ವಿಚಾರಣೆ ವೇಳೆ ಜಗ್ಗೇಶ್ ಪರ ವಾದ ಮಂಡಿಸಿದ ಹಿರಿಯ ವಕೀಲ ಪ್ರಭುಲಿಂಗ ಕೆ. ನಾವದಗಿ, ‘ಸಾಮಾಜಿಕ ಜಾಲತಾಣದಲ್ಲಿನ ಚಿತ್ರವನ್ನು ಆಧರಿಸಿ ನೋಟಿಸ್ ನೀಡಿದ ಒಂದೇ ತಾಸಿನಲ್ಲಿ 14 ಅಧಿಕಾರಿಗಳ ತಂಡ ಜಗ್ಗೇಶ್ ಅವರ ಮನೆಯಲ್ಲಿ ಶೋಧ ನಡೆಸಿದೆ. ಶೋಧದ ಬಳಿಕ ಅರ್ಜಿದಾರರ ಮನೆಯ ಹೊರಗೆ ಮಾಧ್ಯಮಗೋಷ್ಠಿ ನಡೆಸಲಾಗಿದೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ–1972ರ ಕಲಂ 39 ಮತ್ತು 40 ಈ ಪ್ರಕರಣಕ್ಕೆ ಅನ್ವಯಿಸುವುದಿಲ್ಲ‘ ಎಂದರು.