<p><strong>ರಾಮನಗರ</strong>: ಪೂರ್ವ ನಿಗದಿಯಂತೆ ಬೆಂಗಳೂರು–ಮೈಸೂರು ದಶಪಥದಲ್ಲಿ ಮಂಗಳವಾರದಿಂದ ಟೋಲ್ ಸಂಗ್ರಹಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸಜ್ಜಾಗಿದೆ.</p>.<p>ಟೋಲ್ ಪ್ಲಾಜಾ ಬಳಿ ಅಗತ್ಯ ಸಿಬ್ಬಂದಿಯನ್ನು ಈಗಾಗಲೇ ನಿಯೋಜಿಸಿದೆ. ಪೊಲೀಸ್ ಭದ್ರತೆ ಮತ್ತು ಅನುಮತಿ ಕೋರಿ ಜಿಲ್ಲಾಡಳಿತಕ್ಕೆ ಮನವಿಯನ್ನೂ ಸಲ್ಲಿಸಿದೆ.</p>.<p>ಮಂಗಳವಾರ ಬೆಳಿಗ್ಗೆ 8 ರಿಂದ ಹೆದ್ದಾರಿ ಟೋಲ್ ಸಂಗ್ರಹ ಶುರುವಾಗಲಿದೆ. ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸದೆಯೇ ಟೋಲ್ ಸಂಗ್ರಹ ವಿರೋಧಿಸಿ ವಿವಿಧ ಸಂಘಟನೆಗಳು ಟೋಲ್ ಪ್ಲಾಜಾಗೆ ಮುತ್ತಿಗೆ ಹಾಗೂ ಪ್ರತಿಭಟನೆಗೆ ಮುಂದಾಗಿವೆ.</p>.<p>ಬೆಂಗಳೂರು ನಗರ ಜಿಲ್ಲೆಯ ಕಣಮಿಣಕಿ ಹಾಗೂ ರಾಮನಗರ ಜಿಲ್ಲೆಯ ಶೇಷಗಿರಿಹಳ್ಳಿ ಬಳಿ ಹೆದ್ದಾರಿ ಪ್ರಾಧಿಕಾರ ಎರಡು ಟೋಲ್ ಪ್ಲಾಜಾ ನಿರ್ಮಿಸಿದೆ. ಬೆಂಗಳೂರಿನಿಂದ ಮೈಸೂರಿಗೆ ಹೋಗುವವರು ಕಣಮಿಣಕಿ ಬಳಿಹಾಗೂ ಮೈಸೂರು–ರಾಮನಗರ ಕಡೆಯಿಂದ ಬೆಂಗಳೂರು ಪ್ರವೇಶಿಸುವವರು ಶೇಷಗಿರಿಹಳ್ಳಿ ಬಳಿ ಟೋಲ್ ಕಟ್ಟಬೇಕಿದೆ.</p>.<p>ಟೋಲ್ ಆರಂಭಿಸಲು ಮುಂದಾಗಿದ್ದೇ ಆದಲ್ಲಿ ಟೋಲ್ ಪ್ಲಾಜಾಗಳನ್ನು ಕೆಡುವುದಾಗಿ ಎಚ್ಚರಿಕೆಯನ್ನೂ ನೀಡಿವೆ. ಮತ್ತೊಂದೆಡೆ, ಕಾಂಗ್ರೆಸ್ ಕಾರ್ಯಕರ್ತರು ಸಹ ಪ್ರತಿಭಟನೆಗೆ ಸಜ್ಜಾಗಿದ್ದಾರೆ.</p>.<p>ಪೊಲೀಸರು ಟೋಲ್ ಪ್ಲಾಜಾಗಳಿಗೆ ಭದ್ರತೆ ಒದಗಿಸಿದ್ದಾರೆ.</p>.<p><strong>ಪರಿಷ್ಕರಣೆ ಆಗದ ದರ</strong><br />ಸದ್ಯ ಬೆಂಗಳೂರು–ನಿಡಘಟ್ಟ ನಡುವಿನ ಮೊದಲ ಹಂತದ ಹೆದ್ದಾರಿಗೆ ಮಾತ್ರ ಟೋಲ್ ಹಾಕಲಾಗಿದೆ. ಸ್ಥಳೀಯ ವಾಹನಗಳಿಗೆ ಕನಿಷ್ಠ ₹70 ಹಾಗೂ ಹೊರ ಜಿಲ್ಲೆ, ರಾಜ್ಯಗಳಿಗೆ ₹135 ದರ ವಿಧಿಸಲಾಗಿದ್ದು, ವಾಹನಗಳ ಸಾಮರ್ಥ್ಯ ಹೆಚ್ಚಿದಂತೆಲ್ಲ ದರವೂ ಹೆಚ್ಚಲಿದೆ. ತಿಂಗಳ ಪಾಸ್ ಸೌಲಭ್ಯವೂ ಇದೆ.</p>.<p>ಸದ್ಯ ವಿಧಿಸಲಾಗಿರುವ ದರ ದುಬಾರಿ ಆಗಿದ್ದು, ಪರಿಷ್ಕರಿಸಬೇಕು ಎಂದು ಸಾರ್ವಜನಿಕರಿಂದ ಒತ್ತಾಯ ಕೇಳಿ ಬಂದಿತ್ತು. ಆದರೆ, ದರ ಪರಿಷ್ಕರಣೆ ಆಗಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ</strong>: ಪೂರ್ವ ನಿಗದಿಯಂತೆ ಬೆಂಗಳೂರು–ಮೈಸೂರು ದಶಪಥದಲ್ಲಿ ಮಂಗಳವಾರದಿಂದ ಟೋಲ್ ಸಂಗ್ರಹಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸಜ್ಜಾಗಿದೆ.</p>.<p>ಟೋಲ್ ಪ್ಲಾಜಾ ಬಳಿ ಅಗತ್ಯ ಸಿಬ್ಬಂದಿಯನ್ನು ಈಗಾಗಲೇ ನಿಯೋಜಿಸಿದೆ. ಪೊಲೀಸ್ ಭದ್ರತೆ ಮತ್ತು ಅನುಮತಿ ಕೋರಿ ಜಿಲ್ಲಾಡಳಿತಕ್ಕೆ ಮನವಿಯನ್ನೂ ಸಲ್ಲಿಸಿದೆ.</p>.<p>ಮಂಗಳವಾರ ಬೆಳಿಗ್ಗೆ 8 ರಿಂದ ಹೆದ್ದಾರಿ ಟೋಲ್ ಸಂಗ್ರಹ ಶುರುವಾಗಲಿದೆ. ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸದೆಯೇ ಟೋಲ್ ಸಂಗ್ರಹ ವಿರೋಧಿಸಿ ವಿವಿಧ ಸಂಘಟನೆಗಳು ಟೋಲ್ ಪ್ಲಾಜಾಗೆ ಮುತ್ತಿಗೆ ಹಾಗೂ ಪ್ರತಿಭಟನೆಗೆ ಮುಂದಾಗಿವೆ.</p>.<p>ಬೆಂಗಳೂರು ನಗರ ಜಿಲ್ಲೆಯ ಕಣಮಿಣಕಿ ಹಾಗೂ ರಾಮನಗರ ಜಿಲ್ಲೆಯ ಶೇಷಗಿರಿಹಳ್ಳಿ ಬಳಿ ಹೆದ್ದಾರಿ ಪ್ರಾಧಿಕಾರ ಎರಡು ಟೋಲ್ ಪ್ಲಾಜಾ ನಿರ್ಮಿಸಿದೆ. ಬೆಂಗಳೂರಿನಿಂದ ಮೈಸೂರಿಗೆ ಹೋಗುವವರು ಕಣಮಿಣಕಿ ಬಳಿಹಾಗೂ ಮೈಸೂರು–ರಾಮನಗರ ಕಡೆಯಿಂದ ಬೆಂಗಳೂರು ಪ್ರವೇಶಿಸುವವರು ಶೇಷಗಿರಿಹಳ್ಳಿ ಬಳಿ ಟೋಲ್ ಕಟ್ಟಬೇಕಿದೆ.</p>.<p>ಟೋಲ್ ಆರಂಭಿಸಲು ಮುಂದಾಗಿದ್ದೇ ಆದಲ್ಲಿ ಟೋಲ್ ಪ್ಲಾಜಾಗಳನ್ನು ಕೆಡುವುದಾಗಿ ಎಚ್ಚರಿಕೆಯನ್ನೂ ನೀಡಿವೆ. ಮತ್ತೊಂದೆಡೆ, ಕಾಂಗ್ರೆಸ್ ಕಾರ್ಯಕರ್ತರು ಸಹ ಪ್ರತಿಭಟನೆಗೆ ಸಜ್ಜಾಗಿದ್ದಾರೆ.</p>.<p>ಪೊಲೀಸರು ಟೋಲ್ ಪ್ಲಾಜಾಗಳಿಗೆ ಭದ್ರತೆ ಒದಗಿಸಿದ್ದಾರೆ.</p>.<p><strong>ಪರಿಷ್ಕರಣೆ ಆಗದ ದರ</strong><br />ಸದ್ಯ ಬೆಂಗಳೂರು–ನಿಡಘಟ್ಟ ನಡುವಿನ ಮೊದಲ ಹಂತದ ಹೆದ್ದಾರಿಗೆ ಮಾತ್ರ ಟೋಲ್ ಹಾಕಲಾಗಿದೆ. ಸ್ಥಳೀಯ ವಾಹನಗಳಿಗೆ ಕನಿಷ್ಠ ₹70 ಹಾಗೂ ಹೊರ ಜಿಲ್ಲೆ, ರಾಜ್ಯಗಳಿಗೆ ₹135 ದರ ವಿಧಿಸಲಾಗಿದ್ದು, ವಾಹನಗಳ ಸಾಮರ್ಥ್ಯ ಹೆಚ್ಚಿದಂತೆಲ್ಲ ದರವೂ ಹೆಚ್ಚಲಿದೆ. ತಿಂಗಳ ಪಾಸ್ ಸೌಲಭ್ಯವೂ ಇದೆ.</p>.<p>ಸದ್ಯ ವಿಧಿಸಲಾಗಿರುವ ದರ ದುಬಾರಿ ಆಗಿದ್ದು, ಪರಿಷ್ಕರಿಸಬೇಕು ಎಂದು ಸಾರ್ವಜನಿಕರಿಂದ ಒತ್ತಾಯ ಕೇಳಿ ಬಂದಿತ್ತು. ಆದರೆ, ದರ ಪರಿಷ್ಕರಣೆ ಆಗಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>