ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಹಾಲಿ ಸಭಾಪತಿ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಜೆಡಿಎಸ್ನವರು ಬಹಿರಂಗವಾಗಿ ಬೆಂಬಲಿಸಿದ್ದಾರೆ. ಬೆಂಬಲ ಇಲ್ಲದ ಮೇಲೆ, ಬಹುಮತ ಇಲ್ಲದ ಮೇಲೆ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಕೊಡಿಸುವುದು ಕಾಂಗ್ರೆಸ್ನವರ ಕರ್ತವ್ಯ. ಕಾನೂನಿನ ಚೌಕಟ್ಟಿನ ಪ್ರಕಾರ ಒಂದು ಬಾರಿ ನಿಮ್ಮ ಮೇಲೆ ಅವಿಶ್ವಾಸ ನಿರ್ಣಯ ಆದ ಬಳಿಕ ನಿಮಗೆ ಆ ಕುರ್ಚಿಯಲ್ಲಿ ಕುಳಿತುಕೊಳ್ಳಲು ಅರ್ಹತೆಯಿಲ್ಲ. ಇದು ಇಡೀ ಜಗತ್ತಿಗೆ ಗೊತ್ತಿರುವ ವಿಷಯ’ ಎಂದರು.