ಮಡಿಕೇರಿ: ಟಿಪ್ಪು ಜಯಂತಿ ಆಚರಣೆ ಮುಗಿದ ಅಧ್ಯಾಯ ಎಂದು ಕಾಂಗ್ರೆಸ್ ನಾಯಕಿ ಪ್ರೇಮಾ ಕಾರ್ಯಪ್ಪ ತಿಳಿಸಿದರು.
‘ಭಾವನಾತ್ಮಕ ವಿಚಾರಗಳಿಂದ ಬದುಕಿಗೆ ಪ್ರಯೋಜನ ಆಗುವುದಿಲ್ಲ. ಇನ್ನಾದರೂ ನಾವು ಭಾವನಾತ್ಮಕ ವಿಚಾರಗಳನ್ನು ಬಿಟ್ಟು ಅಭಿವೃದ್ಧಿಯ ವಿಚಾರಗಳ ಕುರಿತು ಮಾತನಾಡಬೇಕು’ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
‘ಯಾವುದೋ ಕಾಲದಲ್ಲಿ ಟಿಪ್ಪು ಜಯಂತಿ ಆಚರಣೆ ಮಾಡಿದರು ಎಂಬ ಕಾರಣಕ್ಕೆ ನಿರಂತರವಾಗಿ ಅದನ್ನೇ ಪ್ರಸ್ತಾಪಿಸುವುದು ಸರಿಯಲ್ಲ. ಮತ್ತೆ ಮತ್ತೆ ಅದನ್ನೇ ಕೆದಕುವ ಮೂಲಕ ಬಿಜೆಪಿ ಲಾಭ ಮಾಡಿಕೊಳ್ಳಲು ಯತ್ನಿಸುತ್ತಿದೆ’ ಎಂದರು.