ಕಲಬುರಗಿ: ರೆಡ್ ಬರ್ಡ್ ಏವಿಯೇಷನ್ ಅಕಾಡೆಮಿಯ ತರಬೇತಿ ವಿಮಾನ ಚಿತ್ತಾಪುರ ತಾಲ್ಲೂಕಿನ ಪೇಟೆ ಸೀರೂರ್ ಗ್ರಾಮದ ಜಮೀನೊಂದರಲ್ಲಿ ಭಾನುವಾರ ತುರ್ತು ಭೂಸ್ಪರ್ಶ ಮಾಡಿದೆ.
ಎಂಜಿನ್ನಲ್ಲಿ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿಮಾನ ತುರ್ತಾಗಿ ಇಳಿಯಬೇಕಾಯಿತು. ವಿಮಾನದಲ್ಲಿದ್ದ ಇಬ್ಬರೂ ಸುರಕ್ಷಿತವಾಗಿದ್ದು, ವಿಮಾನಕ್ಕೂ ಹಾನಿಯಾಗಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
‘ಕಲಬುರಗಿ ವಿಮಾನ ನಿಲ್ದಾಣದಿಂದ ತರಬೇತು ವಿಮಾನವು ಟೇಕಾಫ್ ಆಗಿದ್ದ ಕೆಲವು ನಿಮಿಷಗಳಲ್ಲಿ ಎಂಜಿನ್ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. ತಕ್ಷಣವೇ ಎಚ್ಚತ್ತ ಪೈಲೆಟ್ ವಿಮಾನವನ್ನು ಪೇಟೆ ಸೀರೂರ್ ಗ್ರಾಮದ ಜಮೀನಿನಲ್ಲಿ ತುರ್ತು ಭೂಸ್ಪರ್ಶ ಮಾಡಿದರು. ಪೈಲೆಟ್ ಇನ್ಸ್ಟೆಕ್ಟರ್ ಮತ್ತು ತರಬೇತಿ ನಿರತ ಅಭ್ಯರ್ಥಿ ಸುರಕ್ಷಿತವಾಗಿದ್ದಾರೆ’ ಎಂದು ವಿಮಾನ ನಿಲ್ದಾಣದ ನಿರ್ದೇಶಕ ಡಾ. ಚಿಲಕಾ ಮಹೇಶ ‘ಪ್ರಜಾವಾಣಿ’ಗೆ ತಿಳಿಸಿದರು.