<p><strong>ಬೆಂಗಳೂರು:</strong> ಮುಂಗಾರು ಆಗಮನಕ್ಕೂ ಮುನ್ನ ರಾಜ್ಯದಲ್ಲಿ ಆಗಾಗ ಮಳೆ ಸುರಿಯಲಾರಂಭಿಸಿದೆ. ಗಾಳಿ, ಗುಡುಗು, ಮಿಂಚು, ಆಲಿಕಲ್ಲು ಸಮೇತ ಮಳೆಯಾಗುತ್ತಿದೆ. ಹೀಗಾಗಿ ಅಪಾಯದಿಂದ ತಪ್ಪಿಸಿಕೊಳ್ಳಲು ಏನೆಲ್ಲಾ ಮುಂಜಾಗೃತಾ ಕ್ರಮವಹಿಸಬೇಕು ಎನ್ನುವ ಬಗ್ಗೆ ಉತ್ತರಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಕೆಲವು ಸಲಹೆಗಳನ್ನು ನೀಡಿದೆ.</p>.<ul><li><p>ಪ್ರತಿಕೂಲ ಹವಾಮಾನದ ಸಮಯದಲ್ಲಿ ವಿಶೇಷವಾಗಿ ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡಲು, ಜಾನುವಾರುಗಳನ್ನು ಮೇಯಿಸಲು ಮೀನುಗಾರಿಕೆ ಮತ್ತು ದೋಣಿಗಳನ್ನು ನಡೆಸಲು ಅಥವಾ ಸಾಮಾನ್ಯ ಪ್ರಯಾಣಕ್ಕಾಗಿ ಮನೆಯಿಂದ ಹೊರಗೆ ಹೋಗುವುದು ಸೂಕ್ತವಲ್ಲ.</p></li></ul><ul><li><p>ಗುಡುಗು-ಸಿಡಿಲಿನ ಸಂದರ್ಭದಲ್ಲಿ ಲೋಹದ ತಗಡನ್ನು ಹೊದಿಸಿರುವ ಮನೆಗಳು ಸುರಕ್ಷಿತವಲ್ಲ. ಸುರಕ್ಷಿತವಾದ ಕಟ್ಟಡಗಳಲ್ಲಿ ಅಶ್ರಯ ಪಡೆಯಿರಿ ಬೆಟ್ಟ ಗುಡ್ಡಗಳಂತಹ ಎತ್ತರದ ಪ್ರದೇಶಗಳಿಂದ ಕೆಳಗೆ ಇಳಿದು ಆಶ್ರಯ ಪಡೆಯಬಹುದು.</p></li><li><p>ನೀರಿನ ಮೂಲಗಳಾದ ಕೆರೆ, ತೋಡು ಮತ್ತು ನದಿಗಳಿಂದ ದೂರವಿರಿ. ವಿದ್ಯುತ್ ಉಪಕರಣ ಹಾಗೂ ವಿದ್ಯುತ್ ಸರಬರಾಜು ಮಾರ್ಗ, ದೂರವಾಣಿ ಸಂಪರ್ಕ, ಮೊಬೈಲ್ ಟವರ್, ಪವನ ವಿದ್ಯುತ್ ಗೋಪುರ ಹಾಗೂ ರೈಲು ಹಳಿಗಳಿಂದ ದೂರವಿರಿ.</p></li><li><p>ವಾಹನ ಚಾಲನೆ ಮಾಡುತ್ತಿದ್ದರೆ, ತಕ್ಷಣವೇ ನಿಲ್ಲಿಸಿ ಅದರಲ್ಲೇ ಆಶ್ರಯ ಪಡೆಯಿರಿ. ವಾಹನದ ಕಿಟಕಿಗಳನ್ನು ಮುಚ್ಚಿ. ಅರಣ್ಯ ಪ್ರದೇಶದಿಂದ ಹಾಗೂ ಗಿಡ-ಮರಗಳಿಲ್ಲದ ಸ್ವಚ್ಛ ಪ್ರದೇಶದ ಕಡೆಗೆ ಸಾಗಿರಿ. ಮೋಟಾರ್ ಸೈಕಲ್ ಅಥವಾ ಇನ್ನಿತರೆ ಯಾವುದೇ ತೆರೆದ ವಾಹನಗಳ ಸಂಚಾರವನ್ನು ಮಾಡದಿರಿ</p></li><li><p>ಚಾರ್ಜ್ಗೆ ಹಾಕಿರುವ ಫೋನ್ ಅನ್ನು ಬಳಸಬೇಡಿ. ಗುಡುಗು ಸಿಡಿಲಿನ ಸಮಯದಲ್ಲಿ ಗುಂಪಿನಲ್ಲಿದ್ದರೆ, ಅಪಾಯವನ್ನು ಕಡಿಮೆ ಮಾಡಲು ದೂರ ನಿಂತು ಅಂತರವನ್ನು ಕಾಯ್ದುಕೊಳ್ಳಿ.</p></li><li><p>ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಹೊರಾಂಗಣದಲ್ಲಿ ಕೆಲಸ ಮಾಡುತ್ತಿದ್ದರೆ ಅಥವಾ ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಲು ಸಾಕಷ್ಟು ಸಮಯವಿಲ್ಲದಿದ್ದರೆ, ಕಾಲುಗಳನ್ನು ಜೋಡಿಸಿ ಮಂಡಿಯೂರಿ ಕುಳಿತುಕೊಂಡು ತಲೆಯನ್ನು ಬಗ್ಗಿಸಿ ಕಿವಿಗಳನ್ನು ಮುಚ್ಚಿಕೊಳ್ಳಿ.</p></li><li><p>ಹೊರಗೆ ಹೋಗುವ ಅನಿವಾರ್ಯವಿದ್ದಲ್ಲಿ ಹವಾಮಾನ ಮುನ್ಸೂಚನೆ ಹಾಗೂ ಮುನ್ನಚ್ಚರಿಕೆಗಳಿಗಾಗಿ SACHET APP. DAMNY APP, SIDILU APP, Common Alerting Protocol (CAP) ಮುಖಾಂತರಗಳಿಂದ ಹವಾಮಾನ ಇಲಾಖೆ ನೀಡುವ ಸಂದೇಶಗಳನ್ನು ಗಮನಿಸಿ.</p></li><li><p>ವಿದ್ಯುತ್ ಅಥವಾ ಟೆಲಿಫೋನ್ ಕಂಬಗಳು ಅಥವಾ ಮರಗಳ ಕೆಳಗೆ ಅಶ್ರಯ ಪಡೆಯಬೇಡಿ. ಇವು ಮಿಂಚನ್ನು ಆಕರ್ಷಿಸುತ್ತವೆ. ಲೋಹದ ವಸ್ತುಗಳನ್ನು ಬಳಸಬೇಡಿ. ಬೈಕುಗಳು, ವಿದ್ಯುತ್ ಅಥವಾ ದೂರವಾಣಿ ಕಂಬಗಳು, ತಂತಿ ಬೇಲಿ, ಯಂತ್ರಗಳು ಇತ್ಯಾದಿಗಳಿಂದ ದೂರವಿರಿ.</p></li><li><p>ಕಬ್ಬಿಣದ ಸರಳುಗಳಿಂದ ಕೂಡಿದ ಕೊಡೆ (ಛತ್ರಿ)ಗಳನ್ನು ಬಳಸಬೇಡಿ.</p></li><li><p>ಗುಡುಗು ಸಿಡಿಲಿನ ಸಮಯದಲ್ಲಿ ಕಿಟಕಿ, ಬಾಗಿಲುಗಳನ್ನು ಮುಚ್ಚಿ ಮತ್ತು ವಿದ್ಯುತ್ ಶಕ್ತಿ ಸಂಪರ್ಕದಿಂದ ದೂರವಿರಿ.</p></li><li><p>ಮಕ್ಕಳು, ವಯೋವೃದ್ಧರು ಹಾಗೂ ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ನೋಡಿಕೊಳ್ಳಿ.</p></li><li><p>ಹಾರುವ ಮತ್ತು ಅಪಘಾತಕ್ಕೆ ಕಾರಣವಾಗಬಹುದಾದ ಮರದ ಕಟ್ಟಿಗೆ ಅಥವಾ ಇತರೆ ಯಾವುದೇ ಅವಶೇಷಗಳಿಂದ ದೂರವಿರಿ.</p></li><li><p>ಗುಡುಗು ಸಿಡಿಲಿನ ಮುನ್ಸೂಚನೆ ಅಥವಾ ಮುನ್ನೆಚ್ಚರಿಕೆ ಇದ್ದಲ್ಲಿ ಪ್ರಯಾಣವನ್ನು ಮುಂದೂಡಿ.</p></li><li><p>ಆಟದ ಮೈದಾನ, ಉದ್ಯಾನವನಗಳು ಈಜುಕೊಳ ಮತ್ತು ಕಡಲ ತೀರಗಳಿಗೆ ಹೋಗುವುದನ್ನು ತಪ್ಪಿಸಿ. ದೋಣಿ ವಿಹಾರ ಅಥವಾ ಈಜುತ್ತಿದ್ದರೆ, ಸಾಧ್ಯವಾದಷ್ಟು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಿರಿ.</p></li><li><p>ಕೆಲವು ಸಲ ಮಿಂಚಿನ ಹೊಡೆತದಿಂದಾಗಿ ಕಾಳ್ಗಿಚ್ಚು ಸಂಭವಿಸುವ ಸಾಧ್ಯತೆ ಇರುತ್ತದೆ. ಅಂತಹ ಸಂದರ್ಭದಲ್ಲಿ ಜಿಲ್ಲಾಡಳಿತದ ತುರ್ತು ಕಾರ್ಯಚರಣಾ ಕೇಂದ್ರಕ್ಕೆ ಮಾಹಿತಿ ನೀಡಿ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.</p></li></ul>.ರಾಜ್ಯದ ವಿವಿಧೆಡೆ ಮಾರ್ಚ್ 22ರಿಂದ ನಾಲ್ಕು ದಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆ.ಹವಾಮಾನ ಬದಲಾವಣೆ: ತಜ್ಞರ ಕಳವಳ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮುಂಗಾರು ಆಗಮನಕ್ಕೂ ಮುನ್ನ ರಾಜ್ಯದಲ್ಲಿ ಆಗಾಗ ಮಳೆ ಸುರಿಯಲಾರಂಭಿಸಿದೆ. ಗಾಳಿ, ಗುಡುಗು, ಮಿಂಚು, ಆಲಿಕಲ್ಲು ಸಮೇತ ಮಳೆಯಾಗುತ್ತಿದೆ. ಹೀಗಾಗಿ ಅಪಾಯದಿಂದ ತಪ್ಪಿಸಿಕೊಳ್ಳಲು ಏನೆಲ್ಲಾ ಮುಂಜಾಗೃತಾ ಕ್ರಮವಹಿಸಬೇಕು ಎನ್ನುವ ಬಗ್ಗೆ ಉತ್ತರಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಕೆಲವು ಸಲಹೆಗಳನ್ನು ನೀಡಿದೆ.</p>.<ul><li><p>ಪ್ರತಿಕೂಲ ಹವಾಮಾನದ ಸಮಯದಲ್ಲಿ ವಿಶೇಷವಾಗಿ ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡಲು, ಜಾನುವಾರುಗಳನ್ನು ಮೇಯಿಸಲು ಮೀನುಗಾರಿಕೆ ಮತ್ತು ದೋಣಿಗಳನ್ನು ನಡೆಸಲು ಅಥವಾ ಸಾಮಾನ್ಯ ಪ್ರಯಾಣಕ್ಕಾಗಿ ಮನೆಯಿಂದ ಹೊರಗೆ ಹೋಗುವುದು ಸೂಕ್ತವಲ್ಲ.</p></li></ul><ul><li><p>ಗುಡುಗು-ಸಿಡಿಲಿನ ಸಂದರ್ಭದಲ್ಲಿ ಲೋಹದ ತಗಡನ್ನು ಹೊದಿಸಿರುವ ಮನೆಗಳು ಸುರಕ್ಷಿತವಲ್ಲ. ಸುರಕ್ಷಿತವಾದ ಕಟ್ಟಡಗಳಲ್ಲಿ ಅಶ್ರಯ ಪಡೆಯಿರಿ ಬೆಟ್ಟ ಗುಡ್ಡಗಳಂತಹ ಎತ್ತರದ ಪ್ರದೇಶಗಳಿಂದ ಕೆಳಗೆ ಇಳಿದು ಆಶ್ರಯ ಪಡೆಯಬಹುದು.</p></li><li><p>ನೀರಿನ ಮೂಲಗಳಾದ ಕೆರೆ, ತೋಡು ಮತ್ತು ನದಿಗಳಿಂದ ದೂರವಿರಿ. ವಿದ್ಯುತ್ ಉಪಕರಣ ಹಾಗೂ ವಿದ್ಯುತ್ ಸರಬರಾಜು ಮಾರ್ಗ, ದೂರವಾಣಿ ಸಂಪರ್ಕ, ಮೊಬೈಲ್ ಟವರ್, ಪವನ ವಿದ್ಯುತ್ ಗೋಪುರ ಹಾಗೂ ರೈಲು ಹಳಿಗಳಿಂದ ದೂರವಿರಿ.</p></li><li><p>ವಾಹನ ಚಾಲನೆ ಮಾಡುತ್ತಿದ್ದರೆ, ತಕ್ಷಣವೇ ನಿಲ್ಲಿಸಿ ಅದರಲ್ಲೇ ಆಶ್ರಯ ಪಡೆಯಿರಿ. ವಾಹನದ ಕಿಟಕಿಗಳನ್ನು ಮುಚ್ಚಿ. ಅರಣ್ಯ ಪ್ರದೇಶದಿಂದ ಹಾಗೂ ಗಿಡ-ಮರಗಳಿಲ್ಲದ ಸ್ವಚ್ಛ ಪ್ರದೇಶದ ಕಡೆಗೆ ಸಾಗಿರಿ. ಮೋಟಾರ್ ಸೈಕಲ್ ಅಥವಾ ಇನ್ನಿತರೆ ಯಾವುದೇ ತೆರೆದ ವಾಹನಗಳ ಸಂಚಾರವನ್ನು ಮಾಡದಿರಿ</p></li><li><p>ಚಾರ್ಜ್ಗೆ ಹಾಕಿರುವ ಫೋನ್ ಅನ್ನು ಬಳಸಬೇಡಿ. ಗುಡುಗು ಸಿಡಿಲಿನ ಸಮಯದಲ್ಲಿ ಗುಂಪಿನಲ್ಲಿದ್ದರೆ, ಅಪಾಯವನ್ನು ಕಡಿಮೆ ಮಾಡಲು ದೂರ ನಿಂತು ಅಂತರವನ್ನು ಕಾಯ್ದುಕೊಳ್ಳಿ.</p></li><li><p>ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಹೊರಾಂಗಣದಲ್ಲಿ ಕೆಲಸ ಮಾಡುತ್ತಿದ್ದರೆ ಅಥವಾ ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಲು ಸಾಕಷ್ಟು ಸಮಯವಿಲ್ಲದಿದ್ದರೆ, ಕಾಲುಗಳನ್ನು ಜೋಡಿಸಿ ಮಂಡಿಯೂರಿ ಕುಳಿತುಕೊಂಡು ತಲೆಯನ್ನು ಬಗ್ಗಿಸಿ ಕಿವಿಗಳನ್ನು ಮುಚ್ಚಿಕೊಳ್ಳಿ.</p></li><li><p>ಹೊರಗೆ ಹೋಗುವ ಅನಿವಾರ್ಯವಿದ್ದಲ್ಲಿ ಹವಾಮಾನ ಮುನ್ಸೂಚನೆ ಹಾಗೂ ಮುನ್ನಚ್ಚರಿಕೆಗಳಿಗಾಗಿ SACHET APP. DAMNY APP, SIDILU APP, Common Alerting Protocol (CAP) ಮುಖಾಂತರಗಳಿಂದ ಹವಾಮಾನ ಇಲಾಖೆ ನೀಡುವ ಸಂದೇಶಗಳನ್ನು ಗಮನಿಸಿ.</p></li><li><p>ವಿದ್ಯುತ್ ಅಥವಾ ಟೆಲಿಫೋನ್ ಕಂಬಗಳು ಅಥವಾ ಮರಗಳ ಕೆಳಗೆ ಅಶ್ರಯ ಪಡೆಯಬೇಡಿ. ಇವು ಮಿಂಚನ್ನು ಆಕರ್ಷಿಸುತ್ತವೆ. ಲೋಹದ ವಸ್ತುಗಳನ್ನು ಬಳಸಬೇಡಿ. ಬೈಕುಗಳು, ವಿದ್ಯುತ್ ಅಥವಾ ದೂರವಾಣಿ ಕಂಬಗಳು, ತಂತಿ ಬೇಲಿ, ಯಂತ್ರಗಳು ಇತ್ಯಾದಿಗಳಿಂದ ದೂರವಿರಿ.</p></li><li><p>ಕಬ್ಬಿಣದ ಸರಳುಗಳಿಂದ ಕೂಡಿದ ಕೊಡೆ (ಛತ್ರಿ)ಗಳನ್ನು ಬಳಸಬೇಡಿ.</p></li><li><p>ಗುಡುಗು ಸಿಡಿಲಿನ ಸಮಯದಲ್ಲಿ ಕಿಟಕಿ, ಬಾಗಿಲುಗಳನ್ನು ಮುಚ್ಚಿ ಮತ್ತು ವಿದ್ಯುತ್ ಶಕ್ತಿ ಸಂಪರ್ಕದಿಂದ ದೂರವಿರಿ.</p></li><li><p>ಮಕ್ಕಳು, ವಯೋವೃದ್ಧರು ಹಾಗೂ ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ನೋಡಿಕೊಳ್ಳಿ.</p></li><li><p>ಹಾರುವ ಮತ್ತು ಅಪಘಾತಕ್ಕೆ ಕಾರಣವಾಗಬಹುದಾದ ಮರದ ಕಟ್ಟಿಗೆ ಅಥವಾ ಇತರೆ ಯಾವುದೇ ಅವಶೇಷಗಳಿಂದ ದೂರವಿರಿ.</p></li><li><p>ಗುಡುಗು ಸಿಡಿಲಿನ ಮುನ್ಸೂಚನೆ ಅಥವಾ ಮುನ್ನೆಚ್ಚರಿಕೆ ಇದ್ದಲ್ಲಿ ಪ್ರಯಾಣವನ್ನು ಮುಂದೂಡಿ.</p></li><li><p>ಆಟದ ಮೈದಾನ, ಉದ್ಯಾನವನಗಳು ಈಜುಕೊಳ ಮತ್ತು ಕಡಲ ತೀರಗಳಿಗೆ ಹೋಗುವುದನ್ನು ತಪ್ಪಿಸಿ. ದೋಣಿ ವಿಹಾರ ಅಥವಾ ಈಜುತ್ತಿದ್ದರೆ, ಸಾಧ್ಯವಾದಷ್ಟು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಿರಿ.</p></li><li><p>ಕೆಲವು ಸಲ ಮಿಂಚಿನ ಹೊಡೆತದಿಂದಾಗಿ ಕಾಳ್ಗಿಚ್ಚು ಸಂಭವಿಸುವ ಸಾಧ್ಯತೆ ಇರುತ್ತದೆ. ಅಂತಹ ಸಂದರ್ಭದಲ್ಲಿ ಜಿಲ್ಲಾಡಳಿತದ ತುರ್ತು ಕಾರ್ಯಚರಣಾ ಕೇಂದ್ರಕ್ಕೆ ಮಾಹಿತಿ ನೀಡಿ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.</p></li></ul>.ರಾಜ್ಯದ ವಿವಿಧೆಡೆ ಮಾರ್ಚ್ 22ರಿಂದ ನಾಲ್ಕು ದಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆ.ಹವಾಮಾನ ಬದಲಾವಣೆ: ತಜ್ಞರ ಕಳವಳ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>