<p><strong>ಬೆಂಗಳೂರು:</strong> ರಾಜ್ಯದ ವಿವಿಧೆಡೆ ಶುಕ್ರವಾರ ಮಳೆಯಾಗಿದ್ದು, ಬಿಸಿಲಿನಿಂದ ತತ್ತರಿಸಿದ ಜನತೆಗೆ ತಂಪೆರೆದಿದೆ.</p>.<p>ಬೆಳಗಾವಿ, ಹುಬ್ಬಳ್ಳಿ–ಧಾರವಾಡ, ಗದಗ, ವಿಜಯಪುರ, ಹಾವೇರಿ ಜಿಲ್ಲೆಗಳಲ್ಲಿ ಸಾಯಂಕಾಲ ಗುಡುಗು ಸಹಿತ ಮಳೆಯಾಗಿದೆ.</p>.<p>ಬೆಳಗಾವಿ ನಗರ ಮತ್ತು ರಾಮದುರ್ಗ, ಅಥಣಿ, ಗೋಕಾಕದಲ್ಲಿ ಕೆಲ ಕಾಲ ಜೋರು ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಯಿತು. ವಿಜಯಪುರ ಜಿಲ್ಲೆಯ ಹೊರ್ತಿ, ತಿಕೋಟಾ, ಕಲಕೇರಿ, ಸಿಂದಗಿಯಲ್ಲಿಯೂ ಗುಡುಗು, ಸಿಡಿಲಿನ ಮಳೆ ಬಿದ್ದಿದೆ.</p>.<p>ಹುಬ್ಬಳ್ಳಿ, ಧಾರವಾಡ ನಗರದಲ್ಲಿ ಕೆಲ ಸಮಯ ಧಾರಾಕಾರ ಮಳೆಯಾಗಿದೆ. ಹಾವೇರಿಯ ಹಾನಗಲ್ ಹಾಗೂ ಗದಗದಲ್ಲಿಯೂ ಮಳೆಯಾಗಿದೆ.</p>.<p>ಕಳಸ ಪಟ್ಟಣ ಮತ್ತು ಆಸುಪಾಸಿನ ಪ್ರದೇಶದಲ್ಲಿ ಶುಕ್ರವಾರ ಸಂಜೆ ಉತ್ತಮ ಮಳೆ ಸುರಿಯಿತು. ಎರಡು ದಿನಗಳಿಂದ ಮೋಡ ಕವಿದರೂ, ಮಳೆಯಾಗದೇ ರೈತರು ನಿರಾಶರಾಗಿದ್ದರು.</p>.<p>ಸಂಜೆ 4 ಗಂಟೆಗೆ ಭಾರಿ ಗಾಳಿ ಜೊತೆಗೆ ಸುಮಾರು ಅರ್ಧಗಂಟೆ ಉತ್ತಮ ಮಳೆಯಾಯಿತು. ತೇವಾಂಶದ ಕೊರತೆಯಿಂದ ಬಳಲುತ್ತಿದ್ದ ಅಡಿಕೆ, ಕಾಫಿ ಫಸಲಿಗೆ ಈ ಮಳೆ ಅನುಕೂಲವಾಗಿದೆ. ಗರಿಷ್ಠ ಪ್ರಮಾಣಕ್ಕೆ ಏರಿದ್ದ ಹಗಲಿನ ಉಷ್ಣಾಂಶ ಕೂಡ ಈ ಮಳೆಯಿಂದ ಕುಸಿದಿದೆ.</p>.<p>ಕಲಬುರ್ಗಿ ನಗರವೂ ಸೇರಿದಂತೆ ತಾಲ್ಲೂಕಿನ ವಿವಿಧೆಡೆ ಶುಕ್ರವಾರ ಮಧ್ಯಾಹ್ನ ಅರ್ಧ ಗಂಟೆಗೂ ಹೆಚ್ಚು ತುಂತುರು ಮಳೆ ಸುರಿಯಿತು.</p>.<p>ಒಂದು ವಾರದಿಂದ ನಗರದ ಗರಿಷ್ಠ ಉಷ್ಣಾಂಶ 40ರಿಂದ 42 ಡಿಗ್ರಿ ದಾಟಿದೆ. ಬಿಸಿಲಿನ ತಾಪಕ್ಕೆ ತತ್ತರಿಸಿದ ಜನರಿಗೆ ಶುಕ್ರವಾರ ಸುರಿದ ಮಳೆ ತುಸು ತಂಪೆರೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದ ವಿವಿಧೆಡೆ ಶುಕ್ರವಾರ ಮಳೆಯಾಗಿದ್ದು, ಬಿಸಿಲಿನಿಂದ ತತ್ತರಿಸಿದ ಜನತೆಗೆ ತಂಪೆರೆದಿದೆ.</p>.<p>ಬೆಳಗಾವಿ, ಹುಬ್ಬಳ್ಳಿ–ಧಾರವಾಡ, ಗದಗ, ವಿಜಯಪುರ, ಹಾವೇರಿ ಜಿಲ್ಲೆಗಳಲ್ಲಿ ಸಾಯಂಕಾಲ ಗುಡುಗು ಸಹಿತ ಮಳೆಯಾಗಿದೆ.</p>.<p>ಬೆಳಗಾವಿ ನಗರ ಮತ್ತು ರಾಮದುರ್ಗ, ಅಥಣಿ, ಗೋಕಾಕದಲ್ಲಿ ಕೆಲ ಕಾಲ ಜೋರು ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಯಿತು. ವಿಜಯಪುರ ಜಿಲ್ಲೆಯ ಹೊರ್ತಿ, ತಿಕೋಟಾ, ಕಲಕೇರಿ, ಸಿಂದಗಿಯಲ್ಲಿಯೂ ಗುಡುಗು, ಸಿಡಿಲಿನ ಮಳೆ ಬಿದ್ದಿದೆ.</p>.<p>ಹುಬ್ಬಳ್ಳಿ, ಧಾರವಾಡ ನಗರದಲ್ಲಿ ಕೆಲ ಸಮಯ ಧಾರಾಕಾರ ಮಳೆಯಾಗಿದೆ. ಹಾವೇರಿಯ ಹಾನಗಲ್ ಹಾಗೂ ಗದಗದಲ್ಲಿಯೂ ಮಳೆಯಾಗಿದೆ.</p>.<p>ಕಳಸ ಪಟ್ಟಣ ಮತ್ತು ಆಸುಪಾಸಿನ ಪ್ರದೇಶದಲ್ಲಿ ಶುಕ್ರವಾರ ಸಂಜೆ ಉತ್ತಮ ಮಳೆ ಸುರಿಯಿತು. ಎರಡು ದಿನಗಳಿಂದ ಮೋಡ ಕವಿದರೂ, ಮಳೆಯಾಗದೇ ರೈತರು ನಿರಾಶರಾಗಿದ್ದರು.</p>.<p>ಸಂಜೆ 4 ಗಂಟೆಗೆ ಭಾರಿ ಗಾಳಿ ಜೊತೆಗೆ ಸುಮಾರು ಅರ್ಧಗಂಟೆ ಉತ್ತಮ ಮಳೆಯಾಯಿತು. ತೇವಾಂಶದ ಕೊರತೆಯಿಂದ ಬಳಲುತ್ತಿದ್ದ ಅಡಿಕೆ, ಕಾಫಿ ಫಸಲಿಗೆ ಈ ಮಳೆ ಅನುಕೂಲವಾಗಿದೆ. ಗರಿಷ್ಠ ಪ್ರಮಾಣಕ್ಕೆ ಏರಿದ್ದ ಹಗಲಿನ ಉಷ್ಣಾಂಶ ಕೂಡ ಈ ಮಳೆಯಿಂದ ಕುಸಿದಿದೆ.</p>.<p>ಕಲಬುರ್ಗಿ ನಗರವೂ ಸೇರಿದಂತೆ ತಾಲ್ಲೂಕಿನ ವಿವಿಧೆಡೆ ಶುಕ್ರವಾರ ಮಧ್ಯಾಹ್ನ ಅರ್ಧ ಗಂಟೆಗೂ ಹೆಚ್ಚು ತುಂತುರು ಮಳೆ ಸುರಿಯಿತು.</p>.<p>ಒಂದು ವಾರದಿಂದ ನಗರದ ಗರಿಷ್ಠ ಉಷ್ಣಾಂಶ 40ರಿಂದ 42 ಡಿಗ್ರಿ ದಾಟಿದೆ. ಬಿಸಿಲಿನ ತಾಪಕ್ಕೆ ತತ್ತರಿಸಿದ ಜನರಿಗೆ ಶುಕ್ರವಾರ ಸುರಿದ ಮಳೆ ತುಸು ತಂಪೆರೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>