<p>ಬೆಳಗಾವಿ (ಸುವರ್ಣ ವಿಧಾನಸೌಧ<strong>):</strong> ರಾಜ್ಯದಲ್ಲಿ ಟಿಪ್ಪು ಜಯಂತಿ ವಿಚಾರವನ್ನು ಸದನದಲ್ಲಿ ಸರ್ಕಾರದ ಗಮನಕ್ಕೆ ತರಲು ಮುಂದಾದ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ನಡೆಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ.</p>.<p>ಟಿಪ್ಪು ಜಯಂತಿ ಆಚರಣೆಯ ಪ್ರಸ್ತಾಪವನ್ನು ಸಮರ್ಥಿಸಿಕೊಂಡಿರುವ ಕಾಶಪ್ಪನವರ್, ‘ಎಲ್ಲ ಜಾತಿ, ಜನಾಂಗ ಇರುವ ಜಾತ್ಯತೀತ ರಾಷ್ಟ್ರದಲ್ಲಿ ಯಾಕೆ ವಿರೋಧ? ಅಲ್ಪಸಂಖ್ಯಾತರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿರಲಿಲ್ಲವೇ. ಯಡಿಯೂರಪ್ಪ, ಜಗದೀಶ ಶೆಟ್ಟರ್ ಟಿಪ್ಪು ವೇಷ ಹಾಕಿರಲಿಲ್ಲವೇ’ ಎಂದು ಪ್ರಶ್ನಿಸಿದ್ದಾರೆ.</p>.<p>ವಿಧಾನಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್, ‘ಟಿಪ್ಪು ಜಯಂತಿಯನ್ನು ಸರ್ಕಾರ ಆಚರಣೆ ಮಾಡಬೇಕು. ಈ ಕುರಿತು ಸದನದಲ್ಲಿ ಚರ್ಚೆ ನಡೆಯಬೇಕು ಎಂದು ವಿಜಯಾನಂದ ಕಾಶಪ್ಪನವರ್ ಹೇಳಿರುವುದು ವೈಯಕ್ತಿಯ ಅಭಿಪ್ರಾಯ. ಟಿಪ್ಪು ಒಬ್ಬ ದೇಶಭಕ್ತ. ಜಯಂತಿ ಆಚರಿಸಿದರೆ ತಪ್ಪೇನಿದೆ’ ಎಂದು ಪ್ರಶ್ನಿಸಿದರು.</p>.<p>‘ಕಾಂಗ್ರೆಸ್ ಎಂದರೆ ಟಿಪ್ಪು ಪಾರ್ಟಿ. ಪ್ರಚಾರ ಗಿಟ್ಟಿಸಲು ಈ ತಂತ್ರ. ಇಸ್ಲಾಂನಲ್ಲಿ ವ್ಯಕ್ತಿಗಳ ಜಯಂತಿ ಆಚರಣೆ ಮಾಡುವುದು ನಿಷೇಧವಿದೆ. ಅಧಿವೇಶನದಲ್ಲಿ ಕಾಲಹರಣ ಮಾಡಲು ಟಿಪ್ಪು ಕಾರ್ಡ್ ಉಪಯೋಗಿಸುತ್ತಿದ್ದಾರೆ’ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಟಿಪ್ಪು ಸುಲ್ತಾನನಿಗೂ, ಉತ್ತರ ಕರ್ನಾಟಕಕ್ಕೂ ಏನು ಸಂಬಂಧ. ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳನ್ನು ಚರ್ಚೆ ಮಾಡಬೇಕು. ಅದು ಬಿಟ್ಟು ಸರ್ಕಾರ ವೈಫಲ್ಯಗಳನ್ನು ಮರೆಮಾಚಲು ಟಿಪ್ಪು ಜಯಂತಿಗೆ ಮುಂದಾಗಿದೆ’ ಎಂದು ಬಿಜೆಪಿಯ ಎಸ್.ಆರ್. ವಿಶ್ವನಾಥ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳಗಾವಿ (ಸುವರ್ಣ ವಿಧಾನಸೌಧ<strong>):</strong> ರಾಜ್ಯದಲ್ಲಿ ಟಿಪ್ಪು ಜಯಂತಿ ವಿಚಾರವನ್ನು ಸದನದಲ್ಲಿ ಸರ್ಕಾರದ ಗಮನಕ್ಕೆ ತರಲು ಮುಂದಾದ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ನಡೆಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ.</p>.<p>ಟಿಪ್ಪು ಜಯಂತಿ ಆಚರಣೆಯ ಪ್ರಸ್ತಾಪವನ್ನು ಸಮರ್ಥಿಸಿಕೊಂಡಿರುವ ಕಾಶಪ್ಪನವರ್, ‘ಎಲ್ಲ ಜಾತಿ, ಜನಾಂಗ ಇರುವ ಜಾತ್ಯತೀತ ರಾಷ್ಟ್ರದಲ್ಲಿ ಯಾಕೆ ವಿರೋಧ? ಅಲ್ಪಸಂಖ್ಯಾತರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿರಲಿಲ್ಲವೇ. ಯಡಿಯೂರಪ್ಪ, ಜಗದೀಶ ಶೆಟ್ಟರ್ ಟಿಪ್ಪು ವೇಷ ಹಾಕಿರಲಿಲ್ಲವೇ’ ಎಂದು ಪ್ರಶ್ನಿಸಿದ್ದಾರೆ.</p>.<p>ವಿಧಾನಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್, ‘ಟಿಪ್ಪು ಜಯಂತಿಯನ್ನು ಸರ್ಕಾರ ಆಚರಣೆ ಮಾಡಬೇಕು. ಈ ಕುರಿತು ಸದನದಲ್ಲಿ ಚರ್ಚೆ ನಡೆಯಬೇಕು ಎಂದು ವಿಜಯಾನಂದ ಕಾಶಪ್ಪನವರ್ ಹೇಳಿರುವುದು ವೈಯಕ್ತಿಯ ಅಭಿಪ್ರಾಯ. ಟಿಪ್ಪು ಒಬ್ಬ ದೇಶಭಕ್ತ. ಜಯಂತಿ ಆಚರಿಸಿದರೆ ತಪ್ಪೇನಿದೆ’ ಎಂದು ಪ್ರಶ್ನಿಸಿದರು.</p>.<p>‘ಕಾಂಗ್ರೆಸ್ ಎಂದರೆ ಟಿಪ್ಪು ಪಾರ್ಟಿ. ಪ್ರಚಾರ ಗಿಟ್ಟಿಸಲು ಈ ತಂತ್ರ. ಇಸ್ಲಾಂನಲ್ಲಿ ವ್ಯಕ್ತಿಗಳ ಜಯಂತಿ ಆಚರಣೆ ಮಾಡುವುದು ನಿಷೇಧವಿದೆ. ಅಧಿವೇಶನದಲ್ಲಿ ಕಾಲಹರಣ ಮಾಡಲು ಟಿಪ್ಪು ಕಾರ್ಡ್ ಉಪಯೋಗಿಸುತ್ತಿದ್ದಾರೆ’ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಟಿಪ್ಪು ಸುಲ್ತಾನನಿಗೂ, ಉತ್ತರ ಕರ್ನಾಟಕಕ್ಕೂ ಏನು ಸಂಬಂಧ. ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳನ್ನು ಚರ್ಚೆ ಮಾಡಬೇಕು. ಅದು ಬಿಟ್ಟು ಸರ್ಕಾರ ವೈಫಲ್ಯಗಳನ್ನು ಮರೆಮಾಚಲು ಟಿಪ್ಪು ಜಯಂತಿಗೆ ಮುಂದಾಗಿದೆ’ ಎಂದು ಬಿಜೆಪಿಯ ಎಸ್.ಆರ್. ವಿಶ್ವನಾಥ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>