<p>ರಾಜ್ಯ, ರಾಷ್ಟ್ರೀಯ, ಅಂತರರಾಷ್ಟ್ರೀಯ ವಿದ್ಯಮಾನಗಳಿಗೆ ಸಂಬಂಧಿಸಿದಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..</p>.<p>ಒಪ್ಪಂದ ಮಾಡಿಕೊಳ್ಳಲು ಇರಾನ್ಗೆ ನೀಡಿದ್ದ ಗಡುವು ಸಮೀಪಿಸುತ್ತಿದ್ದಂತೆಯೇ ‘ಇರಾನ್ ನಾಗರಿಕತೆಯನ್ನೇ ವಿನಾಶ ಮಾಡುತ್ತೇವೆ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುಡುಗಿದ್ದಾರೆ. ತೈಲ ಘಟಕಗಳಿರುವ ಇರಾನ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ–ಇಸ್ರೇಲ್ ಪಡೆಗಳು ದಾಳಿ ನಡೆಸಿವೆ.</p>.West Asia War: ಇರಾನ್ ಸಂಹಾರ ಮಾಡುವುದಾಗಿ ಡೊನಾಲ್ಡ್ ಟ್ರಂಪ್ ಅಬ್ಬರ.<p>ಉಪ ಚುನಾವಣೆಯ ನಡೆಯುತ್ತಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರದಲ್ಲಿ ಬಹಿರಂಗ ಪ್ರಚಾರಕ್ಕೆ ಮಂಗಳವಾರ ಸಂಜೆ ತೆರೆಬಿದ್ದಿತು. ಉಭಯ ಕ್ಷೇತ್ರಗಳಲ್ಲಿ ಗುರುವಾರ (ಏ. 9) ಮತದಾನ ನಡೆಯಲಿದೆ. ಅದಕ್ಕೆ ಮುನ್ನಾದಿನವಾದ ಬುಧವಾರ ಅಭ್ಯರ್ಥಿಗಳು, ಬೆಂಬಲಿಗರು ಮತದಾರರ ಮನವೊಲಿಸಲು ಮನೆ ಮನೆಗೆ ತೆರಳಿ ಪ್ರಚಾರ ನಡೆಸುವ ಕಸರತ್ತು ನಡೆಸಲಿದ್ದಾರೆ. </p>.ದಾವಣಗೆರೆ, ಬಾಗಲಕೋಟೆ ಉಪಚುನಾವಣೆ: ಬಹಿರಂಗ ಪ್ರಚಾರ ಅಂತ್ಯ, ಏ.9ಕ್ಕೆ ಮತದಾನ.<p>ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡರಲ್ಲೂ ಪಾರಮ್ಯ ಮೆರೆದ ರಾಜಸ್ಥಾನ ರಾಯಲ್ಸ್ ತಂಡವು ಮಂಗಳವಾರ ನಡೆದ ಐಪಿಎಲ್ ಪಂದ್ಯದಲ್ಲಿ 27 ರನ್ಗಳಿಂದ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿತು. ಮಳೆಯಿಂದಾಗಿ ಸುಮಾರು ಎರಡೂವರೆ ಗಂಟೆ ತಡವಾಗಿ ಆರಂಭವಾದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ಆರಂಭಿಕರಾದ ಯಶಸ್ವಿ ಜೈಸ್ವಾಲ್ ಹಾಗೂ ವೈಭವ್ ಸೂರ್ಯವಂಶಿ ಅಬ್ಬರಿಸಿದರು. ಈ ಜೋಡಿಯ ಮಿಂಚಿನ ಆಟದ ಬಲದಿಂದ ರಿಯಾನ್ ಪರಾಗ್ ಪಡೆ 11 ಓವರ್ಗಳಲ್ಲಿ 3 ವಿಕೆಟ್ಗಳಿಗೆ 151 ರನ್ ಗಳಿಸಿತು.</p>.IPL 2026: ಆರ್ಆರ್ಗೆ ‘ಯಶಸ್ವಿ’ ಜಯ; ಮುಗ್ಗರಿಸಿದ ಮುಂಬೈ.<p>ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ರಾಜ್ಯ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ. ಮಹಿಳೆ ಸೇರಿ ನಾಲ್ವರು ಹಣಕ್ಕಾಗಿ ‘ಬ್ಲ್ಯಾಕ್ಮೇಲ್’ ಮಾಡಿದ್ದಾರೆ ಎಂದು ಸ್ವಾಮೀಜಿಯವರು ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದಾರೆ.</p>.ಲೈಂಗಿಕ ಕಿರುಕುಳ ಆರೋಪ: ಪಂಚಮಸಾಲಿ ಶ್ರೀ ದೂರು–ಪ್ರತಿದೂರು.<p>ಗಡುವು ಮೀರಿದ್ದಲ್ಲಿ ಇಂದು ರಾತ್ರಿಯೇ ಇರಾನ್ ಸರ್ವನಾಶವಾಗಲಿದೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆದರಿಕೆ ಒಡ್ಡಿದ ಬೆನ್ನಲ್ಲೇ ಇರಾನ್ನಲ್ಲಿರುವ ಭಾರತೀಯರಿಗೆ ಮುಂದಿನ 48 ತಾಸು ಇದ್ದಲ್ಲೇ ಇರುವಂತೆ ತುರ್ತು ಸೂಚನೆ ನೀಡಲಾಗಿದೆ.</p><p>ಪಶ್ಚಿಮ ಏಷ್ಯಾ ಯುದ್ಧ ನಿರ್ಣಾಯಕ ಹಂತವನ್ನು ತಲುಪಿರುವಂತೆಯೇ ಮುಂದಿನ 48 ಗಂಟೆಗಳ ಕಾಲ ಎಲ್ಲಿ ಇರುತ್ತಾರೆಯೋ ಅಲ್ಲೇ ಇರುವಂತೆ ಭಾರತೀಯ ನಾಗರಿಕರಿಗೆ ತುರ್ತು ನಿರ್ದೇಶನ ನೀಡಲಾಗಿದೆ.</p>.ಮುಂದಿನ 48 ತಾಸು 'ಇದ್ದಲ್ಲೇ ಇರಿ': ಇರಾನ್ನಲ್ಲಿರುವ ಭಾರತೀಯರಿಗೆ ತುರ್ತು ಸಂದೇಶ.<p>ಡೆಲ್ಲಿ ಕ್ಯಾಪಿಟಲ್ಸ್ ತಂಡವು ಬುಧವಾರ ನಡೆಯಲಿರುವ ಐಪಿಎಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ಎದುರಿಸಲಿದ್ದು, ಗೆಲುವಿನ ಓಟ ಮುಂದುವರಿಸುವ ವಿಶ್ವಾಸದಲ್ಲಿದೆ. ಆದರೆ ಡೆಲ್ಲಿ ತಂಡವು ಅನುಭವಿ ಕೆ.ಎಲ್.ರಾಹುಲ್ ಸೇರಿದಂತೆ ಪ್ರಮುಖ ಬ್ಯಾಟರ್ಗಳಿಂದ ಹೆಚ್ಚಿನ ರನ್ನುಗಳನ್ನು ನಿರೀಕ್ಷಿಸುತ್ತಿದೆ.</p>.IPL 2026: ಕ್ಯಾಪಿಟಲ್ಸ್ಗೆ ಇಂದು ಟೈಟನ್ಸ್ ಸವಾಲು.<p>ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿ ಅವರ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಮಂಗಳವಾರ ವಾಗ್ದಾಳಿ ನಡೆಸಿದರು. ರೇವಂತ ರೆಡ್ಡಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಪಿಣರಾಯಿ ಅವರು, ‘ಮುಖ್ಯಮಂತ್ರಿ ಅವರಿಗೆ ಮೂಲತಃ ಸನ್ನಡತೆ ಇರಬೇಕು. ಆನಂತರ ಅದು ಪಾಲನೆಯಾಗುತ್ತಿದೆಯೇ ಎಂದು ಪ್ರಶ್ನಿಸಬೇಕು’ ಎಂದು ಹೇಳಿದರು. ಬಳಿಕ ‘ಸರಿಯಾದ ಸಮಯದಲ್ಲಿ ಪ್ರತಿಕ್ರಿಯೆ ನೀಡುತ್ತೇನೆ’ ಎಂದೂ ಹೇಳಿದರು.</p>.ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಪಿಣರಾಯಿ ವಾಗ್ದಾಳಿ.<p>‘ಪಂಚಗ್ಯಾರಂಟಿ ಯೋಜನೆಗಳಿಗೆ ರಾಜ್ಯ ಸರ್ಕಾರ ಹಣ ಬಿಡುಗಡೆ ಮಾಡುವುದನ್ನು ಆಕ್ಷೇಪಿಸಿ ಚುನಾವಣಾ ಆಯೋಗಕ್ಕೆ ದೂರು ನೀಡಿರುವ ಬಿಜೆಪಿ, ಬಡವರು ಹಾಗೂ ಮಹಿಳೆಯರ ಪರವಾದ ಯೋಜನೆ ನಿಲ್ಲಿಸುವ ಷಡ್ಯಂತ್ರ ರೂಪಿಸಿದೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೂರಿದರು.</p>.‘ಗ್ಯಾರಂಟಿ’ ಸ್ಥಗಿತಕ್ಕೆ ಷಡ್ಯಂತ್ರ: ಡಿ.ಕೆ. ಶಿವಕುಮಾರ್.<p>ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಿಜೆಪಿ ಮತ್ತು ಆರ್ಎಸ್ಎಸ್ ಅನ್ನು ಸಮೀಕರಿಸಿ ಇವುಗಳು ‘ವಿಷಕಾರಿ ಹಾವುಗಳು’ ಎಂದಿದ್ದಾರೆ. ಇದು ಕೋಮು ಹಿಂಸೆಗೆ ಪ್ರಚೋದನೆ ನೀಡುವ ಹೇಳಿಕೆಯಾಗಿದೆ’ ಎಂದು ವಿಶ್ವ ಹಿಂದೂ ಪರಿಷತ್ ಮಂಗಳವಾರ ಆರೋಪಿಸಿದೆ.</p>.ಖರ್ಗೆ ಹೇಳಿಕೆಯಿಂದ ಕೋಮು ಹಿಂಸೆಗೆ ಪ್ರಚೋದನೆ: ವಿಶ್ವ ಹಿಂದೂ ಪರಿಷತ್.<p>ಕೋಲ್ಕತ್ತ ಮೇಲೆ ದಾಳಿ ನಡೆಸುವ ಕುರಿತ ಪಾಕಿಸ್ತಾನದ ಬೆದರಿಕೆಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ತಿರುಗೇಟು ನೀಡಿದ್ದಾರೆ. 55 ವರ್ಷಗಳ ಹಿಂದೆಯೇ ಪಾಕಿಸ್ತಾನ ಎರಡಾಗಿ ವಿಭಜನೆಗೊಂಡಾಗ ಅದರ ಪರಿಣಾಮಗಳನ್ನು ಎದುರಿಸಿತ್ತು ಎಂದು ಹೇಳಿದ್ದಾರೆ.</p>.ಬಂಗಾಳ ಮೇಲೆ ಕಣ್ಣು ನೆಟ್ಟರೆ ಪಾಕ್ ಮತ್ತಷ್ಟು ಹೋಳು: ರಾಜನಾಥ ಎಚ್ಚರಿಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಜ್ಯ, ರಾಷ್ಟ್ರೀಯ, ಅಂತರರಾಷ್ಟ್ರೀಯ ವಿದ್ಯಮಾನಗಳಿಗೆ ಸಂಬಂಧಿಸಿದಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..</p>.<p>ಒಪ್ಪಂದ ಮಾಡಿಕೊಳ್ಳಲು ಇರಾನ್ಗೆ ನೀಡಿದ್ದ ಗಡುವು ಸಮೀಪಿಸುತ್ತಿದ್ದಂತೆಯೇ ‘ಇರಾನ್ ನಾಗರಿಕತೆಯನ್ನೇ ವಿನಾಶ ಮಾಡುತ್ತೇವೆ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುಡುಗಿದ್ದಾರೆ. ತೈಲ ಘಟಕಗಳಿರುವ ಇರಾನ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ–ಇಸ್ರೇಲ್ ಪಡೆಗಳು ದಾಳಿ ನಡೆಸಿವೆ.</p>.West Asia War: ಇರಾನ್ ಸಂಹಾರ ಮಾಡುವುದಾಗಿ ಡೊನಾಲ್ಡ್ ಟ್ರಂಪ್ ಅಬ್ಬರ.<p>ಉಪ ಚುನಾವಣೆಯ ನಡೆಯುತ್ತಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರದಲ್ಲಿ ಬಹಿರಂಗ ಪ್ರಚಾರಕ್ಕೆ ಮಂಗಳವಾರ ಸಂಜೆ ತೆರೆಬಿದ್ದಿತು. ಉಭಯ ಕ್ಷೇತ್ರಗಳಲ್ಲಿ ಗುರುವಾರ (ಏ. 9) ಮತದಾನ ನಡೆಯಲಿದೆ. ಅದಕ್ಕೆ ಮುನ್ನಾದಿನವಾದ ಬುಧವಾರ ಅಭ್ಯರ್ಥಿಗಳು, ಬೆಂಬಲಿಗರು ಮತದಾರರ ಮನವೊಲಿಸಲು ಮನೆ ಮನೆಗೆ ತೆರಳಿ ಪ್ರಚಾರ ನಡೆಸುವ ಕಸರತ್ತು ನಡೆಸಲಿದ್ದಾರೆ. </p>.ದಾವಣಗೆರೆ, ಬಾಗಲಕೋಟೆ ಉಪಚುನಾವಣೆ: ಬಹಿರಂಗ ಪ್ರಚಾರ ಅಂತ್ಯ, ಏ.9ಕ್ಕೆ ಮತದಾನ.<p>ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡರಲ್ಲೂ ಪಾರಮ್ಯ ಮೆರೆದ ರಾಜಸ್ಥಾನ ರಾಯಲ್ಸ್ ತಂಡವು ಮಂಗಳವಾರ ನಡೆದ ಐಪಿಎಲ್ ಪಂದ್ಯದಲ್ಲಿ 27 ರನ್ಗಳಿಂದ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿತು. ಮಳೆಯಿಂದಾಗಿ ಸುಮಾರು ಎರಡೂವರೆ ಗಂಟೆ ತಡವಾಗಿ ಆರಂಭವಾದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ಆರಂಭಿಕರಾದ ಯಶಸ್ವಿ ಜೈಸ್ವಾಲ್ ಹಾಗೂ ವೈಭವ್ ಸೂರ್ಯವಂಶಿ ಅಬ್ಬರಿಸಿದರು. ಈ ಜೋಡಿಯ ಮಿಂಚಿನ ಆಟದ ಬಲದಿಂದ ರಿಯಾನ್ ಪರಾಗ್ ಪಡೆ 11 ಓವರ್ಗಳಲ್ಲಿ 3 ವಿಕೆಟ್ಗಳಿಗೆ 151 ರನ್ ಗಳಿಸಿತು.</p>.IPL 2026: ಆರ್ಆರ್ಗೆ ‘ಯಶಸ್ವಿ’ ಜಯ; ಮುಗ್ಗರಿಸಿದ ಮುಂಬೈ.<p>ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ರಾಜ್ಯ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ. ಮಹಿಳೆ ಸೇರಿ ನಾಲ್ವರು ಹಣಕ್ಕಾಗಿ ‘ಬ್ಲ್ಯಾಕ್ಮೇಲ್’ ಮಾಡಿದ್ದಾರೆ ಎಂದು ಸ್ವಾಮೀಜಿಯವರು ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದಾರೆ.</p>.ಲೈಂಗಿಕ ಕಿರುಕುಳ ಆರೋಪ: ಪಂಚಮಸಾಲಿ ಶ್ರೀ ದೂರು–ಪ್ರತಿದೂರು.<p>ಗಡುವು ಮೀರಿದ್ದಲ್ಲಿ ಇಂದು ರಾತ್ರಿಯೇ ಇರಾನ್ ಸರ್ವನಾಶವಾಗಲಿದೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆದರಿಕೆ ಒಡ್ಡಿದ ಬೆನ್ನಲ್ಲೇ ಇರಾನ್ನಲ್ಲಿರುವ ಭಾರತೀಯರಿಗೆ ಮುಂದಿನ 48 ತಾಸು ಇದ್ದಲ್ಲೇ ಇರುವಂತೆ ತುರ್ತು ಸೂಚನೆ ನೀಡಲಾಗಿದೆ.</p><p>ಪಶ್ಚಿಮ ಏಷ್ಯಾ ಯುದ್ಧ ನಿರ್ಣಾಯಕ ಹಂತವನ್ನು ತಲುಪಿರುವಂತೆಯೇ ಮುಂದಿನ 48 ಗಂಟೆಗಳ ಕಾಲ ಎಲ್ಲಿ ಇರುತ್ತಾರೆಯೋ ಅಲ್ಲೇ ಇರುವಂತೆ ಭಾರತೀಯ ನಾಗರಿಕರಿಗೆ ತುರ್ತು ನಿರ್ದೇಶನ ನೀಡಲಾಗಿದೆ.</p>.ಮುಂದಿನ 48 ತಾಸು 'ಇದ್ದಲ್ಲೇ ಇರಿ': ಇರಾನ್ನಲ್ಲಿರುವ ಭಾರತೀಯರಿಗೆ ತುರ್ತು ಸಂದೇಶ.<p>ಡೆಲ್ಲಿ ಕ್ಯಾಪಿಟಲ್ಸ್ ತಂಡವು ಬುಧವಾರ ನಡೆಯಲಿರುವ ಐಪಿಎಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ಎದುರಿಸಲಿದ್ದು, ಗೆಲುವಿನ ಓಟ ಮುಂದುವರಿಸುವ ವಿಶ್ವಾಸದಲ್ಲಿದೆ. ಆದರೆ ಡೆಲ್ಲಿ ತಂಡವು ಅನುಭವಿ ಕೆ.ಎಲ್.ರಾಹುಲ್ ಸೇರಿದಂತೆ ಪ್ರಮುಖ ಬ್ಯಾಟರ್ಗಳಿಂದ ಹೆಚ್ಚಿನ ರನ್ನುಗಳನ್ನು ನಿರೀಕ್ಷಿಸುತ್ತಿದೆ.</p>.IPL 2026: ಕ್ಯಾಪಿಟಲ್ಸ್ಗೆ ಇಂದು ಟೈಟನ್ಸ್ ಸವಾಲು.<p>ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿ ಅವರ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಮಂಗಳವಾರ ವಾಗ್ದಾಳಿ ನಡೆಸಿದರು. ರೇವಂತ ರೆಡ್ಡಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಪಿಣರಾಯಿ ಅವರು, ‘ಮುಖ್ಯಮಂತ್ರಿ ಅವರಿಗೆ ಮೂಲತಃ ಸನ್ನಡತೆ ಇರಬೇಕು. ಆನಂತರ ಅದು ಪಾಲನೆಯಾಗುತ್ತಿದೆಯೇ ಎಂದು ಪ್ರಶ್ನಿಸಬೇಕು’ ಎಂದು ಹೇಳಿದರು. ಬಳಿಕ ‘ಸರಿಯಾದ ಸಮಯದಲ್ಲಿ ಪ್ರತಿಕ್ರಿಯೆ ನೀಡುತ್ತೇನೆ’ ಎಂದೂ ಹೇಳಿದರು.</p>.ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಪಿಣರಾಯಿ ವಾಗ್ದಾಳಿ.<p>‘ಪಂಚಗ್ಯಾರಂಟಿ ಯೋಜನೆಗಳಿಗೆ ರಾಜ್ಯ ಸರ್ಕಾರ ಹಣ ಬಿಡುಗಡೆ ಮಾಡುವುದನ್ನು ಆಕ್ಷೇಪಿಸಿ ಚುನಾವಣಾ ಆಯೋಗಕ್ಕೆ ದೂರು ನೀಡಿರುವ ಬಿಜೆಪಿ, ಬಡವರು ಹಾಗೂ ಮಹಿಳೆಯರ ಪರವಾದ ಯೋಜನೆ ನಿಲ್ಲಿಸುವ ಷಡ್ಯಂತ್ರ ರೂಪಿಸಿದೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೂರಿದರು.</p>.‘ಗ್ಯಾರಂಟಿ’ ಸ್ಥಗಿತಕ್ಕೆ ಷಡ್ಯಂತ್ರ: ಡಿ.ಕೆ. ಶಿವಕುಮಾರ್.<p>ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಿಜೆಪಿ ಮತ್ತು ಆರ್ಎಸ್ಎಸ್ ಅನ್ನು ಸಮೀಕರಿಸಿ ಇವುಗಳು ‘ವಿಷಕಾರಿ ಹಾವುಗಳು’ ಎಂದಿದ್ದಾರೆ. ಇದು ಕೋಮು ಹಿಂಸೆಗೆ ಪ್ರಚೋದನೆ ನೀಡುವ ಹೇಳಿಕೆಯಾಗಿದೆ’ ಎಂದು ವಿಶ್ವ ಹಿಂದೂ ಪರಿಷತ್ ಮಂಗಳವಾರ ಆರೋಪಿಸಿದೆ.</p>.ಖರ್ಗೆ ಹೇಳಿಕೆಯಿಂದ ಕೋಮು ಹಿಂಸೆಗೆ ಪ್ರಚೋದನೆ: ವಿಶ್ವ ಹಿಂದೂ ಪರಿಷತ್.<p>ಕೋಲ್ಕತ್ತ ಮೇಲೆ ದಾಳಿ ನಡೆಸುವ ಕುರಿತ ಪಾಕಿಸ್ತಾನದ ಬೆದರಿಕೆಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ತಿರುಗೇಟು ನೀಡಿದ್ದಾರೆ. 55 ವರ್ಷಗಳ ಹಿಂದೆಯೇ ಪಾಕಿಸ್ತಾನ ಎರಡಾಗಿ ವಿಭಜನೆಗೊಂಡಾಗ ಅದರ ಪರಿಣಾಮಗಳನ್ನು ಎದುರಿಸಿತ್ತು ಎಂದು ಹೇಳಿದ್ದಾರೆ.</p>.ಬಂಗಾಳ ಮೇಲೆ ಕಣ್ಣು ನೆಟ್ಟರೆ ಪಾಕ್ ಮತ್ತಷ್ಟು ಹೋಳು: ರಾಜನಾಥ ಎಚ್ಚರಿಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>