ಕರ್ನಾಟಕ, ತಮಿಳುನಾಡು, ಕೇರಳ, ಗುಜರಾತ್, ಮಹಾರಾಷ್ಟ್ರ, ಗೋವಾ ರಾಜ್ಯಗಳಲ್ಲಿ ವ್ಯಾಪಿಸಿರುವ 56,825 ಚದರ ಕಿ.ಮೀ ವಿಸ್ತೀರ್ಣವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಗುರುತಿಸಿ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು 2022ರ ಜುಲೈ 6ರಂದು ಐದನೇ ಬಾರಿ ಕರಡು ಅಧಿಸೂಚನೆ ಹೊರಡಿಸಿತ್ತು. ಪರಿಸರ ಸೂಕ್ಷ್ಮ ಪ್ರದೇಶ ಕಡಿಮೆ ಮಾಡಬೇಕು ಎಂದು ಕರ್ನಾಟಕ ಸೇರಿ ಉಳಿದ ರಾಜ್ಯಗಳು ಒತ್ತಾಯಿಸಿದ್ದವು. ರಾಜ್ಯ ಸರ್ಕಾರಗಳ ತಕರಾರಿನಿಂದಾಗಿ ಕರಡು ಅಧಿಸೂಚನೆಯನ್ನು ಅಂತಿಮಗೊಳಿಸಲು ಈವರೆಗೆ ಸಾಧ್ಯವಾಗಿಲ್ಲ.