<p><strong>ಬೆಂಗಳೂರು:</strong>ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಜಾತ್ಯತೀತ ಜನತಾ ದಳ (ಜೆಡಿಎಸ್) ಬೆಂಬಲಿತ ಮಂಗಳಮುಖಿ ಮಮತಾ ವಿಜಯ ದಾಖಲಿಸಿದ್ದರು.</p>.<p>ಇದನ್ನು ಉಲ್ಲೇಖ ಮಾಡಿರುವ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಲಿಂಗತ್ವ ಅಲ್ಪ ಸಂಖ್ಯಾತರ ಸಬಲೀಕರಣದತ್ತ ಜೆಡಿಎಸ್ ಇಟ್ಟ ಮೊದಲ ಹೆಜ್ಜೆ ಇದಾಗಿದೆ ಎಂದು ಹೇಳಿದ್ದಾರೆ.</p>.<p>ಚನ್ನಪಟ್ಟಣದ ಕೂಡ್ಲೂರು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲದೊಂದಿಗೆ ಸ್ಪರ್ಧಿಸಿದ್ದ ಮಂಗಳಮುಖಿ ಮಮತಾ ಗೆಲುವು ಸಾಧಿಸಿದ್ದರು. ಅವರಿಗೆ ಅಭಿನಂದನೆ ಸಲ್ಲಿಸಿರುವ ಕುಮಾರಸ್ವಾಮಿ, ಸಮುದಾಯದ ಪ್ರತಿನಿಧಿಯಾಗಿ ಮಮತಾ ಗುರುತಿಸಿಕೊಳ್ಳಲಿ ಎಂದು ಶುಭ ಹಾರೈಸಿದರು.</p>.<p>ಇದನ್ನೂ ಓದಿ:<a href="https://www.prajavani.net/karnataka-news/smart-city-project-should-be-completed-early-cm-bs-yediyurappa-insisted-officers-792449.html" itemprop="url">ಸ್ಮಾರ್ಟ್ ಸಿಟಿ ಯೋಜನೆ ಶೀಘ್ರವೇ ಪೂರ್ಣಗೊಳಿಸಿ; ಅಧಿಕಾರಿಗಳಿಗೆ ಸಿಎಂ ಸೂಚನೆ </a></p>.<p>ಸಾಮಾಜಿಕವಾಗಿ ತಿರಸ್ಕಾರಕ್ಕೊಳಗಾದ ವರ್ಗವೊಂದರಕ್ಕೆ ಬೆಂಬಲವಾಗಿ ನಿಂತಿದ್ದಕ್ಕೆ ಹಮ್ಮೆ ಇದೆ. ಇದು ಲಿಂಗತ್ವ ಅಲ್ಪಸಂಖ್ಯಾತರ ಕಲ್ಯಾಣದ ಹೆಜ್ಜೆ ಎಂದು ಕುಮಾರಸ್ವಾಮಿ ತಿಳಿಸಿದರು.</p>.<p>ಇದಕ್ಕೂ ಮೊದಲು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷವು ಗಮನಾರ್ಹ ಸಾಧನೆ ಮಾಡಿದೆ. ರಾಜಕೀಯ ಪ್ರತಿಕೂಲ ಪರಿಸ್ಥಿತಿಯ ನಡುವೆಯೂ ಕಾರ್ತಕರ್ತರ ಕೆಚ್ಚೆದೆಯ ಹೋರಾಟ ತೋರಿದರ ಫಲವಾಗಿಯೇ ನಮ್ಮ ಅಭ್ಯರ್ಥಿಗಳು ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ ಎಂದು ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಜಾತ್ಯತೀತ ಜನತಾ ದಳ (ಜೆಡಿಎಸ್) ಬೆಂಬಲಿತ ಮಂಗಳಮುಖಿ ಮಮತಾ ವಿಜಯ ದಾಖಲಿಸಿದ್ದರು.</p>.<p>ಇದನ್ನು ಉಲ್ಲೇಖ ಮಾಡಿರುವ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಲಿಂಗತ್ವ ಅಲ್ಪ ಸಂಖ್ಯಾತರ ಸಬಲೀಕರಣದತ್ತ ಜೆಡಿಎಸ್ ಇಟ್ಟ ಮೊದಲ ಹೆಜ್ಜೆ ಇದಾಗಿದೆ ಎಂದು ಹೇಳಿದ್ದಾರೆ.</p>.<p>ಚನ್ನಪಟ್ಟಣದ ಕೂಡ್ಲೂರು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲದೊಂದಿಗೆ ಸ್ಪರ್ಧಿಸಿದ್ದ ಮಂಗಳಮುಖಿ ಮಮತಾ ಗೆಲುವು ಸಾಧಿಸಿದ್ದರು. ಅವರಿಗೆ ಅಭಿನಂದನೆ ಸಲ್ಲಿಸಿರುವ ಕುಮಾರಸ್ವಾಮಿ, ಸಮುದಾಯದ ಪ್ರತಿನಿಧಿಯಾಗಿ ಮಮತಾ ಗುರುತಿಸಿಕೊಳ್ಳಲಿ ಎಂದು ಶುಭ ಹಾರೈಸಿದರು.</p>.<p>ಇದನ್ನೂ ಓದಿ:<a href="https://www.prajavani.net/karnataka-news/smart-city-project-should-be-completed-early-cm-bs-yediyurappa-insisted-officers-792449.html" itemprop="url">ಸ್ಮಾರ್ಟ್ ಸಿಟಿ ಯೋಜನೆ ಶೀಘ್ರವೇ ಪೂರ್ಣಗೊಳಿಸಿ; ಅಧಿಕಾರಿಗಳಿಗೆ ಸಿಎಂ ಸೂಚನೆ </a></p>.<p>ಸಾಮಾಜಿಕವಾಗಿ ತಿರಸ್ಕಾರಕ್ಕೊಳಗಾದ ವರ್ಗವೊಂದರಕ್ಕೆ ಬೆಂಬಲವಾಗಿ ನಿಂತಿದ್ದಕ್ಕೆ ಹಮ್ಮೆ ಇದೆ. ಇದು ಲಿಂಗತ್ವ ಅಲ್ಪಸಂಖ್ಯಾತರ ಕಲ್ಯಾಣದ ಹೆಜ್ಜೆ ಎಂದು ಕುಮಾರಸ್ವಾಮಿ ತಿಳಿಸಿದರು.</p>.<p>ಇದಕ್ಕೂ ಮೊದಲು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷವು ಗಮನಾರ್ಹ ಸಾಧನೆ ಮಾಡಿದೆ. ರಾಜಕೀಯ ಪ್ರತಿಕೂಲ ಪರಿಸ್ಥಿತಿಯ ನಡುವೆಯೂ ಕಾರ್ತಕರ್ತರ ಕೆಚ್ಚೆದೆಯ ಹೋರಾಟ ತೋರಿದರ ಫಲವಾಗಿಯೇ ನಮ್ಮ ಅಭ್ಯರ್ಥಿಗಳು ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ ಎಂದು ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>