ಮುಂದಿನ ಲೋಕಸಭೆ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ರಾಜ್ಯದಲ್ಲಿ ಗೆಲ್ಲಬೇಕಿದೆ. ಇದಕ್ಕೆ ಎಲ್ಲಾ ಸಮುದಾಯಗಳ ಬೆಂಬಲ ಬೇಕಾಗುತ್ತದೆ. ಮೂವರು ಉಪಮುಖ್ಯಮಂತ್ರಿಗಳನ್ನು ನೇಮಕ ಮಾಡಿದರೆ ಚುನಾವಣೆಯಲ್ಲಿ ಅನುಕೂಲವಾಗಲಿದೆ ಎಂದಿದ್ದಾರೆ.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಹೋದರ ಸಂಸದ ಡಿ.ಕೆ.ಸುರೇಶ್ ವಿರುದ್ಧ ಹೇಳಿಕೆ ನೀಡುತ್ತಿಲ್ಲ. ಶಿವಕುಮಾರ್ ಉಪಮುಖ್ಯಮಂತ್ರಿ ಇದ್ದಾರೆ. ಇತರರಿಗೂ ಅವಕಾಶ ನೀಡಬೇಕು ಎಂಬುದು ತಮ್ಮ ವಾದವಾಗಿದೆ. ಅವಕಾಶ ಕೇಳುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.
ಬಿಜೆಪಿ ಶಾಸಕರಾದ ಎಸ್.ಟಿ.ಸೋಮಶೇಖರ್, ಶಿವರಾಮ ಹೆಬ್ಬಾರ್ ಕಾಂಗ್ರೆಸ್ಗೆ ಬರುವ ಬಗ್ಗೆ ಮಾಹಿತಿ ಇದೆ. ಮತ್ತೊಬ್ಬ ಮುಖಂಡ ವಿ.ಸೋಮಣ್ಣ ಪಕ್ಷಕ್ಕೆ ಬಂದು ತುಮಕೂರು ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬುದು ಗಾಳಿ ಸುದ್ದಿ. ಜೆಡಿಎಸ್ ಮಾಜಿ ಶಾಸಕ ಡಿ.ಸಿ.ಗೌರಿಶಂಕರ್ ಪಕ್ಷಕ್ಕೆ ಬರುವ ಬಗ್ಗೆ ಮಾಹಿತಿ ಇಲ್ಲ ಎಂದು ಹೇಳಿದರು.