<p><strong>ಬೆಂಗಳೂರು: </strong>ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ರಾಜ್ ಇಲಾಖೆ ಯಿಂದ ನಿಯೋಜನೆ ಮೇರೆಗೆ ಬೇರೆ ಇಲಾಖೆಗೆ ಹೋಗಿರುವ ಅಧಿಕಾರಿಗಳನ್ನು ವಾಪಸ್ ಕರೆಸಿಕೊಳ್ಳಲಾಗುವುದು ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.</p>.<p>ವಿಧಾನಸಭೆಯಲ್ಲಿ ಬುಧವಾರ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಸಂಜೀವ ಮಠಂದೂರು ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಇನ್ನು ಮುಂದೆ ಯಾವುದೇ ಅಧಿಕಾರಿಗಳನ್ನು ನಿಯೋಜನೆ ಮೇರೆಗೆ ಕಳುಹಿಸುವುದಿಲ್ಲ. ಈಗಾಗಲೇ ನಿಯೋಜನೆ ಮೇರೆಗೆ ಹೋಗಿರುವವರನ್ನು ವಾಪಸ್ ಕರೆಸಿಕೊಳ್ಳುವುದು ಕಷ್ಟ’ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.</p>.<p>ಜೆಡಿಎಸ್ನ ವೆಂಕಟರಾವ್ ನಾಡಗೌಡ, ‘ಪಶು ಸಂಗೋಪನೆ ಇಲಾಖೆಯಿಂದ ನಿಯೋಜನೆ ಮೇರೆಗೆ ಹೋಗಿದ್ದವರನ್ನು ನಾನು ಸಚಿವನಾಗಿದ್ದ ವೇಳೆಗೆ ವಾಪಸ್ ಕರೆಸಿಕೊಂಡಿದ್ದೆ. ನೀವು ಸಹ ಆದೇಶ ಹೊರಡಿಸಿ ಈ ಬಗ್ಗೆ ಕ್ರಮ ಕೈಗೊಳ್ಳಿ’ ಎಂದು ಒತ್ತಾಯಿಸಿದರು.</p>.<p>ಈಶ್ವರಪ್ಪ, ‘ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ಆಪ್ತ ಸಹಾಯಕರಾಗಿ ಹಾಕಿಸಿಕೊಡಿ ಎಂದು ಹಲವು ಶಾಸಕರು ನನ್ನ ಮೇಲೆ ನಿರಂತರ ಒತ್ತಡ ಹೇರುತ್ತಿರುತ್ತಾರೆ. ಅನಿವಾರ್ಯವಾಗಿ ನಿಯೋಜನೆ ಮೇರೆಗೆ ಕಳುಹಿಸಬೇಕಾಗುತ್ತದೆ. ಇಲ್ಲಿ ಗದ್ದಲ ಎಬ್ಬಿಸುವವರೇ ಮತ್ತೆ ಪತ್ರ ಹಿಡಿದುಕೊಂಡು ಬರುತ್ತಾರೆ. ಇಡೀ ಸದನ ಒಪ್ಪಿದರೆ ಈ ಅಧಿಕಾರಿಗಳನ್ನು ವಾಪಸ್ ಕರೆಸಿಕೊಳ್ಳಲು ನಾನು ಸಿದ್ಧ’ ಎಂದು ಹೇಳಿದರು. ಇಲಾಖೆಗೆ ವಾಪಸ್ ಕರೆಸಿಕೊಳ್ಳಿ ಎಂದು ಹಲವು ಸದಸ್ಯರು ಒತ್ತಾಯಿಸಿದರು.</p>.<p>‘ಈ ಬಗ್ಗೆ ಆದೇಶ ಹೊರಡಿಸುತ್ತೇನೆ’ ಎಂದು ಈಶ್ವರಪ್ಪ ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ರಾಜ್ ಇಲಾಖೆ ಯಿಂದ ನಿಯೋಜನೆ ಮೇರೆಗೆ ಬೇರೆ ಇಲಾಖೆಗೆ ಹೋಗಿರುವ ಅಧಿಕಾರಿಗಳನ್ನು ವಾಪಸ್ ಕರೆಸಿಕೊಳ್ಳಲಾಗುವುದು ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.</p>.<p>ವಿಧಾನಸಭೆಯಲ್ಲಿ ಬುಧವಾರ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಸಂಜೀವ ಮಠಂದೂರು ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಇನ್ನು ಮುಂದೆ ಯಾವುದೇ ಅಧಿಕಾರಿಗಳನ್ನು ನಿಯೋಜನೆ ಮೇರೆಗೆ ಕಳುಹಿಸುವುದಿಲ್ಲ. ಈಗಾಗಲೇ ನಿಯೋಜನೆ ಮೇರೆಗೆ ಹೋಗಿರುವವರನ್ನು ವಾಪಸ್ ಕರೆಸಿಕೊಳ್ಳುವುದು ಕಷ್ಟ’ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.</p>.<p>ಜೆಡಿಎಸ್ನ ವೆಂಕಟರಾವ್ ನಾಡಗೌಡ, ‘ಪಶು ಸಂಗೋಪನೆ ಇಲಾಖೆಯಿಂದ ನಿಯೋಜನೆ ಮೇರೆಗೆ ಹೋಗಿದ್ದವರನ್ನು ನಾನು ಸಚಿವನಾಗಿದ್ದ ವೇಳೆಗೆ ವಾಪಸ್ ಕರೆಸಿಕೊಂಡಿದ್ದೆ. ನೀವು ಸಹ ಆದೇಶ ಹೊರಡಿಸಿ ಈ ಬಗ್ಗೆ ಕ್ರಮ ಕೈಗೊಳ್ಳಿ’ ಎಂದು ಒತ್ತಾಯಿಸಿದರು.</p>.<p>ಈಶ್ವರಪ್ಪ, ‘ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ಆಪ್ತ ಸಹಾಯಕರಾಗಿ ಹಾಕಿಸಿಕೊಡಿ ಎಂದು ಹಲವು ಶಾಸಕರು ನನ್ನ ಮೇಲೆ ನಿರಂತರ ಒತ್ತಡ ಹೇರುತ್ತಿರುತ್ತಾರೆ. ಅನಿವಾರ್ಯವಾಗಿ ನಿಯೋಜನೆ ಮೇರೆಗೆ ಕಳುಹಿಸಬೇಕಾಗುತ್ತದೆ. ಇಲ್ಲಿ ಗದ್ದಲ ಎಬ್ಬಿಸುವವರೇ ಮತ್ತೆ ಪತ್ರ ಹಿಡಿದುಕೊಂಡು ಬರುತ್ತಾರೆ. ಇಡೀ ಸದನ ಒಪ್ಪಿದರೆ ಈ ಅಧಿಕಾರಿಗಳನ್ನು ವಾಪಸ್ ಕರೆಸಿಕೊಳ್ಳಲು ನಾನು ಸಿದ್ಧ’ ಎಂದು ಹೇಳಿದರು. ಇಲಾಖೆಗೆ ವಾಪಸ್ ಕರೆಸಿಕೊಳ್ಳಿ ಎಂದು ಹಲವು ಸದಸ್ಯರು ಒತ್ತಾಯಿಸಿದರು.</p>.<p>‘ಈ ಬಗ್ಗೆ ಆದೇಶ ಹೊರಡಿಸುತ್ತೇನೆ’ ಎಂದು ಈಶ್ವರಪ್ಪ ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>