<p><strong>ಮೈಸೂರು:</strong> ‘ಯದುವಂಶದ ಮಹಾರಾಜರು ಪಟ್ಟದಲ್ಲಿ ಇಲ್ಲದಿದ್ದ ಸಂದರ್ಭದಲ್ಲಿ ದಸರಾ ಮುನ್ನಡೆಸಿದ್ದು ಹೈದಾರಲಿ ಹಾಗೂ ಟಿಪ್ಪು ಸುಲ್ತಾನ್. ಇದನ್ನು ಮರೆಯಬಾರದು’ ಎಂದು ಶಾಸಕ ತನ್ವೀರ್ ಸೇಠ್ ಹೇಳಿದರು.</p><p>ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವುದಕ್ಕೆ ಬಿಜೆಪಿಯ ಕೆಲವರಿಂದ ವಿರೋಧ ವ್ಯಕ್ತವಾಗಿರುವ ಕುರಿತು ಇಲ್ಲಿ ಸೋಮವಾರ ಪ್ರತಿಕ್ರಿಯಿಸಿದ ಅವರು, ‘ವ್ಯಕ್ತಿಯ ಸ್ಥಾನಮಾನ ಗುರುತಿಸಿ ದಸರಾ ಉದ್ಘಾಟನೆಗೆ ಕರೆಯುತ್ತೇವೆ’ ಎಂದರು.</p><p>‘ಕಾದಂಬರಿಕಾರ ಎಸ್.ಎಲ್. ಭೈರಪ್ಪ ಅವರನ್ನು ಆಹ್ವಾನಿಸಿದ್ದಾಗ ನಾವು ಟೀಕೆ ಮಾಡಿರಲಿಲ್ಲ. ತಾಯಿ ಚಾಮುಂಡಿಗೆ ಪೂಜೆ ಸಲ್ಲಿಸಿಯೇ ದಸರಾ ಮಾಡುತ್ತೇವೆ. ಈ ಉತ್ಸವ ಧರ್ಮ–ಜಾತಿಗೆ ಸೀಮಿತವಾಗಿಲ್ಲ. ನನ್ನ ನಂಬಿಕೆ ಏನು ಎಂಬುದನ್ನು ಎಲ್ಲರಿಗೂ ತೋರಿಸಲು ಆಗುವುದಿಲ್ಲ’ ಎಂದು ಹೇಳಿದರು.</p><p>‘ಟೀಕೆ ಮಾಡುವವರಿಗೆ ತಾಳ್ಮೆ ಇರಬೇಕು. ಬೆಂಕಿಯ ಕಾವು ತೆಗೆದುಕೊಳ್ಳಲು ಹೋಗಿ ಅದರಲ್ಲಿಯೇ ಸುಟ್ಟು ಹೋಗಬೇಡಿ’ ಎಂದರು.</p><p>ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸದನದಲ್ಲಿ ಆರ್ಎಸ್ಎಸ್ ಗೀತೆ ಹೇಳಿದ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಬೇರೆ ರಾಜಕೀಯ ಪಕ್ಷದ ಸಿದ್ಧಾಂತ ಅರ್ಥ ಮಾಡಿಕೊಂಡರೆ ತಪ್ಪೇನಿದೆ? ಡಿಕೆಶಿಯವರು ಆರ್ಎಸ್ಎಸ್ ಗೀತೆ ಹಾಡಿದರೆ ಅವರು ಬಿಜೆಪಿ ಪರ ಎಂದರ್ಥವಲ್ಲ. ಈ ಬಗ್ಗೆ ಮಾಜಿ ಸಚಿವ ರಾಜಣ್ಣ ಟೀಕಿಸಿರುವುದು ಸರಿಯಲ್ಲ. ಅವರ ಮಾತುಗಳನ್ನು ನಾವು ಒಪ್ಪುವುದಿಲ್ಲ. ಈ ರೀತಿ ಮಾತಾಡಿ ಮಾತಾಡಿಯೇ ಅವರು ನಷ್ಟ ಅನುಭವಿಸಿದ್ದಾರೆ’ ಎಂದು ಹೇಳಿದರು.</p><p>‘ಧರ್ಮಸ್ಥಳ ಪ್ರಕರಣದಲ್ಲಿ ಯಾರೂ ರಾಜಕೀಯ ಮಾಡಬಾರದು. ತನಿಖೆ ಮಾಡಿದ್ದು ಸರಿ– ತಪ್ಪು ಎಂಬ ಚರ್ಚೆ ಸರಿಯಲ್ಲ. ದೂರುದಾರನ ಮಂಪರು ಪರೀಕ್ಷೆ ಅಗತ್ಯವಾಗಿ ಆಗಬೇಕು. ದೊಡ್ಡ ಧಾರ್ಮಿಕ ಸಂಸ್ಥೆಯ ಮೇಲೆ ಆರೋಪ ಮಾಡಿ ಯಾರೂ ದೊಡ್ಡವರಾಗಲ್ಲ. ಈ ಪ್ರಕರಣದ ಹಿಂದೆ ಯಾರದೋ ಕೈವಾಡವಿದೆ. ಆ ಸಮಾಜಘಾತಕ ಯಾರೇ ಆಗಿದ್ದರೂ ತಕ್ಕ ಶಿಕ್ಷೆ ಆಗಬೇಕು. ಸಮಾಜಘಾತಕರಿಗೆ ಜಾತಿ–ಧರ್ಮ ಇರುವುದಿಲ್ಲ’ ಎಂದು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಯದುವಂಶದ ಮಹಾರಾಜರು ಪಟ್ಟದಲ್ಲಿ ಇಲ್ಲದಿದ್ದ ಸಂದರ್ಭದಲ್ಲಿ ದಸರಾ ಮುನ್ನಡೆಸಿದ್ದು ಹೈದಾರಲಿ ಹಾಗೂ ಟಿಪ್ಪು ಸುಲ್ತಾನ್. ಇದನ್ನು ಮರೆಯಬಾರದು’ ಎಂದು ಶಾಸಕ ತನ್ವೀರ್ ಸೇಠ್ ಹೇಳಿದರು.</p><p>ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವುದಕ್ಕೆ ಬಿಜೆಪಿಯ ಕೆಲವರಿಂದ ವಿರೋಧ ವ್ಯಕ್ತವಾಗಿರುವ ಕುರಿತು ಇಲ್ಲಿ ಸೋಮವಾರ ಪ್ರತಿಕ್ರಿಯಿಸಿದ ಅವರು, ‘ವ್ಯಕ್ತಿಯ ಸ್ಥಾನಮಾನ ಗುರುತಿಸಿ ದಸರಾ ಉದ್ಘಾಟನೆಗೆ ಕರೆಯುತ್ತೇವೆ’ ಎಂದರು.</p><p>‘ಕಾದಂಬರಿಕಾರ ಎಸ್.ಎಲ್. ಭೈರಪ್ಪ ಅವರನ್ನು ಆಹ್ವಾನಿಸಿದ್ದಾಗ ನಾವು ಟೀಕೆ ಮಾಡಿರಲಿಲ್ಲ. ತಾಯಿ ಚಾಮುಂಡಿಗೆ ಪೂಜೆ ಸಲ್ಲಿಸಿಯೇ ದಸರಾ ಮಾಡುತ್ತೇವೆ. ಈ ಉತ್ಸವ ಧರ್ಮ–ಜಾತಿಗೆ ಸೀಮಿತವಾಗಿಲ್ಲ. ನನ್ನ ನಂಬಿಕೆ ಏನು ಎಂಬುದನ್ನು ಎಲ್ಲರಿಗೂ ತೋರಿಸಲು ಆಗುವುದಿಲ್ಲ’ ಎಂದು ಹೇಳಿದರು.</p><p>‘ಟೀಕೆ ಮಾಡುವವರಿಗೆ ತಾಳ್ಮೆ ಇರಬೇಕು. ಬೆಂಕಿಯ ಕಾವು ತೆಗೆದುಕೊಳ್ಳಲು ಹೋಗಿ ಅದರಲ್ಲಿಯೇ ಸುಟ್ಟು ಹೋಗಬೇಡಿ’ ಎಂದರು.</p><p>ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸದನದಲ್ಲಿ ಆರ್ಎಸ್ಎಸ್ ಗೀತೆ ಹೇಳಿದ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಬೇರೆ ರಾಜಕೀಯ ಪಕ್ಷದ ಸಿದ್ಧಾಂತ ಅರ್ಥ ಮಾಡಿಕೊಂಡರೆ ತಪ್ಪೇನಿದೆ? ಡಿಕೆಶಿಯವರು ಆರ್ಎಸ್ಎಸ್ ಗೀತೆ ಹಾಡಿದರೆ ಅವರು ಬಿಜೆಪಿ ಪರ ಎಂದರ್ಥವಲ್ಲ. ಈ ಬಗ್ಗೆ ಮಾಜಿ ಸಚಿವ ರಾಜಣ್ಣ ಟೀಕಿಸಿರುವುದು ಸರಿಯಲ್ಲ. ಅವರ ಮಾತುಗಳನ್ನು ನಾವು ಒಪ್ಪುವುದಿಲ್ಲ. ಈ ರೀತಿ ಮಾತಾಡಿ ಮಾತಾಡಿಯೇ ಅವರು ನಷ್ಟ ಅನುಭವಿಸಿದ್ದಾರೆ’ ಎಂದು ಹೇಳಿದರು.</p><p>‘ಧರ್ಮಸ್ಥಳ ಪ್ರಕರಣದಲ್ಲಿ ಯಾರೂ ರಾಜಕೀಯ ಮಾಡಬಾರದು. ತನಿಖೆ ಮಾಡಿದ್ದು ಸರಿ– ತಪ್ಪು ಎಂಬ ಚರ್ಚೆ ಸರಿಯಲ್ಲ. ದೂರುದಾರನ ಮಂಪರು ಪರೀಕ್ಷೆ ಅಗತ್ಯವಾಗಿ ಆಗಬೇಕು. ದೊಡ್ಡ ಧಾರ್ಮಿಕ ಸಂಸ್ಥೆಯ ಮೇಲೆ ಆರೋಪ ಮಾಡಿ ಯಾರೂ ದೊಡ್ಡವರಾಗಲ್ಲ. ಈ ಪ್ರಕರಣದ ಹಿಂದೆ ಯಾರದೋ ಕೈವಾಡವಿದೆ. ಆ ಸಮಾಜಘಾತಕ ಯಾರೇ ಆಗಿದ್ದರೂ ತಕ್ಕ ಶಿಕ್ಷೆ ಆಗಬೇಕು. ಸಮಾಜಘಾತಕರಿಗೆ ಜಾತಿ–ಧರ್ಮ ಇರುವುದಿಲ್ಲ’ ಎಂದು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>