<p><strong>ಬೆಂಗಳೂರು</strong>: ರಾಜ್ಯ ಸರ್ಕಾರ ಪ್ರಕಟಿಸಿದ ಮೀಸಲಾತಿಯನ್ನು ಒಪ್ಪಿ ಹೋರಾಟ ನಿಲ್ಲಿಸಿದ ಕಾರಣ ಕೂಡಲ ಸಂಗಮಪೀಠದ ಜಯಮೃತ್ಯುಂಜಯ ಸ್ವಾಮೀಜಿ ಅವರಿಗೆ ಕಾಂಗ್ರೆಸ್ನ ಕೆಲವು ನಾಯಕರು ದೂರವಾಣಿ ಕರೆ ಮಾಡಿ ಅಗೌರವ ತೋರುತ್ತಿದ್ದಾರೆ ಎಂದು ಸಚಿವ ಸಿ.ಸಿ.ಪಾಟೀಲ ಮತ್ತು ಶಾಸಕ ಅರವಿಂದ ಬೆಲ್ಲದ ಅವರು ಆರೋಪಿಸಿದ್ದಾರೆ.</p>.<p>ಬಿಜೆಪಿ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಈ ಸಂಬಂಧ ದೂರು ನೀಡಿದ್ದಾರೆ. ಸ್ವಾಮೀಜಿಯವರಿಗೆ ಸೂಕ್ತ ಭದ್ರತಾ ವ್ಯವಸ್ಥೆ ಮಾಡುವುದಾಗಿ ಬೊಮ್ಮಾಯಿ ಭರವಸೆ ನೀಡಿದರು.</p>.<p>‘ಸ್ವಾಮೀಜಿಯವರು 2 ಎ ಮೀಸಲಾತಿಗಾಗಿ ಹೋರಾಟ ಮಾಡಿದ್ದರು. ಸರ್ಕಾರ ಮೀಸಲಾತಿ ಪ್ರಕಟಿಸಿ, ಆದೇಶ ಪತ್ರವನ್ನು ಸ್ವಾಮೀಜಿಯವರಿಗೆ ನೀಡಿದ ನಂತರ ಹೋರಾಟವನ್ನು ಹಿಂದಕ್ಕೆ ಪಡೆದಿದ್ದರು. ಇದರಿಂದ ಅಸಮಾಧಾನಗೊಂಡಿರುವ ಕಾಂಗ್ರೆಸ್ನ ಕೆಲವು ನಾಯಕರು ಮದ್ಯಪಾನ ಮಾಡಿ, ಸ್ವಾಮೀಜಿಯವರೊಂದಿಗೆ ಅಗೌರವದಿಂದ ಮಾತನಾಡಿದ್ದಾರೆ. ಈ ಮೂಲಕ ಪಂಚಮಸಾಲಿ ಸಮುದಾಯಕ್ಕೆ ಅಗೌರವವುಂಟು ಮಾಡಿದ್ದಾರೆ’ ಎಂದು ಪಾಟೀಲ ಹೇಳಿದರು.</p>.<p>ಮೀಸಲಾತಿ ವಿಚಾರವನ್ನು ಚುನಾವಣಾ ರಾಜಕೀಯಕ್ಕೆ ಬಳಸಿಕೊಳ್ಳಲು ಉದ್ದೇಶಿಸಿತ್ತು. ಮುಖ್ಯಮಂತ್ರಿಯವರ ದಿಟ್ಟ ನಿರ್ಧಾರದಿಂದ ಕಾಂಗ್ರೆಸ್ ಹತಾಶೆಗೊಂಡಿದೆ. ಹೀಗಾಗಿ ಸ್ವಾಮೀಜಿಯವರ ಮೇಲೆ ಮುಗಿಬಿದ್ದಿದ್ದಾರೆ. ಪಂಚಮಸಾಲಿ ಸಮುದಾಯ ಎಲ್ಲ ವರ್ಗವನ್ನೂ ಒಟ್ಟಿಗೆ ಕರೆದುಕೊಂಡು ಹೋಗಿದೆ. ಈ ಹೋರಾಟದಿಂದ ಅನೇಕ ಸಮುದಾಯಗಳಿಗೆ ಅನುಕೂಲವಾಗಿದೆ ಎಂದರು.</p>.<p>ಸ್ವಾಮೀಜಿಯವರಿಗೆ ಕರೆ ಮಾಡಿ ಅಗೌರವದಿಂದ ಮಾತನಾಡುತ್ತಿರುವ ಕಾಂಗ್ರೆಸ್ ನಾಯಕರು ಹೆಸರು ಹೇಳಿ ಎಂದು ಸುದ್ದಿಗಾರರು ಒತ್ತಾಯಿಸಿದಾಗ, ಹೆಸರು ಹೇಳುವುದಿಲ್ಲ. ಹೋರಾಟದಲ್ಲಿ ಇದ್ದವರೇ ಆ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜ್ಯ ಸರ್ಕಾರ ಪ್ರಕಟಿಸಿದ ಮೀಸಲಾತಿಯನ್ನು ಒಪ್ಪಿ ಹೋರಾಟ ನಿಲ್ಲಿಸಿದ ಕಾರಣ ಕೂಡಲ ಸಂಗಮಪೀಠದ ಜಯಮೃತ್ಯುಂಜಯ ಸ್ವಾಮೀಜಿ ಅವರಿಗೆ ಕಾಂಗ್ರೆಸ್ನ ಕೆಲವು ನಾಯಕರು ದೂರವಾಣಿ ಕರೆ ಮಾಡಿ ಅಗೌರವ ತೋರುತ್ತಿದ್ದಾರೆ ಎಂದು ಸಚಿವ ಸಿ.ಸಿ.ಪಾಟೀಲ ಮತ್ತು ಶಾಸಕ ಅರವಿಂದ ಬೆಲ್ಲದ ಅವರು ಆರೋಪಿಸಿದ್ದಾರೆ.</p>.<p>ಬಿಜೆಪಿ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಈ ಸಂಬಂಧ ದೂರು ನೀಡಿದ್ದಾರೆ. ಸ್ವಾಮೀಜಿಯವರಿಗೆ ಸೂಕ್ತ ಭದ್ರತಾ ವ್ಯವಸ್ಥೆ ಮಾಡುವುದಾಗಿ ಬೊಮ್ಮಾಯಿ ಭರವಸೆ ನೀಡಿದರು.</p>.<p>‘ಸ್ವಾಮೀಜಿಯವರು 2 ಎ ಮೀಸಲಾತಿಗಾಗಿ ಹೋರಾಟ ಮಾಡಿದ್ದರು. ಸರ್ಕಾರ ಮೀಸಲಾತಿ ಪ್ರಕಟಿಸಿ, ಆದೇಶ ಪತ್ರವನ್ನು ಸ್ವಾಮೀಜಿಯವರಿಗೆ ನೀಡಿದ ನಂತರ ಹೋರಾಟವನ್ನು ಹಿಂದಕ್ಕೆ ಪಡೆದಿದ್ದರು. ಇದರಿಂದ ಅಸಮಾಧಾನಗೊಂಡಿರುವ ಕಾಂಗ್ರೆಸ್ನ ಕೆಲವು ನಾಯಕರು ಮದ್ಯಪಾನ ಮಾಡಿ, ಸ್ವಾಮೀಜಿಯವರೊಂದಿಗೆ ಅಗೌರವದಿಂದ ಮಾತನಾಡಿದ್ದಾರೆ. ಈ ಮೂಲಕ ಪಂಚಮಸಾಲಿ ಸಮುದಾಯಕ್ಕೆ ಅಗೌರವವುಂಟು ಮಾಡಿದ್ದಾರೆ’ ಎಂದು ಪಾಟೀಲ ಹೇಳಿದರು.</p>.<p>ಮೀಸಲಾತಿ ವಿಚಾರವನ್ನು ಚುನಾವಣಾ ರಾಜಕೀಯಕ್ಕೆ ಬಳಸಿಕೊಳ್ಳಲು ಉದ್ದೇಶಿಸಿತ್ತು. ಮುಖ್ಯಮಂತ್ರಿಯವರ ದಿಟ್ಟ ನಿರ್ಧಾರದಿಂದ ಕಾಂಗ್ರೆಸ್ ಹತಾಶೆಗೊಂಡಿದೆ. ಹೀಗಾಗಿ ಸ್ವಾಮೀಜಿಯವರ ಮೇಲೆ ಮುಗಿಬಿದ್ದಿದ್ದಾರೆ. ಪಂಚಮಸಾಲಿ ಸಮುದಾಯ ಎಲ್ಲ ವರ್ಗವನ್ನೂ ಒಟ್ಟಿಗೆ ಕರೆದುಕೊಂಡು ಹೋಗಿದೆ. ಈ ಹೋರಾಟದಿಂದ ಅನೇಕ ಸಮುದಾಯಗಳಿಗೆ ಅನುಕೂಲವಾಗಿದೆ ಎಂದರು.</p>.<p>ಸ್ವಾಮೀಜಿಯವರಿಗೆ ಕರೆ ಮಾಡಿ ಅಗೌರವದಿಂದ ಮಾತನಾಡುತ್ತಿರುವ ಕಾಂಗ್ರೆಸ್ ನಾಯಕರು ಹೆಸರು ಹೇಳಿ ಎಂದು ಸುದ್ದಿಗಾರರು ಒತ್ತಾಯಿಸಿದಾಗ, ಹೆಸರು ಹೇಳುವುದಿಲ್ಲ. ಹೋರಾಟದಲ್ಲಿ ಇದ್ದವರೇ ಆ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>