<p><strong>ಹುಬ್ಬಳ್ಳಿ:</strong> ಸಾರಿಗೆ ನೌಕರರಿಗೆ ನೀಡಿದ ಭರವಸೆಗಳನ್ನು ಸರ್ಕಾರ ಈಡೇರಿಸದ ಕಾರಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ ಏಪ್ರಿಲ್ 7ರಿಂದ ರಾಜ್ಯದಾದ್ಯಂತ ಬಸ್ ಸಂಚಾರ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಂಡಿದೆ ಎಂದು ಕೂಟದ ಗೌರವಾಧ್ಯಕ್ಷ ಪಿ.ಎಚ್. ನೀರಲಕೇರಿ ಹೇಳಿದರು.</p>.<p>ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ನೌಕರರು ಮುಷ್ಕರ ನಡೆಸಿದಾಗ ಸರ್ಕಾರ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿತ್ತು. ಅದಾಗಿ ಮೂರು ತಿಂಗಳು ಕಳೆದರೂ ಒಂದೇ ಒಂದು ಬೇಡಿಕೆ ಈಡೇರಿಸಿಲ್ಲ. ಈ ಹಿನ್ನೆಲೆಯಲ್ಲಿ ಸಾರಿಗೆ ನೌಕರರು ಒಗ್ಗಟ್ಟಿನಿಂದ ಮುಷ್ಕರ ನಡೆಸಲು ಮುಂದಾಗಿದ್ದಾರೆ ಎಂದರು.</p>.<p>ಈಗಾಗಲೇ ವಿವಿಧ ರೀತಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಏ. 6ರಂದು ನೌಕರರು ಕುಟುಂಬ ಸದಸ್ಯರೊಂದಿಗೆ ಜಿಲ್ಲೆಯ ಪ್ರಮುಖ ವೃತ್ತದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ. ಏ .1ರಂದು ಕಚೇರಿಯಲ್ಲಿ ನೌಕರರು ತೋಳಿಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಪ್ರತಿಭಟಿಸಿದ್ದಾರೆ. ಬೇಡಿಕೆ ಈಡೇರುವವರೆಗೂ ಕಾನೂನ ಅಡಿಯಲ್ಲಿಯೇ ಪ್ರತಿಭಟನೆ ನಡೆಸುತ್ತೇವೆ. ಸಾರ್ವಜನಿಕರಿಗೆ ಅನಾನುಕೂಲ ಮಾಡಬೇಕೆನ್ನುವ ಉದ್ದೇಶ ನಮ್ಮದಲ್ಲ. ನಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕೆನ್ನುವುದು ಇದರ ಉದ್ದೇಶ ಎಂದು ಹೇಳಿದರು.</p>.<p>ಆರನೇ ವೇತನ ಆಯೋಗ, ಅಂತರ್ ನಿಗಮ ವರ್ಗಾವಣೆ ಜಾರಿಯಾಗಬೇಕು. ಮೇಲಾಧಿಕಾರಿಗಳಿಂದ ಆಗುತ್ತಿರುವ ಕಿರುಕುಳ ತಪ್ಪಿಸಬೇಕು. ಕೋವಿಡ್'ನಿಂದ ಮೃತಪಟ್ಟ ನೌಕರರ ಕುಟುಂಬಕ್ಕೆ ₹ 30 ಲಕ್ಷ ಪರಿಹಾರ ನೀಡಬೇಕು. ಎರಡು ವರ್ಷದ ತರಬೇತಿಯನ್ನು ಒಂದು ವರ್ಷಕ್ಕೆ ಕಡಿತಗೊಳಿಸಬೇಕು ಎಂದು ಆಗ್ರಹಿಸಿದರು.</p>.<p>ಹಿಂದೆ ಪ್ರತಿಭಟನೆ, ಮುಷ್ಕರ ನಡೆದಾಗ ನಮ್ಮಲ್ಲಿ ಸಂಘಟನೆ ಇರಲಿಲ್ಲ. ಈಗ ನಾವೆಲ್ಲರೂ ಒಂದಾಗಿ ಸಾರಿಗೆ ನೌಕರರ ಒಕ್ಕೂಟ ರಚಿಸಿಕೊಂಡಿದ್ದೇವೆ. ಒಮ್ಮತದ ಅಭಿಪ್ರಾಯದ ಮೇರೆಗೆ ಮುಷ್ಕರ ಹಮ್ಮಿಕೊಂಡಿದ್ದೇವೆ ಎಂದರು.</p>.<p>ನೌಕರರ ಒಕ್ಕೂಟದ ಧಾರವಾಡ ವಿಭಾಗದ ಪದಾಧಿಕಾರಿಗಳಾದ ಬಿ.ಎಸ್. ಕಮ್ಮಾರ, ಬಾಳು ಟಿ., ಚನ್ನಬಸವ ತರ್ಲಘಟ್ಟ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಸಾರಿಗೆ ನೌಕರರಿಗೆ ನೀಡಿದ ಭರವಸೆಗಳನ್ನು ಸರ್ಕಾರ ಈಡೇರಿಸದ ಕಾರಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ ಏಪ್ರಿಲ್ 7ರಿಂದ ರಾಜ್ಯದಾದ್ಯಂತ ಬಸ್ ಸಂಚಾರ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಂಡಿದೆ ಎಂದು ಕೂಟದ ಗೌರವಾಧ್ಯಕ್ಷ ಪಿ.ಎಚ್. ನೀರಲಕೇರಿ ಹೇಳಿದರು.</p>.<p>ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ನೌಕರರು ಮುಷ್ಕರ ನಡೆಸಿದಾಗ ಸರ್ಕಾರ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿತ್ತು. ಅದಾಗಿ ಮೂರು ತಿಂಗಳು ಕಳೆದರೂ ಒಂದೇ ಒಂದು ಬೇಡಿಕೆ ಈಡೇರಿಸಿಲ್ಲ. ಈ ಹಿನ್ನೆಲೆಯಲ್ಲಿ ಸಾರಿಗೆ ನೌಕರರು ಒಗ್ಗಟ್ಟಿನಿಂದ ಮುಷ್ಕರ ನಡೆಸಲು ಮುಂದಾಗಿದ್ದಾರೆ ಎಂದರು.</p>.<p>ಈಗಾಗಲೇ ವಿವಿಧ ರೀತಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಏ. 6ರಂದು ನೌಕರರು ಕುಟುಂಬ ಸದಸ್ಯರೊಂದಿಗೆ ಜಿಲ್ಲೆಯ ಪ್ರಮುಖ ವೃತ್ತದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ. ಏ .1ರಂದು ಕಚೇರಿಯಲ್ಲಿ ನೌಕರರು ತೋಳಿಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಪ್ರತಿಭಟಿಸಿದ್ದಾರೆ. ಬೇಡಿಕೆ ಈಡೇರುವವರೆಗೂ ಕಾನೂನ ಅಡಿಯಲ್ಲಿಯೇ ಪ್ರತಿಭಟನೆ ನಡೆಸುತ್ತೇವೆ. ಸಾರ್ವಜನಿಕರಿಗೆ ಅನಾನುಕೂಲ ಮಾಡಬೇಕೆನ್ನುವ ಉದ್ದೇಶ ನಮ್ಮದಲ್ಲ. ನಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕೆನ್ನುವುದು ಇದರ ಉದ್ದೇಶ ಎಂದು ಹೇಳಿದರು.</p>.<p>ಆರನೇ ವೇತನ ಆಯೋಗ, ಅಂತರ್ ನಿಗಮ ವರ್ಗಾವಣೆ ಜಾರಿಯಾಗಬೇಕು. ಮೇಲಾಧಿಕಾರಿಗಳಿಂದ ಆಗುತ್ತಿರುವ ಕಿರುಕುಳ ತಪ್ಪಿಸಬೇಕು. ಕೋವಿಡ್'ನಿಂದ ಮೃತಪಟ್ಟ ನೌಕರರ ಕುಟುಂಬಕ್ಕೆ ₹ 30 ಲಕ್ಷ ಪರಿಹಾರ ನೀಡಬೇಕು. ಎರಡು ವರ್ಷದ ತರಬೇತಿಯನ್ನು ಒಂದು ವರ್ಷಕ್ಕೆ ಕಡಿತಗೊಳಿಸಬೇಕು ಎಂದು ಆಗ್ರಹಿಸಿದರು.</p>.<p>ಹಿಂದೆ ಪ್ರತಿಭಟನೆ, ಮುಷ್ಕರ ನಡೆದಾಗ ನಮ್ಮಲ್ಲಿ ಸಂಘಟನೆ ಇರಲಿಲ್ಲ. ಈಗ ನಾವೆಲ್ಲರೂ ಒಂದಾಗಿ ಸಾರಿಗೆ ನೌಕರರ ಒಕ್ಕೂಟ ರಚಿಸಿಕೊಂಡಿದ್ದೇವೆ. ಒಮ್ಮತದ ಅಭಿಪ್ರಾಯದ ಮೇರೆಗೆ ಮುಷ್ಕರ ಹಮ್ಮಿಕೊಂಡಿದ್ದೇವೆ ಎಂದರು.</p>.<p>ನೌಕರರ ಒಕ್ಕೂಟದ ಧಾರವಾಡ ವಿಭಾಗದ ಪದಾಧಿಕಾರಿಗಳಾದ ಬಿ.ಎಸ್. ಕಮ್ಮಾರ, ಬಾಳು ಟಿ., ಚನ್ನಬಸವ ತರ್ಲಘಟ್ಟ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>