ಏ.1ರಂದು ನೌಕರರು ತೋಳಿಗೆ ಕಪ್ಪುಪಟ್ಟಿ ಕಟ್ಟಿಕೊಂಡು ಕರ್ತವ್ಯ ನಿರ್ವಹಿಸುವ ಮೂಲಕ ಸಾರ್ವಜನಿಕರು ಮತ್ತು ಸರ್ಕಾರದ ಗಮನ ಸೆಳೆಯಲಿದ್ದಾರೆ. ಏ.2ರಂದು ಸಾರ್ವಜನಿಕ ಪ್ರದೇಶಗಳಲ್ಲಿ ಕಾಫಿ, ಟೀ, ಬಜ್ಜಿ, ಬೋಂಡ ತಯಾರಿಸಿ ಮಾರಾಟ ಮಾಡಲಿದ್ದಾರೆ. 3ರಂದು ನೌಕರರು ಮತ್ತು ಕುಟುಂಬ ಸದಸ್ಯರು ಎಲ್ಲಾ ನಗರಗಳ ಮುಖ್ಯ ವೃತ್ತಗಳಲ್ಲಿ ಮಾನವ ಸರಪಳಿ ನಿರ್ಮಿಸಿ ಭಿತ್ತಿ ಪತ್ರ ಪ್ರದರ್ಶನ ಮಾಡುವರು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ ತಿಳಿಸಿದೆ.