ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಿರುಪತಿ ಮೂಲತಃ ಬೌದ್ಧ ಮಂದಿರ: ನಟ ಚೇತನ್ ಅಹಿಂಸಾ

Last Updated 15 ಏಪ್ರಿಲ್ 2023, 9:20 IST
ಅಕ್ಷರ ಗಾತ್ರ

ಬೆಂಗಳೂರು: ‘ತಿರುಪತಿ ಮೂಲತಃ ಬೌದ್ಧ ಮಂದಿರ’ ಎಂದು ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಹೇಳಿದ್ದಾರೆ.

ಇತ್ತೀಚೆಗೆ National TV ಎಂಬ ಯೂಟ್ಯೂಬ್ ಚಾನೆಲ್ ಒಂದರಲ್ಲಿ ಚೇತನ್ ಈ ಹೇಳಿಕೆ ನೀಡಿದ್ದಾರೆ.

ಅದೇ ಹೇಳಿಕೆಯನ್ನು ಸಮರ್ಥಿಸಿ ವಿಡಿಯೊ ಲಿಂಕ್ ಅನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿರುವ ಅವರು, ‘ಇತ್ತೀಚಿನ ಸಂದರ್ಶನವೊಂದರಲ್ಲಿ, ತಿರುಪತಿ ಮೂಲತಃ ಬೌದ್ಧ ಮಂದಿರ ಎಂದು ನಾನು ಹೇಳಿದ್ದೇನೆ. ಕೆ ಜಮನದಾಸ್ ಅವರು ತಿರುಪತಿ ಬಾಲಾಜಿ ಮೂಲತಃ ಬೌದ್ಧ ಮಂದಿರ' (ಏಪ್ರಿಲ್ 14, 2001) ಎಂಬ ತಮ್ಮ ಪುಸ್ತಕದಲ್ಲಿ ಈ ಹೇಳಿಕೆಯನ್ನು ಮಾನ್ಯ ಮಾಡಿದ್ದಾರೆ. ಇತಿಹಾಸಕಾರರ ಪ್ರಕಾರ, ದೇವಾಲಯಗಳು ಎಂದಿಗೂ ವೈದಿಕ ಸಂಸ್ಥೆಗಳಾಗಿರಲಿಲ್ಲ - ಅವುಗಳನ್ನು ಬೌದ್ಧ ಧರ್ಮದಿಂದ ವಶಪಡಿಸಿಕೊಳ್ಳಲಾಗಿದೆ, ಆಕ್ರಮಣ ಮಾಡಲಾಗಿದೆ ಎಂದು ಬರೆದುಕೊಂಡಿದ್ದಾರೆ.

ಉರಿಗೌಡ–ನಂಜೇಗೌಡ ವಿಚಾರವಾಗಿ ಚೇತನ್ ಅವರು ಮಾಡಿದ್ದ ಸಾಮಾಜಿಕ ಜಾಲತಾಣದ ಪೋಸ್ಟ್‌ ವಿರುದ್ಧ ಹಿಂದೂತ್ವವಾದಿ ಕಾರ್ಯಕರ್ತರಿಂದ ಬೆಂಗಳೂರಲ್ಲಿ ದೂರು ದಾಖಲಾಗಿತ್ತು. ಪೊಲೀಸರು ಅವರನ್ನು ಬಂಧಿಸಿದ್ದರು. ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT