<p><strong>ಹೂವಿನಹಡಗಲಿ:</strong> ತಾಲ್ಲೂಕಿನ ಸೋವೇನಹಳ್ಳಿ ಗ್ರಾಮ ಬಳಿಯ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಮೂವರು ಯುವಕರು ಶುಕ್ರವಾರ ಮೃತಪಟ್ಟಿದ್ದಾರೆ.</p>.<p>ಸೋವೇನಹಳ್ಳಿಯ ಮಲ್ಲನಕೇರಿ ಸುರೇಶ (25), ಕೋಗಳಿ ಮಾರುತಿ (23), ಹಂಪಸಾಗರದ ಪಿ.ಫಕ್ರುದ್ದೀನ್ (25) ಮೃತರು.<br />ಐದು ಜನ ಸ್ನೇಹಿತರು ಏಕಕಾಲಕ್ಕೆ ನದಿಗೆ ಇಳಿದಿದ್ದು, ಈ ಪೈಕಿ ಮಂಜುನಾಥ ಈಜಿ ದಡ ಸೇರುವ ಜತೆಗೆ ಅಪಾಯಕ್ಕೆ ಸಿಲುಕಿದ್ದ ಗುಂಡಪ್ಪನನ್ನು ರಕ್ಷಿಸಿದ್ದಾರೆ. ಪ್ರತಿದಿನವೂ ಯುವಕರು ಗುಂಪಾಗಿ ನದಿ ಸ್ನಾನಕ್ಕೆ ಹೋಗುತ್ತಿದ್ದರು. ಇಂದು ಆಳವಾದ ಗುಂಡಿಗಳಿರುವ ಸ್ಥಳಕ್ಕೆ ತೆರಳಿ ಯುವಕರು ದುರಂತ ಸಾವಿಗೀಡಾಗಿದ್ದಾರೆ.</p>.<p>‘ನದಿ ಪಾತ್ರದಲ್ಲಿ ಮರಳು ಗಣಿಗಾರಿಕೆಗಾಗಿ ನಿಯಮಮೀರಿ ಆಳವಾದ ಗುಂಡಿಗಳನ್ನು ತೋಡಲಾಗಿದ್ದು, ಅವು ಸಾವಿನ ಗುಂಡಿಗಳಾಗಿ ಮಾರ್ಪಟ್ಟು ಯುವಕರನ್ನು ಬಲಿ ಪಡೆದಿವೆ’ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.<br />ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಮೀನುಗಾರರು ನದಿಯಲ್ಲಿ ಶವ ಹುಡುಕಾಟ ನಡೆಸಿದರು. ಸಂಜೆಯಾದರೂ ಶವಗಳು ಪತ್ತೆಯಾಗಿರಲಿಲ್ಲ.</p>.<p>ಸ್ಥಳಕ್ಕೆ ತಹಶೀಲ್ದಾರ್ ಕೆ.ವಿಜಯಕುಮಾರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಯು.ಎಚ್. ಸೋಮಶೇಖರ, ಪಿಎಸ್ಐ ಎಸ್.ಪಿ.ನಾಯ್ಕ ಭೇಟಿ ನೀಡಿ ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೂವಿನಹಡಗಲಿ:</strong> ತಾಲ್ಲೂಕಿನ ಸೋವೇನಹಳ್ಳಿ ಗ್ರಾಮ ಬಳಿಯ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಮೂವರು ಯುವಕರು ಶುಕ್ರವಾರ ಮೃತಪಟ್ಟಿದ್ದಾರೆ.</p>.<p>ಸೋವೇನಹಳ್ಳಿಯ ಮಲ್ಲನಕೇರಿ ಸುರೇಶ (25), ಕೋಗಳಿ ಮಾರುತಿ (23), ಹಂಪಸಾಗರದ ಪಿ.ಫಕ್ರುದ್ದೀನ್ (25) ಮೃತರು.<br />ಐದು ಜನ ಸ್ನೇಹಿತರು ಏಕಕಾಲಕ್ಕೆ ನದಿಗೆ ಇಳಿದಿದ್ದು, ಈ ಪೈಕಿ ಮಂಜುನಾಥ ಈಜಿ ದಡ ಸೇರುವ ಜತೆಗೆ ಅಪಾಯಕ್ಕೆ ಸಿಲುಕಿದ್ದ ಗುಂಡಪ್ಪನನ್ನು ರಕ್ಷಿಸಿದ್ದಾರೆ. ಪ್ರತಿದಿನವೂ ಯುವಕರು ಗುಂಪಾಗಿ ನದಿ ಸ್ನಾನಕ್ಕೆ ಹೋಗುತ್ತಿದ್ದರು. ಇಂದು ಆಳವಾದ ಗುಂಡಿಗಳಿರುವ ಸ್ಥಳಕ್ಕೆ ತೆರಳಿ ಯುವಕರು ದುರಂತ ಸಾವಿಗೀಡಾಗಿದ್ದಾರೆ.</p>.<p>‘ನದಿ ಪಾತ್ರದಲ್ಲಿ ಮರಳು ಗಣಿಗಾರಿಕೆಗಾಗಿ ನಿಯಮಮೀರಿ ಆಳವಾದ ಗುಂಡಿಗಳನ್ನು ತೋಡಲಾಗಿದ್ದು, ಅವು ಸಾವಿನ ಗುಂಡಿಗಳಾಗಿ ಮಾರ್ಪಟ್ಟು ಯುವಕರನ್ನು ಬಲಿ ಪಡೆದಿವೆ’ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.<br />ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಮೀನುಗಾರರು ನದಿಯಲ್ಲಿ ಶವ ಹುಡುಕಾಟ ನಡೆಸಿದರು. ಸಂಜೆಯಾದರೂ ಶವಗಳು ಪತ್ತೆಯಾಗಿರಲಿಲ್ಲ.</p>.<p>ಸ್ಥಳಕ್ಕೆ ತಹಶೀಲ್ದಾರ್ ಕೆ.ವಿಜಯಕುಮಾರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಯು.ಎಚ್. ಸೋಮಶೇಖರ, ಪಿಎಸ್ಐ ಎಸ್.ಪಿ.ನಾಯ್ಕ ಭೇಟಿ ನೀಡಿ ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>