‘ಇದೇ ವಿಧಾನಸಭೆಯಲ್ಲಿ 2002 ಜೂನ್ 24ರಂದು, ಅಂದಿನ ಲೋಕಸಭಾಧ್ಯಕ್ಷರಾಗಿದ್ದ ಮನೋಹರ್ ಜೋಶಿ ಭಾಷಣ ಮಾಡಿದ್ದರು. ಆಗ ಎಸ್.ಎಂ. ಕೃಷ್ಣ ಅವರು ರಾಜ್ಯದ ಮುಖ್ಯಮಂತ್ರಿ ಆಗಿದ್ದರು. ವಿಧಾನಸಭೆಗಳಲ್ಲಿ ಲೋಕಸಭಾಧ್ಯಕ್ಷರು ಮಾತನಾಡಿರುವುದು ಇದು ಮೊದಲೇನಲ್ಲ. ಬೇರೆ ರಾಜ್ಯಗಳ ವಿಧಾನಸಭೆಗಳಲ್ಲೂ ಲೋಕಸಭಾಧ್ಯಕ್ಷರು ಭಾಷಣ ಮಾಡಿದ್ದಾರೆ. ಭಾಗವಹಿಸಿದ್ದು ತಪ್ಪು ಎನ್ನುವವರಿಗೆ ಇದು ಅರ್ಥವಾಗಿಲ್ಲ. ನಾವು ತೆಗೆದುಕೊಳ್ಳುವ ನಿರ್ಣಯವೇ ಅಂತಿಮ. ತೆಗೆದುಕೊಂಡ ನಿರ್ಣಯ ಬೇರೆಯವರು ಆಕ್ಷೇಪಿಸುವಂತಿಲ್ಲ. ಸಂವಿಧಾನ ಉಲ್ಲಂಘನೆ ಆಗಿಲ್ಲ’ ಎಂದರು.