ರಾಜ್ಯ, ದೇಶ, ವಿದೇಶ, ಬೆಂಗಳೂರು ಸೇರಿದಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ.
‘ಮುಂಬರುವ ಲೋಕಸಭೆ ಚುನಾವಣೆಯ ತಂತ್ರಗಾರಿಕೆ ಕುರಿತು ಚರ್ಚೆ ಮಾಡುವ ಉದ್ದೇಶದಿಂದ ಸಚಿವರು, ಶಾಸಕರು ಮತ್ತು ಇತರ ನಾಯಕರು ದೆಹಲಿ ಪ್ರವಾಸ ಮಾಡುತ್ತಿದ್ದೇವೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ಹರಿಯಾಣದ ನೂಹ್ ಪಟ್ಟಣದಲ್ಲಿ ಸೋಮವಾರ ವಿಶ್ವ ಹಿಂದೂ ಪರಿಷತ್ ಆಯೋಜಿಸಿದ್ದ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವಿನ ಘರ್ಷಣೆಯಲ್ಲಿ ಮೃತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.
ಧರ್ಮದ ಹೆಸರಿನಲ್ಲಿ ಹಿಂಸಾಚಾರ ನಡೆಸುವುದನ್ನು ಈ 21ನೇ ಶತಮಾನದ ಭಾರತ ಸಹಿಸುವುದಿಲ್ಲ. ಇಂತಹ ವಿಭಜಕ ಶಕ್ತಿಗಳ ವಿರುದ್ಧ ಜನರು ಒಂದಾಗದಿದ್ದರೆ ನಮ್ಮ ಮುಂದಿನ ಪೀಳಿಗೆಗಳು ಇದರ ಪರಿಣಾಮ ಅನುಭವಿಸಬೇಕಾಗುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಹೇಳಿದರು.
‘ಸಂಘ ಪರಿವಾರದ ಸಂಘಟನೆಗಳೂ ಸೇರಿದಂತೆ ವಿವಿಧ ಕೋಮುವಾದಿ ಶಕ್ತಿಗಳು ದಕ್ಷಿಣ ಕನ್ನಡ ಜಿಲ್ಲೆಗೆ ಕೆಟ್ಟ ಹೆಸರು ತರುವ ಕೆಲಸವನ್ನು ಉದ್ದೇಶಪೂರ್ವಕವಾಗಿ ಮಾಡುತ್ತಿವೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಕಾಂಗ್ರೆಸ್ ಸರ್ಕಾರದ ಆರನೇ ಗ್ಯಾರಂಟಿ ಎಲ್ಲ ವಸ್ತುಗಳ ಬೆಲೆಗಳ ಏರಿಕೆಯ ಗ್ಯಾರಂಟಿ ಎಂದು ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ಹರಿಹಾಯ್ದಿದ್ದಾರೆ.
ತಿರುಪತಿ ತಿರುಮಲ ದೇವಸ್ಥಾನ ಟ್ರಸ್ಟ್ (ಟಿಟಿಡಿ) ಲಡ್ಡು ತಯಾರಿಕೆಗೆ ತುಪ್ಪ ಪೂರೈಕೆ ಮಾಡಲು ಅನುಮತಿ ನೀಡಿಲ್ಲ ಎಂದು ಕರ್ನಾಟಕ ರಾಜ್ಯ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್) ಅಧ್ಯಕ್ಷ ಹೇಳಿರುವ ಮಾತು ಸತ್ಯಕ್ಕೆ ದೂರವಾಗಿದ್ದು ಎಂದು ಟಿಟಿಡಿಯ ಧರ್ಮರೆಡ್ಡಿ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡನೆ ಸಲ ಸಿಎಂ ಆದ ಬಳಿಕ ಇದೇ ಮೊದಲ ಬಾರಿಗೆ ಆಗಸ್ಟ್ 3ರಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ.
ಹಸಿ ತರಕಾರಿ, ಹಣ್ಣುಗಳನ್ನು ತಿಂದು ಬದುಕುತ್ತಿದ್ದ ರಷ್ಯಾದ ಯುವತಿಯೊಬ್ಬಳು ಹಸಿವಿನಿಂದ ಮೃತಪಟ್ಟಿದ್ದಾಳೆ ಎಂದು ವರದಿಯಾಗಿದೆ
‘ವರ್ಗಾವಣೆ ವಿಚಾರವಾಗಿ ಮುಖ್ಯಮಂತ್ರಿ ಜೊತೆ ರಹಸ್ಯವಾಗಿಯೇ ಮಾತನಾಡಿದ್ದೇನೆ. ವರ್ಗಾವಣೆ ವಿಚಾರವನ್ನು ಬೀದಿಯಲ್ಲಿ ಕುಳಿತು ಮಾತನಾಡುವುದಕ್ಕೆ ಸಾಧ್ಯವೇ? ಹಿಂದೆಯೂ ಮಾತನಾಡಿದ್ದೇವೆ. ಮುಂದೆಯೂ ರಹಸ್ಯವಾಗಿಯೇ ಮಾತನಾಡುತ್ತೇವೆ’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.
ಭಾರತ ಕ್ರಿಕೆಟ್ ತಂಡದ ಆಟಗಾರರ ಬಗ್ಗೆ ಮಾಜಿ ನಾಯಕ ಕಪಿಲ್ ದೇವ್ ಮಾಡಿರುವ ಟೀಕೆಗೆ ಪ್ರತಿಕ್ರಿಯಿಸಿರುವ ಆಲ್ರೌಂಡರ್ ರವೀಂದ್ರ ಜಡೇಜ, ‘ಭಾರತ ತಂಡ ಸೋತಾಗ ಈ ರೀತಿಯ ಪ್ರತಿಕ್ರಿಯೆಗಳು ಬರುವುದು ಸಾಮಾನ್ಯ’ ಎಂದಿದ್ದಾರೆ.