‘ಸ್ವಾಮೀಜಿಯವರು 2 ಎ ಮೀಸಲಾತಿಗಾಗಿ ಹೋರಾಟ ಮಾಡಿದ್ದರು. ಸರ್ಕಾರ ಮೀಸಲಾತಿ ಪ್ರಕಟಿಸಿ, ಆದೇಶ ಪತ್ರವನ್ನು ಸ್ವಾಮೀಜಿಯವರಿಗೆ ನೀಡಿದ ನಂತರ ಹೋರಾಟವನ್ನು ಹಿಂದಕ್ಕೆ ಪಡೆದಿದ್ದರು. ಇದರಿಂದ ಅಸಮಾಧಾನಗೊಂಡಿರುವ ಕಾಂಗ್ರೆಸ್ನ ಕೆಲವು ನಾಯಕರು ಮದ್ಯಪಾನ ಮಾಡಿ, ಸ್ವಾಮೀಜಿಯವರೊಂದಿಗೆ ಅಗೌರವದಿಂದ ಮಾತನಾಡಿದ್ದಾರೆ. ಈ ಮೂಲಕ ಪಂಚಮಸಾಲಿ ಸಮುದಾಯಕ್ಕೆ ಅಗೌರವವುಂಟು ಮಾಡಿದ್ದಾರೆ’ ಎಂದು ಪಾಟೀಲ ಹೇಳಿದರು.