<p><strong>ಬೆಂಗಳೂರು</strong>: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು (ಬಿಬಿಎಂಪಿ) ನಗರದ ಬಾಳೇಕುಂದ್ರಿ ವೃತ್ತದಲ್ಲಿರುವ ಪಾರ್ಸಿ ಅಗ್ನಿ ಪ್ರಾರ್ಥನಾಲಯದ ಬಳಿ ಸಾರ್ವಜನಿಕ ಶೌಚಾಲಯ ನಿರ್ಮಾಣ ಮಾಡುತ್ತಿರುವುದನ್ನು ಆಕ್ಷೇಪಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಬಿಬಿಎಂಪಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.</p>.<p>ಈ ಸಂಬಂಧ ‘ಬೆಂಗಳೂರು ಪಾರ್ಸಿ ಜೊರಾಸ್ಟ್ರಿಯನ್ ಅಂಜುಮನ್’ (ಬಿಪಿಝಡ್ಎ) ಗೌರವ ಕಾರ್ಯದರ್ಶಿ ದಿನ್ಶಾ ಕೊವಾಸ್ಜಿ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಅಶೋಕ ಎಸ್.ಕಿಣಗಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.</p>.<p>ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ ಪ್ರತಿವಾದಿಯಾದ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿತು. ಅಂತೆಯೇ, ಶೌಚಾಲಯ ಉದ್ಘಾಟಿಸದಂತೆ ಮಧ್ಯಂತರ ತಡೆ ನೀಡಿ ವಿಚಾರಣೆಯನ್ನು ಅಕ್ಟೋಬರ್ 30ಕ್ಕೆ ಮುಂದೂಡಿತು.</p>.<p>ಅರ್ಜಿಯಲ್ಲೇನಿದೆ?: ‘ನಗರದ ಬಾಳೇಕುಂದ್ರಿ ವೃತ್ತದಲ್ಲಿರುವ ‘ಪಾರ್ಸಿ’ ಅಗ್ನಿ ದೇವಾಲಯದ ಎದುರುಗಡೆ ಬಿಬಿಎಂಪಿ ಸಾರ್ವಜನಿಕ ಶೌಚಾಲಯ ನಿರ್ಮಿಸುತ್ತಿದೆ. ಇದರಿಂದ ಪ್ರಾರ್ಥನಾ ಮಂದಿರಕ್ಕೆ ಬರುವ ಭಕ್ತರಿಗೆ ಮತ್ತು ಸನ್ನಿಧಾನದ ಪಾವಿತ್ರ್ಯಕ್ಕೆ ಧಕ್ಕೆ ಉಂಟಾಗಲಿದೆ. ಆದ್ದರಿಂದ, ಶೌಚಾಲಯ ತೆರವುಗೊಳಿಸಲು ಬಿಬಿಎಂಪಿಗೆ ನಿರ್ದೇಶಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು (ಬಿಬಿಎಂಪಿ) ನಗರದ ಬಾಳೇಕುಂದ್ರಿ ವೃತ್ತದಲ್ಲಿರುವ ಪಾರ್ಸಿ ಅಗ್ನಿ ಪ್ರಾರ್ಥನಾಲಯದ ಬಳಿ ಸಾರ್ವಜನಿಕ ಶೌಚಾಲಯ ನಿರ್ಮಾಣ ಮಾಡುತ್ತಿರುವುದನ್ನು ಆಕ್ಷೇಪಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಬಿಬಿಎಂಪಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.</p>.<p>ಈ ಸಂಬಂಧ ‘ಬೆಂಗಳೂರು ಪಾರ್ಸಿ ಜೊರಾಸ್ಟ್ರಿಯನ್ ಅಂಜುಮನ್’ (ಬಿಪಿಝಡ್ಎ) ಗೌರವ ಕಾರ್ಯದರ್ಶಿ ದಿನ್ಶಾ ಕೊವಾಸ್ಜಿ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಅಶೋಕ ಎಸ್.ಕಿಣಗಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.</p>.<p>ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ ಪ್ರತಿವಾದಿಯಾದ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿತು. ಅಂತೆಯೇ, ಶೌಚಾಲಯ ಉದ್ಘಾಟಿಸದಂತೆ ಮಧ್ಯಂತರ ತಡೆ ನೀಡಿ ವಿಚಾರಣೆಯನ್ನು ಅಕ್ಟೋಬರ್ 30ಕ್ಕೆ ಮುಂದೂಡಿತು.</p>.<p>ಅರ್ಜಿಯಲ್ಲೇನಿದೆ?: ‘ನಗರದ ಬಾಳೇಕುಂದ್ರಿ ವೃತ್ತದಲ್ಲಿರುವ ‘ಪಾರ್ಸಿ’ ಅಗ್ನಿ ದೇವಾಲಯದ ಎದುರುಗಡೆ ಬಿಬಿಎಂಪಿ ಸಾರ್ವಜನಿಕ ಶೌಚಾಲಯ ನಿರ್ಮಿಸುತ್ತಿದೆ. ಇದರಿಂದ ಪ್ರಾರ್ಥನಾ ಮಂದಿರಕ್ಕೆ ಬರುವ ಭಕ್ತರಿಗೆ ಮತ್ತು ಸನ್ನಿಧಾನದ ಪಾವಿತ್ರ್ಯಕ್ಕೆ ಧಕ್ಕೆ ಉಂಟಾಗಲಿದೆ. ಆದ್ದರಿಂದ, ಶೌಚಾಲಯ ತೆರವುಗೊಳಿಸಲು ಬಿಬಿಎಂಪಿಗೆ ನಿರ್ದೇಶಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>