<p><strong>ಬೆಂಗಳೂರು:</strong> ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ಹಮ್ಮಿಕೊಂಡಿರುವ ಪಾದಯಾತ್ರೆಗೆ ಮಂಗಳವಾರ ಜನಸಾಗರವೇ ಹರಿದುಬಂದಿದೆ. ಸಾವಿರಾರು ಜನರು ಪಾದಯಾತ್ರೆಯಲ್ಲಿ ಹೆಜ್ಜೆ ಹಾಕುತ್ತಿರುವುದರಿಂದ ಮೈಸೂರುರಸ್ತೆಯುದ್ದಕ್ಕೂ ಸಂಚಾರ ದಟ್ಟಣೆ ಸೃಷ್ಟಿಯಾಗಿದೆ.</p>.<p>ಬೆಂಗಳೂರಿನ ಹಲವು ವಿಧಾನಸಭಾ ಕ್ಷೇತ್ರಗಳು ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಬಂದಿರುವ ಜನರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದಾರೆ. ಕಿಲೋಮೀಟರ್ ಗಟ್ಟಲೆ ಜನದಟ್ಟಣೆ ಕಂಡುಬರುತ್ತಿದೆ.</p>.<p>ಮೈಸೂರು ರಸ್ತೆಯ ಒಂದು ಭಾಗದಲ್ಲಿ ಪಾದಯಾತ್ರೆ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಇನ್ನೊಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಕೆಲವು ಜಂಕ್ಷನ್ಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ.</p>.<p><strong>ನೀರು, ಕಬ್ಬಿನ ಹಾಲು:</strong>ಪಾದಯಾತ್ರೆ ಸಂಚರಿಸುವ ಮಾರ್ಗದಲ್ಲಿ ಅಲ್ಲಲ್ಲಿ ಅರವಟಿಗೆಗಳನ್ನು ಸ್ಥಾಪಿಸಲಾಗಿದೆ. ಕುಡಿಯುವ ನೀರು ಮತ್ತು ಕಬ್ಬಿನ ಹಾಲು ವಿತರಿಸಲಾಗುತ್ತಿದೆ.</p>.<p>ಕಬ್ಬಿನ ಹಾಲು ವಿತರಣೆಗಾಗಿ ಲಾರಿಗಳಲ್ಲಿ ಕಬ್ಬಿನ ಜಲ್ಲೆಗಳನ್ನು ತರಲಾಗಿದೆ.</p>.<p><strong>ಜೆಸಿಬಿ ಬಳಸಿ ಹೂಮಳೆ:</strong>ಮೈಸೂರು ರಸ್ತೆಯಲ್ಲಿ ಪಾದಯಾತ್ರೆ ಹಾದು ಬರುವಾಗ ಜೆಸಿಬಿಗಳನ್ನು ಬಳಸಿ ಹೂಮಳೆಗರೆಯಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ಹಮ್ಮಿಕೊಂಡಿರುವ ಪಾದಯಾತ್ರೆಗೆ ಮಂಗಳವಾರ ಜನಸಾಗರವೇ ಹರಿದುಬಂದಿದೆ. ಸಾವಿರಾರು ಜನರು ಪಾದಯಾತ್ರೆಯಲ್ಲಿ ಹೆಜ್ಜೆ ಹಾಕುತ್ತಿರುವುದರಿಂದ ಮೈಸೂರುರಸ್ತೆಯುದ್ದಕ್ಕೂ ಸಂಚಾರ ದಟ್ಟಣೆ ಸೃಷ್ಟಿಯಾಗಿದೆ.</p>.<p>ಬೆಂಗಳೂರಿನ ಹಲವು ವಿಧಾನಸಭಾ ಕ್ಷೇತ್ರಗಳು ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಬಂದಿರುವ ಜನರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದಾರೆ. ಕಿಲೋಮೀಟರ್ ಗಟ್ಟಲೆ ಜನದಟ್ಟಣೆ ಕಂಡುಬರುತ್ತಿದೆ.</p>.<p>ಮೈಸೂರು ರಸ್ತೆಯ ಒಂದು ಭಾಗದಲ್ಲಿ ಪಾದಯಾತ್ರೆ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಇನ್ನೊಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಕೆಲವು ಜಂಕ್ಷನ್ಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ.</p>.<p><strong>ನೀರು, ಕಬ್ಬಿನ ಹಾಲು:</strong>ಪಾದಯಾತ್ರೆ ಸಂಚರಿಸುವ ಮಾರ್ಗದಲ್ಲಿ ಅಲ್ಲಲ್ಲಿ ಅರವಟಿಗೆಗಳನ್ನು ಸ್ಥಾಪಿಸಲಾಗಿದೆ. ಕುಡಿಯುವ ನೀರು ಮತ್ತು ಕಬ್ಬಿನ ಹಾಲು ವಿತರಿಸಲಾಗುತ್ತಿದೆ.</p>.<p>ಕಬ್ಬಿನ ಹಾಲು ವಿತರಣೆಗಾಗಿ ಲಾರಿಗಳಲ್ಲಿ ಕಬ್ಬಿನ ಜಲ್ಲೆಗಳನ್ನು ತರಲಾಗಿದೆ.</p>.<p><strong>ಜೆಸಿಬಿ ಬಳಸಿ ಹೂಮಳೆ:</strong>ಮೈಸೂರು ರಸ್ತೆಯಲ್ಲಿ ಪಾದಯಾತ್ರೆ ಹಾದು ಬರುವಾಗ ಜೆಸಿಬಿಗಳನ್ನು ಬಳಸಿ ಹೂಮಳೆಗರೆಯಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>