೆಸ್‌, ಬಿಜೆಪಿಯಲ್ಲಿ ಸಿಎಂ ಹುದ್ದೆಗೆ ₹ 2.5 ಸಾವಿರ ಕೋಟಿ ನೀಡಬೇಕು ಎಂಬ ಸತ್ಯ ಬಹಿರಂಗಪಡಿಸಿದ್ದ ಬಸನಗೌಡ ಯತ್ನಾಳ್‌ ಪಾಟೀಲ್ ಅವರು ಬಿಜೆಪಿ ಟಿಕೆಟ್‌ಗೆ ₹7 ಕೋಟಿ ಕೊಡಬೇಕು ಎಂದು ವಂಚಿಸಿದ ಆರೋಪಿಯೊಂದಿಗೆ ಕಾಣಿಸಿಕೊಂಡಿದ್ದಾರೆ ಎಂದು ಹೇಳಿದೆ.

ಸ್ಯಾಂಟ್ರೋ ರವಿಯೂ ಬಿಜೆಪಿಗರಿಗೆ ಆಪ್ತ, PSI ಹಗರಣದ ಆರೋಪಿಗಳೂ ಬಿಜೆಪಿಗರಿಗೆ ಆಪ್ತರು, ರೌಡಿ ಶೀಟರ್‌ಗಳೂ ಬಿಜೆಪಿಗರಿಗೆ ಆಪ್ತರು, ಟಿಕೆಟ್ ಹಗರಣದ ವಂಚಕರೂ ಬಿಜೆಪಿಗರಿಗೆ ಆಪ್ತರು. ಕಳ್ಳರು, ಸುಳ್ಳರು, ವಂಚಕರು ಬಿಜೆಪಿಯ ನಾಯಕರಿಗೇ ಆಪ್ತವಾಗುವುದೇಕೆ? ಎಂದು ಕುಟುಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT