<p>ಇರಾನ್–ಇಸ್ರೇಲ್ ಯುದ್ಧ, ಭಾರತದಲ್ಲಿ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಕೊರತೆ ಆತಂಕ, ಸಿನಿಮಾ ಸೇರಿದಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..</p>.<p>ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಪರಿಣಾಮವಾಗಿ ದೇಶದಲ್ಲಿ ಇಂಧನ ಬಿಕ್ಕಟ್ಟು ಎದುರಾಗುವ ಸಾಧ್ಯತೆ ಇದೆ. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಅಭಾವ ಸೃಷ್ಟಿಯಾಗಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಏತನ್ಮಧ್ಯೆ, ಇಂಧನ ಸಚಿವಾಲಯವು ಈ ಕುರಿತು ಸ್ಪಷ್ಟನೆ ನೀಡಿದೆ.</p>.ಎಲ್ಪಿಜಿ ಸಿಲಿಂಡರ್ ಅಭಾವಕ್ಕೇನು ಕಾರಣ? ಕೇಂದ್ರದ ಅಧಿಕಾರಿ ಕೊಟ್ಟ ಕಾರಣ ಇಲ್ಲಿದೆ.<p>‘ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಜಂಟಿ ದಾಳಿಯು ನಿರೀಕ್ಷೆಗಿಂತ ಉತ್ತಮವಾಗಿ ನಡೆಯುತ್ತಿದೆ. ಇಸ್ರೇಲ್ ಹಿಂದೆಂದಿಗಿಂತಲೂ ಬಲಿಷ್ಠವಾಗಿದೆ’ ಎಂದು ಪ್ರಧಾನಿ ಬೆಂಜಮಿನ್ ನೆತನ್ಯಾಹು ಪ್ರತಿಪಾದಿಸಿದ್ದಾರೆ. ಇದೇವೇಳೆ, ಇರಾನ್ನ ನೂತನ ಪರಮೋಚ್ಚ ನಾಯಕರಾಗಿ ನೇಮಕವಾಗಿರುವ ಮೊಜ್ತಬಾ ಖಮೇನಿ ಜೀವಕ್ಕೆ ಯಾವುದೇ ಖಾತ್ರಿ ಇಲ್ಲ ಎಂದು ಹೇಳಿದ್ದಾರೆ.</p>.ಇರಾನ್ ಪರಮೋಚ್ಚ ನಾಯಕ ಮೊಜ್ತಬಾ ಖಮೇನಿ ಜೀವಕ್ಕೆ ಯಾವುದೇ ಖಾತ್ರಿ ಇಲ್ಲ: ನೆತನ್ಯಾಹು.<p>ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ನಿಂದನೆ ಹಾಗೂ ಅಶ್ಲೀಲವಾಗಿ ಸಂದೇಶ ಕಳುಹಿಸಿದ್ದ ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು, 45ನೇ ಎಸಿಎಂಎಂ ನ್ಯಾಯಾಲಯಕ್ಕೆ ಪ್ರಾಥಮಿಕ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.</p>.ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ನಿಂದಿಸುವ ಸಲುವಾಗಿಯೇ ನಕಲಿ ಖಾತೆ ತೆರೆದಿದ್ದರು!.<p>ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ಗಳ ಕೊರತೆಯಿಂದಾಗಿ ನಗರದಲ್ಲಿ ಹೋಟೆಲ್ ಮತ್ತು ರೆಸ್ಟೋರೆಂಟ್ಗಳು ಬಂದ್ ಆಗುತ್ತಿವೆ. ಅಲ್ಲದೆ ಪೇಯಿಂಗ್ ಗೆಸ್ಟ್ (ಪಿ.ಜಿ) ಮತ್ತು ಸಣ್ಣ ಕೈಗಾರಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. ಗುರುವಾರ ಸಮಸ್ಯೆ ಮತ್ತಷ್ಟು ಹೆಚ್ಚಾಗಿದೆ. ಗಾಂಧಿಬಜಾರ್, ಮೆಜೆಸ್ಟಿಕ್, ಶ್ರೀರಾಮಪುರ, ವಿಜಯನಗರ, ಯಶವಂತಪುರ, ರಾಜಾಜಿನಗರ, ಮಾಗಡಿ ರಸ್ತೆ, ಮೈಸೂರು ರಸ್ತೆ ಮತ್ತು ಕನಕಪುರ ರಸ್ತೆಗಳಲ್ಲಿ ಸಣ್ಣ, ಮಧ್ಯಮ ಹೋಟೆಲ್ಗಳು ಬಂದ್ ಆಗಿವೆ.</p>.ಎಲ್ಪಿಜಿ ಸಮಸ್ಯೆ ತೀವ್ರ: ಹೋಟೆಲ್, ರೆಸ್ಟೋರೆಂಟ್, ಇಂದಿರಾ ಕ್ಯಾಂಟಿನ್ ಬಂದ್ .<p>ಮುಂದಿನ ವಾರ ದೊಡ್ಡ ಸಿನಿಮಾಗಳ ಅಬ್ಬರವಿರುವುದರಿಂದ ಈ ವಾರ ಕೇವಲ ಒಂದು ಸಿನಿಮಾ ಮಾತ್ರ ತೆರೆಯಲ್ಲಿದೆ. ಈ ಹಿಂದೆ ‘ಟಾಕ್ಸಿಕ್’ ಚಿತ್ರ ಮಾ.19ಕ್ಕೆ ತೆರೆಗೆ ಬರುವುದಾಗಿ ಘೋಷಣೆಯಾಗಿತ್ತು. ಹೀಗಾಗಿ ಎಲ್ಲ ಸಿನಿಮಾಗಳು ಬಿಡುಗಡೆ ಮುಂದಕ್ಕೆ ಹಾಕಿಕೊಂಡಿದ್ದವು. ಆದರೆ ಇತ್ತೀಚೆಗಷ್ಟೇ ‘ಟಾಕ್ಸಿಕ್’ ಬಿಡುಗಡೆ ದಿನಾಂಕ ಬದಲಾಯಿತ್ತು. ಕೊನೆ ಕ್ಷಣದಲ್ಲಿ ದಿನಾಂಕ ಬದಲಾದ ಪರಿಣಾಮವಾಗಿ ಈ ವಾರ ‘ದರ್ಜಿ’ ಎಂಬ ಸಿನಿಮಾ ಮಾತ್ರ ಬಿಡುಗಡೆಗೊಳ್ಳುತ್ತಿದೆ.</p>.ಈ ವಾರ ಒಂದೇ ಸಿನಿಮಾ ತೆರೆಗೆ; ಆಕಾಶ್ ಮರುಬಿಡುಗಡೆ.<p>ಧಾನಿ ನರೇಂದ್ರ ಮೋದಿ ಅವರು ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಅವರ ಜೊತೆ ಗುರುವಾರ ರಾತ್ರಿ ದೂರವಾಣಿ ಮೂಲಕ ಮಾತನಾಡಿದ್ದು, ‘ಪಶ್ಚಿಮ ಏಷ್ಯಾದಲ್ಲಿನ ಗಂಭೀರ ಪರಿಸ್ಥಿತಿ’ ಕುರಿತು ಚರ್ಚಿಸಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ಸಂಘರ್ಷ ಉಲ್ಬಣಗೊಳ್ಳುತ್ತಿರುವುದು, ಸಾವು–ನೋವು ಹಾಗೂ ಮೂಲಸೌಕರ್ಯಗಳಿಗೆ ಹಾನಿಯಾಗಿರುವ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿದ್ದಾಗಿ ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.</p>.ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಜತೆ ನರೇಂದ್ರ ಮೋದಿ ಮಾತುಕತೆ.<p>ಇಸ್ರೇಲ್, ಅಮೆರಿಕ ಜಂಟಿಯಾಗಿ ನಡೆಸಿದ ವೈಮಾನಿಕ ದಾಳಿ ವೇಳೆ ಹತ್ಯೆಯಾದ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಪತ್ನಿ ಮನ್ಸೌರೆ ಖೋಜಾಸ್ತೆ ಬಾಗರ್ಜಾಡೆ (79) ಅವರು ಜೀವಂತವಾಗಿದ್ದಾರೆ ಎಂದು ಇರಾನ್ ಸರ್ಕಾರಿ ಮಾಧ್ಯಮಗಳು ವರದಿ ಮಾಡಿವೆ.</p>.ಖಮೇನಿ ಪತ್ನಿ ಜೀವಂತವಾಗಿದ್ದಾರೆ: ಇರಾನ್.<p>ಆಂಧ್ರ ಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ರಾಜಮಹೇಂದ್ರವರಂನಲ್ಲಿ ಶಂಕಿತ ಕಲಬೆರಕೆ ಹಾಲು ಸೇವನೆ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಈ ಘಟನೆಯಲ್ಲಿ ಅಸ್ವಸ್ಥಗೊಂಡ ಏಳು ಜನರಿಗೆ ಇಲ್ಲಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.</p>.ಆಂಧ್ರ ಪ್ರದೇಶದಲ್ಲಿ ಕಲಬೆರಕೆ ಹಾಲು ಸೇವನೆ: ಸಾವಿನ ಸಂಖ್ಯೆ 13ಕ್ಕೆ ಏರಿಕೆ.<p><strong>ಬಳ್ಳಾರಿ</strong>: ತಾಲೂಕಿನ ಶ್ರೀಧರಗಡ್ಡೆ ಗ್ರಾಮದ ಖಾಸಗಿ ಶಾಲೆಯೊಂದರ ಪ್ರಾಂಶುಪಾಲ ತಮ್ಮ ವಿದ್ಯಾರ್ಥಿಗಳನ್ನೆಲ್ಲ ಶವದ ಎದುರು ನಿಲ್ಲಿಸಿ ರಾಷ್ಟ್ರಗೀತೆ ಹಾಡಿಸಿದ್ದಾರೆ. ಈ ಸಂಬಂಧ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಶಾಲಾ ಶಿಕ್ಷಣ ಇಲಾಖೆಗೆ ದೂರು ಸಲ್ಲಿಕೆಯಾಗಿದೆ. </p>.ಶವದ ಎದುರು ವಿದ್ಯಾರ್ಥಿಗಳಿಂದ ರಾಷ್ಟ್ರಗೀತೆ ಹಾಡಿಸಿದ್ದ ಶಿಕ್ಷಕನ ವಿರುದ್ಧ ದೂರು.<p>ಅಮೆರಿಕ–ಇರಾನ್ ನಡುವಿನ ಯುದ್ಧ ಸದ್ಯಕ್ಕೆ ಕೊನೆಗೊಳ್ಳುವ ಯಾವುದೇ ಲಕ್ಷಣ ಕಾಣುತ್ತಿಲ್ಲ. ಈ ನಡುವೆ ಇರಾನ್ ಹೊರ್ಮುಜ್ ಜಲಸಂಧಿಯನ್ನು ಮುಚ್ಚಿರುವುದರಿಂದ ಜಾಗತಿಕವಾಗಿ ತೈಲ ಸರಬರಾಜಿಗೆ ತೊಡಕಾಗಿರುವ ಹಿನ್ನೆಲೆ ತಾತ್ಕಾಲಿಕವಾಗಿ ರಷ್ಯಾದಿಂದ ಕಚ್ಚಾತೈಲ ಆಮದಿಗೆ ಭಾರತದಂತೆ ಇತರೆ ದೇಶಗಳಿಗೂ ಅಮೆರಿಕ ಅನುಮತಿ ನೀಡಿದೆ.</p>.ಭಾರತದಂತೆ ಇತರೆ ದೇಶಗಳಿಗೂ ರಷ್ಯಾದಿಂದ ತೈಲ ಖರೀದಿಗೆ ಅಮೆರಿಕ ಅನುಮತಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಇರಾನ್–ಇಸ್ರೇಲ್ ಯುದ್ಧ, ಭಾರತದಲ್ಲಿ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಕೊರತೆ ಆತಂಕ, ಸಿನಿಮಾ ಸೇರಿದಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..</p>.<p>ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಪರಿಣಾಮವಾಗಿ ದೇಶದಲ್ಲಿ ಇಂಧನ ಬಿಕ್ಕಟ್ಟು ಎದುರಾಗುವ ಸಾಧ್ಯತೆ ಇದೆ. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಅಭಾವ ಸೃಷ್ಟಿಯಾಗಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಏತನ್ಮಧ್ಯೆ, ಇಂಧನ ಸಚಿವಾಲಯವು ಈ ಕುರಿತು ಸ್ಪಷ್ಟನೆ ನೀಡಿದೆ.</p>.ಎಲ್ಪಿಜಿ ಸಿಲಿಂಡರ್ ಅಭಾವಕ್ಕೇನು ಕಾರಣ? ಕೇಂದ್ರದ ಅಧಿಕಾರಿ ಕೊಟ್ಟ ಕಾರಣ ಇಲ್ಲಿದೆ.<p>‘ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಜಂಟಿ ದಾಳಿಯು ನಿರೀಕ್ಷೆಗಿಂತ ಉತ್ತಮವಾಗಿ ನಡೆಯುತ್ತಿದೆ. ಇಸ್ರೇಲ್ ಹಿಂದೆಂದಿಗಿಂತಲೂ ಬಲಿಷ್ಠವಾಗಿದೆ’ ಎಂದು ಪ್ರಧಾನಿ ಬೆಂಜಮಿನ್ ನೆತನ್ಯಾಹು ಪ್ರತಿಪಾದಿಸಿದ್ದಾರೆ. ಇದೇವೇಳೆ, ಇರಾನ್ನ ನೂತನ ಪರಮೋಚ್ಚ ನಾಯಕರಾಗಿ ನೇಮಕವಾಗಿರುವ ಮೊಜ್ತಬಾ ಖಮೇನಿ ಜೀವಕ್ಕೆ ಯಾವುದೇ ಖಾತ್ರಿ ಇಲ್ಲ ಎಂದು ಹೇಳಿದ್ದಾರೆ.</p>.ಇರಾನ್ ಪರಮೋಚ್ಚ ನಾಯಕ ಮೊಜ್ತಬಾ ಖಮೇನಿ ಜೀವಕ್ಕೆ ಯಾವುದೇ ಖಾತ್ರಿ ಇಲ್ಲ: ನೆತನ್ಯಾಹು.<p>ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ನಿಂದನೆ ಹಾಗೂ ಅಶ್ಲೀಲವಾಗಿ ಸಂದೇಶ ಕಳುಹಿಸಿದ್ದ ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು, 45ನೇ ಎಸಿಎಂಎಂ ನ್ಯಾಯಾಲಯಕ್ಕೆ ಪ್ರಾಥಮಿಕ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.</p>.ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ನಿಂದಿಸುವ ಸಲುವಾಗಿಯೇ ನಕಲಿ ಖಾತೆ ತೆರೆದಿದ್ದರು!.<p>ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ಗಳ ಕೊರತೆಯಿಂದಾಗಿ ನಗರದಲ್ಲಿ ಹೋಟೆಲ್ ಮತ್ತು ರೆಸ್ಟೋರೆಂಟ್ಗಳು ಬಂದ್ ಆಗುತ್ತಿವೆ. ಅಲ್ಲದೆ ಪೇಯಿಂಗ್ ಗೆಸ್ಟ್ (ಪಿ.ಜಿ) ಮತ್ತು ಸಣ್ಣ ಕೈಗಾರಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. ಗುರುವಾರ ಸಮಸ್ಯೆ ಮತ್ತಷ್ಟು ಹೆಚ್ಚಾಗಿದೆ. ಗಾಂಧಿಬಜಾರ್, ಮೆಜೆಸ್ಟಿಕ್, ಶ್ರೀರಾಮಪುರ, ವಿಜಯನಗರ, ಯಶವಂತಪುರ, ರಾಜಾಜಿನಗರ, ಮಾಗಡಿ ರಸ್ತೆ, ಮೈಸೂರು ರಸ್ತೆ ಮತ್ತು ಕನಕಪುರ ರಸ್ತೆಗಳಲ್ಲಿ ಸಣ್ಣ, ಮಧ್ಯಮ ಹೋಟೆಲ್ಗಳು ಬಂದ್ ಆಗಿವೆ.</p>.ಎಲ್ಪಿಜಿ ಸಮಸ್ಯೆ ತೀವ್ರ: ಹೋಟೆಲ್, ರೆಸ್ಟೋರೆಂಟ್, ಇಂದಿರಾ ಕ್ಯಾಂಟಿನ್ ಬಂದ್ .<p>ಮುಂದಿನ ವಾರ ದೊಡ್ಡ ಸಿನಿಮಾಗಳ ಅಬ್ಬರವಿರುವುದರಿಂದ ಈ ವಾರ ಕೇವಲ ಒಂದು ಸಿನಿಮಾ ಮಾತ್ರ ತೆರೆಯಲ್ಲಿದೆ. ಈ ಹಿಂದೆ ‘ಟಾಕ್ಸಿಕ್’ ಚಿತ್ರ ಮಾ.19ಕ್ಕೆ ತೆರೆಗೆ ಬರುವುದಾಗಿ ಘೋಷಣೆಯಾಗಿತ್ತು. ಹೀಗಾಗಿ ಎಲ್ಲ ಸಿನಿಮಾಗಳು ಬಿಡುಗಡೆ ಮುಂದಕ್ಕೆ ಹಾಕಿಕೊಂಡಿದ್ದವು. ಆದರೆ ಇತ್ತೀಚೆಗಷ್ಟೇ ‘ಟಾಕ್ಸಿಕ್’ ಬಿಡುಗಡೆ ದಿನಾಂಕ ಬದಲಾಯಿತ್ತು. ಕೊನೆ ಕ್ಷಣದಲ್ಲಿ ದಿನಾಂಕ ಬದಲಾದ ಪರಿಣಾಮವಾಗಿ ಈ ವಾರ ‘ದರ್ಜಿ’ ಎಂಬ ಸಿನಿಮಾ ಮಾತ್ರ ಬಿಡುಗಡೆಗೊಳ್ಳುತ್ತಿದೆ.</p>.ಈ ವಾರ ಒಂದೇ ಸಿನಿಮಾ ತೆರೆಗೆ; ಆಕಾಶ್ ಮರುಬಿಡುಗಡೆ.<p>ಧಾನಿ ನರೇಂದ್ರ ಮೋದಿ ಅವರು ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಅವರ ಜೊತೆ ಗುರುವಾರ ರಾತ್ರಿ ದೂರವಾಣಿ ಮೂಲಕ ಮಾತನಾಡಿದ್ದು, ‘ಪಶ್ಚಿಮ ಏಷ್ಯಾದಲ್ಲಿನ ಗಂಭೀರ ಪರಿಸ್ಥಿತಿ’ ಕುರಿತು ಚರ್ಚಿಸಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ಸಂಘರ್ಷ ಉಲ್ಬಣಗೊಳ್ಳುತ್ತಿರುವುದು, ಸಾವು–ನೋವು ಹಾಗೂ ಮೂಲಸೌಕರ್ಯಗಳಿಗೆ ಹಾನಿಯಾಗಿರುವ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿದ್ದಾಗಿ ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.</p>.ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಜತೆ ನರೇಂದ್ರ ಮೋದಿ ಮಾತುಕತೆ.<p>ಇಸ್ರೇಲ್, ಅಮೆರಿಕ ಜಂಟಿಯಾಗಿ ನಡೆಸಿದ ವೈಮಾನಿಕ ದಾಳಿ ವೇಳೆ ಹತ್ಯೆಯಾದ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಪತ್ನಿ ಮನ್ಸೌರೆ ಖೋಜಾಸ್ತೆ ಬಾಗರ್ಜಾಡೆ (79) ಅವರು ಜೀವಂತವಾಗಿದ್ದಾರೆ ಎಂದು ಇರಾನ್ ಸರ್ಕಾರಿ ಮಾಧ್ಯಮಗಳು ವರದಿ ಮಾಡಿವೆ.</p>.ಖಮೇನಿ ಪತ್ನಿ ಜೀವಂತವಾಗಿದ್ದಾರೆ: ಇರಾನ್.<p>ಆಂಧ್ರ ಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ರಾಜಮಹೇಂದ್ರವರಂನಲ್ಲಿ ಶಂಕಿತ ಕಲಬೆರಕೆ ಹಾಲು ಸೇವನೆ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಈ ಘಟನೆಯಲ್ಲಿ ಅಸ್ವಸ್ಥಗೊಂಡ ಏಳು ಜನರಿಗೆ ಇಲ್ಲಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.</p>.ಆಂಧ್ರ ಪ್ರದೇಶದಲ್ಲಿ ಕಲಬೆರಕೆ ಹಾಲು ಸೇವನೆ: ಸಾವಿನ ಸಂಖ್ಯೆ 13ಕ್ಕೆ ಏರಿಕೆ.<p><strong>ಬಳ್ಳಾರಿ</strong>: ತಾಲೂಕಿನ ಶ್ರೀಧರಗಡ್ಡೆ ಗ್ರಾಮದ ಖಾಸಗಿ ಶಾಲೆಯೊಂದರ ಪ್ರಾಂಶುಪಾಲ ತಮ್ಮ ವಿದ್ಯಾರ್ಥಿಗಳನ್ನೆಲ್ಲ ಶವದ ಎದುರು ನಿಲ್ಲಿಸಿ ರಾಷ್ಟ್ರಗೀತೆ ಹಾಡಿಸಿದ್ದಾರೆ. ಈ ಸಂಬಂಧ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಶಾಲಾ ಶಿಕ್ಷಣ ಇಲಾಖೆಗೆ ದೂರು ಸಲ್ಲಿಕೆಯಾಗಿದೆ. </p>.ಶವದ ಎದುರು ವಿದ್ಯಾರ್ಥಿಗಳಿಂದ ರಾಷ್ಟ್ರಗೀತೆ ಹಾಡಿಸಿದ್ದ ಶಿಕ್ಷಕನ ವಿರುದ್ಧ ದೂರು.<p>ಅಮೆರಿಕ–ಇರಾನ್ ನಡುವಿನ ಯುದ್ಧ ಸದ್ಯಕ್ಕೆ ಕೊನೆಗೊಳ್ಳುವ ಯಾವುದೇ ಲಕ್ಷಣ ಕಾಣುತ್ತಿಲ್ಲ. ಈ ನಡುವೆ ಇರಾನ್ ಹೊರ್ಮುಜ್ ಜಲಸಂಧಿಯನ್ನು ಮುಚ್ಚಿರುವುದರಿಂದ ಜಾಗತಿಕವಾಗಿ ತೈಲ ಸರಬರಾಜಿಗೆ ತೊಡಕಾಗಿರುವ ಹಿನ್ನೆಲೆ ತಾತ್ಕಾಲಿಕವಾಗಿ ರಷ್ಯಾದಿಂದ ಕಚ್ಚಾತೈಲ ಆಮದಿಗೆ ಭಾರತದಂತೆ ಇತರೆ ದೇಶಗಳಿಗೂ ಅಮೆರಿಕ ಅನುಮತಿ ನೀಡಿದೆ.</p>.ಭಾರತದಂತೆ ಇತರೆ ದೇಶಗಳಿಗೂ ರಷ್ಯಾದಿಂದ ತೈಲ ಖರೀದಿಗೆ ಅಮೆರಿಕ ಅನುಮತಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>