ಬೆಂಗಳೂರು: ತಿರುಪತಿಯ ತಿರುಮಲದಲ್ಲಿ ಕರ್ನಾಟಕ ಯಾತ್ರಿಗಳಿಗೆ ನಿರ್ಮಿಸುತ್ತಿರುವ ವಸತಿ ಗೃಹ ಹಾಗೂ ಕಲ್ಯಾಣ ಮಂಟಪದ ಕಾಮಗಾರಿಗಳನ್ನು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ, ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಆಯುಕ್ತ ಬಸವರಾಜೇಂದ್ರ ಪರಿಶೀಲಿಸಿದರು.
ರಾಜ್ಯ ಸರ್ಕಾರ ತಿರುಮಲದಲ್ಲಿ ₹ 220 ಕೋಟಿ ವೆಚ್ಚದಲ್ಲಿ ಕಲ್ಯಾಣ ಮಂಟಪ, 384 ಕೊಠಡಿಗಳಿರುವ ವಸತಿಗೃಹ ನಿರ್ಮಿಸಲಾಗುತ್ತಿದೆ. ಡಿಸೆಂಬರ್ ಒಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.
ನಂತರ ತಿರುಮಲದಲ್ಲಿ ನಡೆಯುತ್ತಿರುವ ಕರ್ನಾಟಕ ರಾಜ್ಯದ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ತಿರುಪತಿ ತಿರುಮಲ ದೇವಸ್ಥಾನದ ಅಧಿಕಾರಿ ಧರ್ಮೇಂದ್ರ ರೆಡ್ಡಿ ಉಪಸ್ಥಿತರಿದ್ದರು.