ಕೋಲಾರ, ಶ್ರೀನಿವಾಸಪುರ, ಮುಳಬಾಗಿಲು, ಮಾಲೂರು, ಕೆಜಿಎಫ್ ಹಾಗೂ ಬಂಗಾರಪೇಟೆ ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗಿದ್ದು, ಜಮೀನುಗಳು ಹದವಾಗಿವೆ. ಮಳೆಯ ನಿರೀಕ್ಷೆಯಲ್ಲಿದ್ದ ಮಾವು ಬೆಳೆಗಾರರಿಗೆ ತುಸು ನೆಮ್ಮದಿ ಸಿಕ್ಕಿದೆ. ಗಾಳಿಯ ತೀವ್ರತೆ ಹೆಚ್ಚಿದ್ದ ಕಾರಣಕ್ಕೆ ಕೆಲವೆಡೆ ಮಾವಿನ ಕಾಯಿ ಉದುರಿವೆ. ಉಳಿದಂತೆ ಮಳೆಯಿಂದ ಹೆಚ್ಚಿನ ಅನಾಹುತವಾಗಿಲ್ಲ.