ಬೆಂಗಳೂರಿನ ಬನ್ನೇರುಘಟ್ಟ ಜೈವಿಕ ಉದ್ಯಾನದಿಂದ ಪ್ರಾಣಿ ವಿನಿಮಯ ಕಾರ್ಯಕ್ರಮದಡಿ ಪಿಲಿಕುಳಕ್ಕೆ ‘ರಾಣಿ’ಯನ್ನು ಈಚೆಗೆ ತರಲಾಗಿತ್ತು. ಮರಿಗಳು ಆರೋಗ್ಯವಾಗಿದ್ದು, ರೋಗ ನಿರೋಧಕ ಲಸಿಕೆ ನೀಡಿದ ಬಳಿಕ ಉದ್ಯಾನ ಸಂದರ್ಶಕರಿಗೆ ವೀಕ್ಷಿಸಲು ಅವಕಾಶ ಮಾಡಿಕೊಡಲಾಗುವುದು ಎಂದು ಜೈವಿಕ ಉದ್ಯಾನದ ನಿರ್ದೇಶಕ ಜಯಪ್ರಕಾಶ್ ಭಂಡಾರಿ ತಿಳಿಸಿದ್ದಾರೆ.