<p><strong>ಬೆಂಗಳೂರು</strong>: ‘ಬ್ಯಾಂಕ್ಗೆ ವಂಚಿಸಿದ ಆರೋಪದಡಿಯ ಕ್ರಿಮಿನಲ್ ಪ್ರಕರಣದಲ್ಲಿ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಅವರಿಗೆ ಜನಪ್ರತಿನಿಧಿಗಳ ಸೆಷನ್ಸ್ ನ್ಯಾಯಾಲಯ 3 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.</p>.<p>ಈ ಕುರಿತಂತೆ ಪ್ರಕರಣದ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರು ಗುರುವಾರ ಪ್ರಕಟಿಸಿದರು.</p>.<p>ಭ್ರಷ್ಟಾಚಾರ ನಿವಾರಣಾ ಕಾಯ್ದೆ–1988ರ ಕಲಂ 120 ಬಿ, 420, 467 ಮತ್ತು 471ರ ಅಡಿಯಲ್ಲಿ ಈ ಶಿಕ್ಷೆ ಪ್ರಕಟಿಸಲಾಗಿದ್ದು, ಕೃಷ್ಣಯ್ಯ ಶೆಟ್ಟಿ ಅವರಿಗೆ ₹5.25 ಲಕ್ಷ ಹಾಗೂ ಮೊದಲನೇ ಆರೋಪಿ ಎಂಟಿವಿ ರೆಡ್ಡಿ ಅವರಿಗೆ ₹7.75 ಲಕ್ಷ ದಂಡ ವಿಧಿಸಲಾಗಿದೆ. ಪ್ರಕರಣದಲ್ಲಿ ಆರೋಪಿಗಳಾಗಿದ್ದ ಮುನಿರಾಜು ಮತ್ತು ಶ್ರೀನಿವಾಸ್ ಅವರೂ ಶಿಕ್ಷೆಗೆ ಗುರಿಯಾಗಿದ್ದಾರೆ.</p>.<p>ಇದೇ ವೇಳೆ ಕೃಷ್ಣಯ್ಯ ಶೆಟ್ಟಿ ಪರ ವಕೀಲ ನಾಗೇಂದ್ರ ನಾಯಕ್ ಅವರ ಮನವಿಯ ಮೇರೆಗೆ ನ್ಯಾಯಾಧೀಶರು ಶಿಕ್ಷೆಯನ್ನು ಒಂದು ತಿಂಗಳ ಕಾಲ ಅಮಾನತಿನಲ್ಲಿ ಇರಿಸಿ ಆದೇಶಿಸಿದ್ದು, ಮೇಲ್ಮನವಿ ಸಲ್ಲಿಸಲು ಕಾಲಾವಕಾಶ ನೀಡಿದ್ದಾರೆ. ₹5.25 ಲಕ್ಷ ಬಾಂಡ್ ಹಾಗೂ ಒಬ್ಬರ ಭದ್ರತೆ ಒದಗಿಸಲು ನಿರ್ದೇಶಿಸಿದ್ದಾರೆ.</p>.<p>ಪ್ರಕರಣವೇನು?: ‘ಕೃಷ್ಣಯ್ಯ ಶೆಟ್ಟಿ 1993ರಲ್ಲಿ ಬಾಲಾಜಿ ಕೃಪಾ ಎಂಟರ್ಪ್ರೈಸಸ್ ಮಾಲೀಕರಾಗಿದ್ದರು. ಈ ವೇಳೆ ಅವರು ಬಿಟಿಎಸ್, ಕೆಎಸ್ಆರ್ಟಿಸಿ, ಬಿಎಸ್ಎನ್ಎಲ್, ಐಟಿಐ, ಎಚ್ಎಎಲ್, ಬಿಇಎಂಎಲ್ ಮತ್ತು ಎಡಿಇ ಸಾರ್ವಜನಿಕ ಉದ್ದಿಮೆಗಳ 181 ನೌಕರರಿಗೆ ಗೃಹ ನಿರ್ಮಾಣಕ್ಕೆ ಸಾಲ ಕೊಡಿಸುವುದಾಗಿ ಹೇಳಿ ವಂಚನೆ ನಡೆಸಿದ್ದಾರೆ. ಬ್ಯಾಂಕ್ನಿಂದ ಪಡೆದಿದ್ದ ಮೊತ್ತದಲ್ಲಿ ₹3.53 ಕೋಟಿ ಸಾಲ ತೀರಿಸಿಲ್ಲ ಹಾಗೂ ₹7.17 ಕೋಟಿ ಸಾಲಕ್ಕೆ ನಕಲಿ ದಾಖಲೆ ಸೃಷ್ಟಿಸಲಾಗಿದೆ’ ಎಂದು ಆರೋಪಿಸಲಾಗಿತ್ತು. ಮುಖ್ಯ ವಿಚಕ್ಷಣಾ ದಳದ ಅಂದಿನ ಮುಖ್ಯಸ್ಥ ಆರ್.ಡಿ.ನಾಯ್ಡು ನೀಡಿದ್ದ ದೂರು ಆಧರಿಸಿ, ಸಿಬಿಐ ತನಿಖೆ ನಡೆಸಿ ದೋಷಾರೋಪ ಪಟ್ಟಿ ಸಲ್ಲಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಬ್ಯಾಂಕ್ಗೆ ವಂಚಿಸಿದ ಆರೋಪದಡಿಯ ಕ್ರಿಮಿನಲ್ ಪ್ರಕರಣದಲ್ಲಿ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಅವರಿಗೆ ಜನಪ್ರತಿನಿಧಿಗಳ ಸೆಷನ್ಸ್ ನ್ಯಾಯಾಲಯ 3 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.</p>.<p>ಈ ಕುರಿತಂತೆ ಪ್ರಕರಣದ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರು ಗುರುವಾರ ಪ್ರಕಟಿಸಿದರು.</p>.<p>ಭ್ರಷ್ಟಾಚಾರ ನಿವಾರಣಾ ಕಾಯ್ದೆ–1988ರ ಕಲಂ 120 ಬಿ, 420, 467 ಮತ್ತು 471ರ ಅಡಿಯಲ್ಲಿ ಈ ಶಿಕ್ಷೆ ಪ್ರಕಟಿಸಲಾಗಿದ್ದು, ಕೃಷ್ಣಯ್ಯ ಶೆಟ್ಟಿ ಅವರಿಗೆ ₹5.25 ಲಕ್ಷ ಹಾಗೂ ಮೊದಲನೇ ಆರೋಪಿ ಎಂಟಿವಿ ರೆಡ್ಡಿ ಅವರಿಗೆ ₹7.75 ಲಕ್ಷ ದಂಡ ವಿಧಿಸಲಾಗಿದೆ. ಪ್ರಕರಣದಲ್ಲಿ ಆರೋಪಿಗಳಾಗಿದ್ದ ಮುನಿರಾಜು ಮತ್ತು ಶ್ರೀನಿವಾಸ್ ಅವರೂ ಶಿಕ್ಷೆಗೆ ಗುರಿಯಾಗಿದ್ದಾರೆ.</p>.<p>ಇದೇ ವೇಳೆ ಕೃಷ್ಣಯ್ಯ ಶೆಟ್ಟಿ ಪರ ವಕೀಲ ನಾಗೇಂದ್ರ ನಾಯಕ್ ಅವರ ಮನವಿಯ ಮೇರೆಗೆ ನ್ಯಾಯಾಧೀಶರು ಶಿಕ್ಷೆಯನ್ನು ಒಂದು ತಿಂಗಳ ಕಾಲ ಅಮಾನತಿನಲ್ಲಿ ಇರಿಸಿ ಆದೇಶಿಸಿದ್ದು, ಮೇಲ್ಮನವಿ ಸಲ್ಲಿಸಲು ಕಾಲಾವಕಾಶ ನೀಡಿದ್ದಾರೆ. ₹5.25 ಲಕ್ಷ ಬಾಂಡ್ ಹಾಗೂ ಒಬ್ಬರ ಭದ್ರತೆ ಒದಗಿಸಲು ನಿರ್ದೇಶಿಸಿದ್ದಾರೆ.</p>.<p>ಪ್ರಕರಣವೇನು?: ‘ಕೃಷ್ಣಯ್ಯ ಶೆಟ್ಟಿ 1993ರಲ್ಲಿ ಬಾಲಾಜಿ ಕೃಪಾ ಎಂಟರ್ಪ್ರೈಸಸ್ ಮಾಲೀಕರಾಗಿದ್ದರು. ಈ ವೇಳೆ ಅವರು ಬಿಟಿಎಸ್, ಕೆಎಸ್ಆರ್ಟಿಸಿ, ಬಿಎಸ್ಎನ್ಎಲ್, ಐಟಿಐ, ಎಚ್ಎಎಲ್, ಬಿಇಎಂಎಲ್ ಮತ್ತು ಎಡಿಇ ಸಾರ್ವಜನಿಕ ಉದ್ದಿಮೆಗಳ 181 ನೌಕರರಿಗೆ ಗೃಹ ನಿರ್ಮಾಣಕ್ಕೆ ಸಾಲ ಕೊಡಿಸುವುದಾಗಿ ಹೇಳಿ ವಂಚನೆ ನಡೆಸಿದ್ದಾರೆ. ಬ್ಯಾಂಕ್ನಿಂದ ಪಡೆದಿದ್ದ ಮೊತ್ತದಲ್ಲಿ ₹3.53 ಕೋಟಿ ಸಾಲ ತೀರಿಸಿಲ್ಲ ಹಾಗೂ ₹7.17 ಕೋಟಿ ಸಾಲಕ್ಕೆ ನಕಲಿ ದಾಖಲೆ ಸೃಷ್ಟಿಸಲಾಗಿದೆ’ ಎಂದು ಆರೋಪಿಸಲಾಗಿತ್ತು. ಮುಖ್ಯ ವಿಚಕ್ಷಣಾ ದಳದ ಅಂದಿನ ಮುಖ್ಯಸ್ಥ ಆರ್.ಡಿ.ನಾಯ್ಡು ನೀಡಿದ್ದ ದೂರು ಆಧರಿಸಿ, ಸಿಬಿಐ ತನಿಖೆ ನಡೆಸಿ ದೋಷಾರೋಪ ಪಟ್ಟಿ ಸಲ್ಲಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>