<p><strong>ಚಿತ್ರದುರ್ಗ: </strong>ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷ ಸ್ಥಾನವನ್ನು ನಿರಾಕರಿಸಲು ತೀರ್ಮಾನಿಸಿರುವ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಸಚಿವ ಸ್ಥಾನ ಸಿಗುವರೆಗೂ ಶಾಸಕರಾಗಿಯಷ್ಟೇ ಮುಂದುವರಿಯುವುದಾಗಿ ಪ್ರಕಟಿಸಿದ್ದಾರೆ.</p>.<p>‘ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದೆ. ಸಂಪುಟ ವಿಸ್ತರಣೆಯ ಸಂದರ್ಭದಲ್ಲಿ ಅವಕಾಶ ಸಿಗದಿರುವುದರಿಂದ ಬೇಸರವಾಗಿದೆ. ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನವನ್ನು ಒಪ್ಪಿಕೊಳ್ಳುವುದಿಲ್ಲ. ಶಾಸಕನಾಗಿಯೇ ಇರುತ್ತೇನೆ’ ಎಂದು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.</p>.<p>‘ಸಚಿವ ಸ್ಥಾನ ಕೈತಪ್ಪಿದ್ದರಿಂದ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗುವುದಿಲ್ಲ. ಮತ್ತೊಬ್ಬರಂತೆ ಎಲ್ಲಿಗೂ ಹೋಗುವುದಿಲ್ಲ. ಪಕ್ಷಕ್ಕೆ ನಿಷ್ಠನಾಗಿದ್ದು, ಮುಖಂಡರಿಗೆ ಮನವರಿಕೆ ಮಾಡಿಕೊಡಲು ಪ್ರಯತ್ನಿಸುತ್ತೇನೆ. ಚಿತ್ರದುರ್ಗ ಜಿಲ್ಲೆಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಗಮನ ಸೆಳೆಯುತ್ತೇನೆ’ ಎಂದು ಹೇಳಿದರು.</p>.<p>ಶಾಸಕ ರಘುಮೂರ್ತಿ ಅವರಿಗೆ ಸಚಿವ ಸ್ಥಾನ ಕೈತಪ್ಪಿದ್ದರಿಂದ ಚಳ್ಳಕೆರೆ ನಗರಸಭೆಯ 16 ಕಾಂಗ್ರೆಸ್ ಸದಸ್ಯರು ರಾಜೀನಾಮೆ ನೀಡಲು ಮುಂದಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷ ಸ್ಥಾನವನ್ನು ನಿರಾಕರಿಸಲು ತೀರ್ಮಾನಿಸಿರುವ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಸಚಿವ ಸ್ಥಾನ ಸಿಗುವರೆಗೂ ಶಾಸಕರಾಗಿಯಷ್ಟೇ ಮುಂದುವರಿಯುವುದಾಗಿ ಪ್ರಕಟಿಸಿದ್ದಾರೆ.</p>.<p>‘ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದೆ. ಸಂಪುಟ ವಿಸ್ತರಣೆಯ ಸಂದರ್ಭದಲ್ಲಿ ಅವಕಾಶ ಸಿಗದಿರುವುದರಿಂದ ಬೇಸರವಾಗಿದೆ. ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನವನ್ನು ಒಪ್ಪಿಕೊಳ್ಳುವುದಿಲ್ಲ. ಶಾಸಕನಾಗಿಯೇ ಇರುತ್ತೇನೆ’ ಎಂದು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.</p>.<p>‘ಸಚಿವ ಸ್ಥಾನ ಕೈತಪ್ಪಿದ್ದರಿಂದ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗುವುದಿಲ್ಲ. ಮತ್ತೊಬ್ಬರಂತೆ ಎಲ್ಲಿಗೂ ಹೋಗುವುದಿಲ್ಲ. ಪಕ್ಷಕ್ಕೆ ನಿಷ್ಠನಾಗಿದ್ದು, ಮುಖಂಡರಿಗೆ ಮನವರಿಕೆ ಮಾಡಿಕೊಡಲು ಪ್ರಯತ್ನಿಸುತ್ತೇನೆ. ಚಿತ್ರದುರ್ಗ ಜಿಲ್ಲೆಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಗಮನ ಸೆಳೆಯುತ್ತೇನೆ’ ಎಂದು ಹೇಳಿದರು.</p>.<p>ಶಾಸಕ ರಘುಮೂರ್ತಿ ಅವರಿಗೆ ಸಚಿವ ಸ್ಥಾನ ಕೈತಪ್ಪಿದ್ದರಿಂದ ಚಳ್ಳಕೆರೆ ನಗರಸಭೆಯ 16 ಕಾಂಗ್ರೆಸ್ ಸದಸ್ಯರು ರಾಜೀನಾಮೆ ನೀಡಲು ಮುಂದಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>