ನ.20ರ ತಡರಾತ್ರಿ ಸ್ಫೋಟ ಸಂಭವಿಸಿ ತ್ಯಾಜ್ಯವು ಕೃಷಿ ಭೂಮಿ ಹಾಗೂ ನದಿ ಸೇರಿದೆ. ಎರಡು ದಿನಗಳ ನಂತರ ಭತ್ತ, ರಾಗಿ, ಕಬ್ಬು ಬೆಳೆ ಸುಟ್ಟು ಹೋಗಿದೆ. ತ್ಯಾಜ್ಯವು ಶಿಂಷಾ ಒಡಲು ಸೇರಿ ಕುಡಿಯುವ ನೀರು ಕಲುಷಿತಗೊಂಡಿದೆ. ಅಂತರ್ಜಲ ಕೂಡ ಮಲಿನ
ಗೊಳ್ಳುವ ಅಪಾಯ ಎದುರಾಗಿದೆ. ನದಿ ತಟದಲ್ಲಿರುವ ಕೊಕ್ಕೆರೆ ಬೆಳ್ಳೂರಿನ ಪಕ್ಷಿಗಳ ಪ್ರಾಣಕ್ಕೂ ಕುತ್ತು ಬಂದಿದೆ. ಮೀನು ಕೃಷಿ ಮಾಡುತ್ತಿರುವ ಹೊಂಡಗಳಿಗೆ ತ್ಯಾಜ್ಯ ಹರಿದಿದ್ದು ಸಾವಿರಾರು ಮೀನುಗಳು ಸತ್ತಿವೆ.