<p>ರಾಷ್ಟ್ರೀಯ, ರಾಜ್ಯ, ವಿದೇಶಕ್ಕೆ ಸಂಬಂಧಿಸಿದ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..</p>.<p>ಬಾಂಗ್ಲಾದೇಶ ಮಾತ್ರವಲ್ಲ ಭಾರತದಲ್ಲಿ ಕೂಡ ಹಿಂದೂಗಳ ಸ್ಥಿತಿ ಭಯಾನಕವಾಗಿದೆ. ಬಾಂಗ್ಲಾದೇಶದಲ್ಲಿ ಹಿಂದೂಗಳ ರಕ್ಷಣೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಒತ್ತಾಯಿಸಿದ್ದಾರೆ.<strong>ಬಾಂಗ್ಲಾ ಮಾತ್ರವಲ್ಲ ಭಾರತದಲ್ಲೂ ಹಿಂದೂಗಳ ಸ್ಥಿತಿ ಭಯಾನಕವಾಗಿದೆ: ಪೇಜಾವರ ಶ್ರೀ</strong></p>.ಬಾಂಗ್ಲಾ ಮಾತ್ರವಲ್ಲ ಭಾರತದಲ್ಲೂ ಹಿಂದೂಗಳ ಸ್ಥಿತಿ ಭಯಾನಕವಾಗಿದೆ: ಪೇಜಾವರ ಶ್ರೀ.<p>ಮಕ್ಕಳಿಗೆ ಆಟವಾಡಲು ಸರಳವಾಗಿ ಅವಕಾಶಗಳು ದೊರೆಯಬೇಕು. ಕ್ರೀಡೆಯು ಸಮಯದ ಅಭಾವ, ಅವಕಾಶಗಳ ವಂಚನೆ, ಟ್ರಾಫಿಕ್ ಮತ್ತು ಮೂಲಸೌಕರ್ಯಗಳ ಒತ್ತಡಕ್ಕೆ ಬಲಿಯಾಗಬಾರದು ಎಂದು ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ರಾಹುಲ್ ದ್ರಾವಿಡ್ ಹೇಳಿದರು.</p>.DH Summit:ಪ್ರತಿ ಮಗುವಿಗೂ ಆಟದ ಸ್ವಾತಂತ್ರ್ಯ,ಅವಕಾಶ ಖಚಿತಪಡಿಸಬೇಕಿದೆ; ದ್ರಾವಿಡ್.<p><strong>ಬೆಂಗಳೂರು</strong>: ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ಶುಕ್ರವಾರ ಮಧ್ಯಾಹ್ನ ಬಂಧಿಸಿದ್ದಾರೆ. ಮುಡಾ ಮಾಜಿ ಆಯುಕ್ತ, ಕೆಎಎಸ್ ಅಧಿಕಾರಿ ಡಿ.ಬಿ.ನಟೇಶ್ ಅವರು ನೀಡಿದ ದೂರಿನ ಮೇರೆಗೆ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.</p>.ನಕಲಿ ದಾಖಲೆ ಸೃಷ್ಟಿಸಿ ಅಪಪ್ರಚಾರ ಆರೋಪ: ಮೈಸೂರಿನ ಸ್ನೇಹಮಯಿ ಕೃಷ್ಣ ಬಂಧನ.<p>'ಬಾಗಲಕೋಟೆಯಲ್ಲಿ ನಡೆದ ಕಲ್ಲು ತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದಕ್ಕೆ ಮಾರಕವಾಗಿದ್ದು ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.</p>.ಬಾಗಲಕೋಟೆ ಕಲ್ಲು ತೂರಾಟ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ.<p>ಭಾರತ–ಅಮೆರಿಕ ವ್ಯಾಪಾರ ಒಪ್ಪಂದ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ‘ಅಮೆರಿಕದ ‘ ಬಿಗಿ ಹಿಡಿತ’ಕ್ಕೆ ಸಿಲುಕಿ ಪ್ರಧಾನಿ ನರೇಂದ್ರ ಮೋದಿ ಅವರು ‘ದೈನ್ಯ ಸ್ಥಿತಿ’ಯಲ್ಲಿ ಶರಣಾಗಿದ್ದಾರೆ. ಹೀಗಾಗಿ ಅಮೆರಿಕಕ್ಕೆ ಹೆಚ್ಚಿನದನ್ನು ನೀಡಿ, ಭಾರತ ಕಡಿಮೆ ಪಡೆದುಕೊಳ್ಳುವ ಒಪ್ಪಂದಕ್ಕೆ ಅವರು ಸಹಿ ಮಾಡಿದ್ದಾರೆ’ ಎಂದು ಆರೋಪಿಸಿದ್ದಾರೆ.</p>.ಅಮೆರಿಕದ ಬಿಗಿಹಿಡಿತದಲ್ಲಿ ಮೋದಿ: ರಾಹುಲ್ ಗಾಂಧಿ.<p>'ದಿ ಕೇರಳ ಸ್ಟೋರಿ 2' ಚಿತ್ರಕ್ಕೆ ನೀಡಿರುವ ಪ್ರಮಾಣೀಕರಣವನ್ನು ರದ್ದುಗೊಳಿಸಬೇಕು ಹಾಗೂ ಸಿನಿಮಾದ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಕೆಲವು ಬದಲಾವಣೆಗಳನ್ನು ಮಾಡುವ ಕುರಿತು ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ್ದ ಅರ್ಜಿಯ ಮೇರೆಗೆ ಕೇರಳ ಹೈಕೋರ್ಟ್ 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ನಿರ್ಮಾಪಕರಿಗೆ, ಕೇಂದ್ರ ಚಲನಚಿತ್ರ ಸೆನ್ಸಾರ್ ಮಂಡಳಿಗೆ (ಸಿಬಿಎಫ್ಸಿ ) ಮತ್ತು ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.</p>.‘ದಿ ಕೇರಳ ಸ್ಟೋರಿ–2’ ಸಿನಿಮಾ ನಿರ್ದೇಶಕರಿಗೆ ಹೈಕೋರ್ಟ್ ನೋಟಿಸ್.<p>ಅಸ್ಸಾಂನಲ್ಲಿ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕಾಚಾರ್ ಬಳಿ ಭಾರತ–ಬಾಂಗ್ಲಾ ಗಡಿಯ ಭದ್ರತಾ ವ್ಯವಸ್ಥೆ ಪರಿಶೀಲಿಸಿದರು. ಈ ವೇಳೆ ಅಮಿತ್ ಶಾ ಅವರಿಗೆ ಅಸ್ಸಾಂ ಮುಖ್ಯಮಂತ್ರಿ ಹಿಮಾಂತ್ ಬಿಸ್ವ ಶರ್ಮಾ ಹಾಗೂ ಬಿಎಸ್ಎಫ್ನ ಹಿರಿಯ ಅಧಿಕಾರಿಗಳು ಸಾಥ್ ನೀಡಿದರು.</p>.ಅಸ್ಸಾಂನಲ್ಲಿ ಭಾರತ–ಬಾಂಗ್ಲಾ ಗಡಿಯ ಭದ್ರತಾ ವ್ಯವಸ್ಥೆ ಪರಿಶೀಲಿಸಿದ ಅಮಿತ್ ಶಾ.<p><strong>ನವದೆಹಲಿ:</strong> ‘ಇಂಡಿಯಾ ‘ಎ.ಐ ಇಂಪ್ಯಾಕ್ಟ್ ಶೃಂಗಸಭೆ’ ನಡೆಯುತ್ತಿರುವ ಹಾಲ್ನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರ ಗುಂಪೊಂದು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅರಬೆತ್ತಲೆ ಪ್ರತಿಭಟನೆ ನಡೆಸಿತು.</p>.AI Summit | ಮೋದಿ ವಿರುದ್ಧ ಪ್ರತಿಭಟನೆ: ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ.<p><strong>ನವದೆಹಲಿ:</strong> ಇಲ್ಲಿನ ಚಿನಿವಾರ ಪೇಟೆಯಲ್ಲಿ ಶುಕ್ರವಾರ ನಡೆದ ವಹಿವಾಟಿನಲ್ಲಿ ಚಿನ್ನ ಧಾರಣೆ ಏರಿಕೆ ಕಂಡಿದ್ದು, ಬೆಳ್ಳಿ ಧಾರಣೆ ಯಥಾಸ್ಥಿತಿಯಲ್ಲಿದೆ.10 ಗ್ರಾಂ ಚಿನ್ನದ (ಶೇ 99.9ರಷ್ಟು ಪರಿಶುದ್ಧತೆ) ದರವು ₹1,850 ಹೆಚ್ಚಳವಾಗಿ, ₹1,59,500ರಂತೆ ಮಾರಾಟವಾಗಿದೆ. ಬೆಳ್ಳಿ ದರಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ (ಕೆ.ಜಿಗೆ ₹2.64 ಲಕ್ಷದಷ್ಟಿದೆ) ಎಂದು ಅಖಿಲ ಭಾರತ ಸರಾಫ್ ಅಸೋಸಿಯೇಷನ್ ತಿಳಿಸಿದೆ.</p>.Gold Price | 10 ಗ್ರಾಂ ಚಿನ್ನದ ದರ ₹850 ಹೆಚ್ಚಳ: ಬೆಳ್ಳಿ ದರ ಯಥಾಸ್ಥಿತಿ.<p>ಕ್ರಿಕೆಟ್ ಪಂದ್ಯಗಳ ಸಂದರ್ಭದಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳ ಆಟಗಾರರು ಮೈದಾನದಲ್ಲಿ ಪರಸ್ಪರ ಕೈ ಕುಲುಕದಿರುವುದು, ಮಾತನಾಡದಿರುವುದು ನಿಜವಲ್ಲ ಎಂದು ಇಂಗ್ಲೆಂಡ್ ತಂಡದ ಮಾಜಿ ನಾಯಕ ಆಲಿಸ್ಟರ್ ಕುಕ್ ಹೇಳಿದ್ದಾರೆ.</p> .ಭಾರತ–ಪಾಕ್ ಆಟಗಾರರದ್ದು 'ನಕಲಿ' ವೈರತ್ವ: ಅಚ್ಚರಿಯ ಹೇಳಿಕೆ ಮೂಲಕ ಕುಕ್ಕಿದ ಕುಕ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಷ್ಟ್ರೀಯ, ರಾಜ್ಯ, ವಿದೇಶಕ್ಕೆ ಸಂಬಂಧಿಸಿದ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..</p>.<p>ಬಾಂಗ್ಲಾದೇಶ ಮಾತ್ರವಲ್ಲ ಭಾರತದಲ್ಲಿ ಕೂಡ ಹಿಂದೂಗಳ ಸ್ಥಿತಿ ಭಯಾನಕವಾಗಿದೆ. ಬಾಂಗ್ಲಾದೇಶದಲ್ಲಿ ಹಿಂದೂಗಳ ರಕ್ಷಣೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಒತ್ತಾಯಿಸಿದ್ದಾರೆ.<strong>ಬಾಂಗ್ಲಾ ಮಾತ್ರವಲ್ಲ ಭಾರತದಲ್ಲೂ ಹಿಂದೂಗಳ ಸ್ಥಿತಿ ಭಯಾನಕವಾಗಿದೆ: ಪೇಜಾವರ ಶ್ರೀ</strong></p>.ಬಾಂಗ್ಲಾ ಮಾತ್ರವಲ್ಲ ಭಾರತದಲ್ಲೂ ಹಿಂದೂಗಳ ಸ್ಥಿತಿ ಭಯಾನಕವಾಗಿದೆ: ಪೇಜಾವರ ಶ್ರೀ.<p>ಮಕ್ಕಳಿಗೆ ಆಟವಾಡಲು ಸರಳವಾಗಿ ಅವಕಾಶಗಳು ದೊರೆಯಬೇಕು. ಕ್ರೀಡೆಯು ಸಮಯದ ಅಭಾವ, ಅವಕಾಶಗಳ ವಂಚನೆ, ಟ್ರಾಫಿಕ್ ಮತ್ತು ಮೂಲಸೌಕರ್ಯಗಳ ಒತ್ತಡಕ್ಕೆ ಬಲಿಯಾಗಬಾರದು ಎಂದು ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ರಾಹುಲ್ ದ್ರಾವಿಡ್ ಹೇಳಿದರು.</p>.DH Summit:ಪ್ರತಿ ಮಗುವಿಗೂ ಆಟದ ಸ್ವಾತಂತ್ರ್ಯ,ಅವಕಾಶ ಖಚಿತಪಡಿಸಬೇಕಿದೆ; ದ್ರಾವಿಡ್.<p><strong>ಬೆಂಗಳೂರು</strong>: ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ಶುಕ್ರವಾರ ಮಧ್ಯಾಹ್ನ ಬಂಧಿಸಿದ್ದಾರೆ. ಮುಡಾ ಮಾಜಿ ಆಯುಕ್ತ, ಕೆಎಎಸ್ ಅಧಿಕಾರಿ ಡಿ.ಬಿ.ನಟೇಶ್ ಅವರು ನೀಡಿದ ದೂರಿನ ಮೇರೆಗೆ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.</p>.ನಕಲಿ ದಾಖಲೆ ಸೃಷ್ಟಿಸಿ ಅಪಪ್ರಚಾರ ಆರೋಪ: ಮೈಸೂರಿನ ಸ್ನೇಹಮಯಿ ಕೃಷ್ಣ ಬಂಧನ.<p>'ಬಾಗಲಕೋಟೆಯಲ್ಲಿ ನಡೆದ ಕಲ್ಲು ತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದಕ್ಕೆ ಮಾರಕವಾಗಿದ್ದು ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.</p>.ಬಾಗಲಕೋಟೆ ಕಲ್ಲು ತೂರಾಟ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ.<p>ಭಾರತ–ಅಮೆರಿಕ ವ್ಯಾಪಾರ ಒಪ್ಪಂದ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ‘ಅಮೆರಿಕದ ‘ ಬಿಗಿ ಹಿಡಿತ’ಕ್ಕೆ ಸಿಲುಕಿ ಪ್ರಧಾನಿ ನರೇಂದ್ರ ಮೋದಿ ಅವರು ‘ದೈನ್ಯ ಸ್ಥಿತಿ’ಯಲ್ಲಿ ಶರಣಾಗಿದ್ದಾರೆ. ಹೀಗಾಗಿ ಅಮೆರಿಕಕ್ಕೆ ಹೆಚ್ಚಿನದನ್ನು ನೀಡಿ, ಭಾರತ ಕಡಿಮೆ ಪಡೆದುಕೊಳ್ಳುವ ಒಪ್ಪಂದಕ್ಕೆ ಅವರು ಸಹಿ ಮಾಡಿದ್ದಾರೆ’ ಎಂದು ಆರೋಪಿಸಿದ್ದಾರೆ.</p>.ಅಮೆರಿಕದ ಬಿಗಿಹಿಡಿತದಲ್ಲಿ ಮೋದಿ: ರಾಹುಲ್ ಗಾಂಧಿ.<p>'ದಿ ಕೇರಳ ಸ್ಟೋರಿ 2' ಚಿತ್ರಕ್ಕೆ ನೀಡಿರುವ ಪ್ರಮಾಣೀಕರಣವನ್ನು ರದ್ದುಗೊಳಿಸಬೇಕು ಹಾಗೂ ಸಿನಿಮಾದ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಕೆಲವು ಬದಲಾವಣೆಗಳನ್ನು ಮಾಡುವ ಕುರಿತು ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ್ದ ಅರ್ಜಿಯ ಮೇರೆಗೆ ಕೇರಳ ಹೈಕೋರ್ಟ್ 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ನಿರ್ಮಾಪಕರಿಗೆ, ಕೇಂದ್ರ ಚಲನಚಿತ್ರ ಸೆನ್ಸಾರ್ ಮಂಡಳಿಗೆ (ಸಿಬಿಎಫ್ಸಿ ) ಮತ್ತು ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.</p>.‘ದಿ ಕೇರಳ ಸ್ಟೋರಿ–2’ ಸಿನಿಮಾ ನಿರ್ದೇಶಕರಿಗೆ ಹೈಕೋರ್ಟ್ ನೋಟಿಸ್.<p>ಅಸ್ಸಾಂನಲ್ಲಿ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕಾಚಾರ್ ಬಳಿ ಭಾರತ–ಬಾಂಗ್ಲಾ ಗಡಿಯ ಭದ್ರತಾ ವ್ಯವಸ್ಥೆ ಪರಿಶೀಲಿಸಿದರು. ಈ ವೇಳೆ ಅಮಿತ್ ಶಾ ಅವರಿಗೆ ಅಸ್ಸಾಂ ಮುಖ್ಯಮಂತ್ರಿ ಹಿಮಾಂತ್ ಬಿಸ್ವ ಶರ್ಮಾ ಹಾಗೂ ಬಿಎಸ್ಎಫ್ನ ಹಿರಿಯ ಅಧಿಕಾರಿಗಳು ಸಾಥ್ ನೀಡಿದರು.</p>.ಅಸ್ಸಾಂನಲ್ಲಿ ಭಾರತ–ಬಾಂಗ್ಲಾ ಗಡಿಯ ಭದ್ರತಾ ವ್ಯವಸ್ಥೆ ಪರಿಶೀಲಿಸಿದ ಅಮಿತ್ ಶಾ.<p><strong>ನವದೆಹಲಿ:</strong> ‘ಇಂಡಿಯಾ ‘ಎ.ಐ ಇಂಪ್ಯಾಕ್ಟ್ ಶೃಂಗಸಭೆ’ ನಡೆಯುತ್ತಿರುವ ಹಾಲ್ನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರ ಗುಂಪೊಂದು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅರಬೆತ್ತಲೆ ಪ್ರತಿಭಟನೆ ನಡೆಸಿತು.</p>.AI Summit | ಮೋದಿ ವಿರುದ್ಧ ಪ್ರತಿಭಟನೆ: ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ.<p><strong>ನವದೆಹಲಿ:</strong> ಇಲ್ಲಿನ ಚಿನಿವಾರ ಪೇಟೆಯಲ್ಲಿ ಶುಕ್ರವಾರ ನಡೆದ ವಹಿವಾಟಿನಲ್ಲಿ ಚಿನ್ನ ಧಾರಣೆ ಏರಿಕೆ ಕಂಡಿದ್ದು, ಬೆಳ್ಳಿ ಧಾರಣೆ ಯಥಾಸ್ಥಿತಿಯಲ್ಲಿದೆ.10 ಗ್ರಾಂ ಚಿನ್ನದ (ಶೇ 99.9ರಷ್ಟು ಪರಿಶುದ್ಧತೆ) ದರವು ₹1,850 ಹೆಚ್ಚಳವಾಗಿ, ₹1,59,500ರಂತೆ ಮಾರಾಟವಾಗಿದೆ. ಬೆಳ್ಳಿ ದರಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ (ಕೆ.ಜಿಗೆ ₹2.64 ಲಕ್ಷದಷ್ಟಿದೆ) ಎಂದು ಅಖಿಲ ಭಾರತ ಸರಾಫ್ ಅಸೋಸಿಯೇಷನ್ ತಿಳಿಸಿದೆ.</p>.Gold Price | 10 ಗ್ರಾಂ ಚಿನ್ನದ ದರ ₹850 ಹೆಚ್ಚಳ: ಬೆಳ್ಳಿ ದರ ಯಥಾಸ್ಥಿತಿ.<p>ಕ್ರಿಕೆಟ್ ಪಂದ್ಯಗಳ ಸಂದರ್ಭದಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳ ಆಟಗಾರರು ಮೈದಾನದಲ್ಲಿ ಪರಸ್ಪರ ಕೈ ಕುಲುಕದಿರುವುದು, ಮಾತನಾಡದಿರುವುದು ನಿಜವಲ್ಲ ಎಂದು ಇಂಗ್ಲೆಂಡ್ ತಂಡದ ಮಾಜಿ ನಾಯಕ ಆಲಿಸ್ಟರ್ ಕುಕ್ ಹೇಳಿದ್ದಾರೆ.</p> .ಭಾರತ–ಪಾಕ್ ಆಟಗಾರರದ್ದು 'ನಕಲಿ' ವೈರತ್ವ: ಅಚ್ಚರಿಯ ಹೇಳಿಕೆ ಮೂಲಕ ಕುಕ್ಕಿದ ಕುಕ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>